Homeಅಂಕಣಗಳು`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?'

`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?’

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

- Advertisement -
- Advertisement -

ಈ ಹಳೆ ಮೈಸೂರು ಕಡೆ ಕೆಲಸ ಇರಲಾರದೆ ರಿಕಾಮಿ ಅಡ್ಡಾಡೋ ಹುಡುಗರಿಗೆ ಪಡ್ಡೆ ಹೈಕಳು ಅಂತಾರ. ಅದನ್ನ ಅಖಂಡ ಕರುನಾಡಿಗೆ ಗೊತ್ತಾಗೋ ಹಂಗ ಮಾಡಿದವರು ಯಾರಪಾ ಅಂದ್ರ ಪುರಾಣದ ಕಟ್ಟಿಯ ವಾಟಿಸ್ಸೆ ಮತ್ತು ಜುಮ್ಮಿ.

ಇಂತಹ ಪಡ್ಡೆ ಹೈಕಳುಗಳು, ಸುಮಾರು 80 ರ ದಶಕದಾಗ ಪ್ರೇಮಲೋಕ ಅಂತ ಒಂದು ಪಿಚ್ಛರು ಫುಲ್ ಫೇಮಸ್ ಮಾಡಿದ್ರು. ಅದು ಫೇಮಸ್ ಚಲನ ಚಿತ್ರ ನಿರ್ಮಾಪಕ ಎನ್ ವೀರಸ್ವಾಮಿ ಅವರ ಮಗ ರವಿ ಚಂದ್ರನ್ನ ಭಾರಿ ಫೇಮಸ್ ಮಾಡಿತು. ಅದು ‘ಗ್ರೀಸ್ ಟೂ’ ಅನ್ನೋ ಇಂಗ್ಲಿಷ್ ಚಿತ್ರದ ಕಾಪಿ ಅಂತ ನಮ್ಮೂರಿಂದ ಹುಬ್ಬಳ್ಳಿಗೆ ಹೋಗಿ ಪಿಚ್ಛರು ನೋಡಿ ಬಂದ ದೊಡ್ಡ ಹುಡುಗರೂ ಹೇಳಾಕ ಹತ್ತಿದ್ದರು. ನಮಗ ಅದು ಗೊತ್ತಾಗದ ಹೋಗಿ ನಾವು ಅದು ಕ್ರಿಸ್ಟೋ ಅನ್ನೋ ಪಿಚ್ಛರು ಅಂತ ತಪ್ಪು ತಪ್ಪು ಹೇಳತಿದ್ದಿವಿ.

ರವಿ ಅಣ್ಣಾ ಅವರು ತಮ್ಮ ಚಿತ್ರದ ಒರಿಜಿನಾಲಿಟಿ ಹಾಳಾಗಬಾರ್ದು ಅಂತ ಹೇಳಿ ಪ್ರೇಮ ಲೋಕದ `ಯಾರಿವನು ಈ ಮನ್ಮಥನು’ ಅನ್ನೋ ಹಾಡನ್ನು ಗ್ರೀಸು ಟೂ ಚಿತ್ರದ `ಹೂ ಈಸ್ ದ್ಯಾಟ ಗಾಯ್’ ಅನ್ನೋ ಹಾಡಿನ ಹಂಗನ ಚಿತ್ರೀಕರಣ ಮಾಡಿದ್ದರು. ಯಾರಿಗೂ ಯಾವ ಸಂದೇಹ ಇರಬಾರದು ಅಂತ ಅವರ ಉದ್ದೇಶ ಆಗಿತ್ತು ಅನ್ನೋದು ಆಮ್ಯಾಲೆ ಗೊತ್ತ ಆತು. ಅದರಾಗ ಆ ಹೀರೋ ಮೈಕೆಲ್ ಒಂದು ಬೈಕು ಹತ್ತಿಕೊಂಡ ಬಂದ ಪುಂಡರಿಗೆ ಹೊಡೀತಾನ, ಇದರಾಗ ರವಿಚಂದ್ರನ ಅವರು ಹಂಗ ತಮ್ಮ ಮಾರಿ ಮುಚ್ಚಿಕೊಂಡರೂ ಗೊತ್ತಾಗೋ ಹಂಗ ಮೇಕ್ ಅಪ್ ಮಾಡಿಕೊತಾನ. ಹುಡುಗಿಯರ ಮುಂದ ಗೂಂಡಾಗಳಿಗೆ ಹೊಡೀತಾನ. ಅದರಾಗ ಒಂದು ಸಾಲು ಬರತೇತಿ.

“ನೀ ಯಾರ ಅಂತ ಗೊತ್ತಿರದಾಗ ನೀ ಎಲ್ಲರಿಗೂ ಬೇಕು
ನೀನು ರಹಸ್ಯ ಆಗಿ ಇದ್ದಷ್ಟೂ ಭಾಳ ದೂರ ಹೋಗ್ತಿ
ನಿನ್ನ ಸುತ್ತ ಇರೋರೆಲ್ಲಾ ನೀ ಭಾಳ ದೊಡ್ಡ ಸ್ಟಾರ್ ಅಂತ ತಿಳ್ಕೊಂತಾರೂ..” ಈ ಸಾಲು ಭಾಷಾಂತರ ಮಾಡೋದು ಹಂಸಲೇಖ ಅವರು ಮರ್ತು ಬಿಟ್ಟಿದ್ದರು ಅಂತ ಕಾಣತೇತಿ.

ಈ ಸಾಲು ಈಗ ಯಾಕ ನೆನಪು ಆಗಾಕ ಹತ್ತೇತಿ ಅಂದ್ರ ನಮ್ಮ ಬೋಬಡೆ ಸಾಹೇಬರು ನಾಗಪುರದಾಗ ಒಬ್ಬ ಮರಿ ಪುಢಾರಿ ಅವರ ಮೋಟರ್ ಸೈಕಲ್ಲು ಮ್ಯಾಲೆ ಹತ್ತಿ ಒಂದ್ ರೌಂಡ್ ಹೋಗಿ ಬಂದಾರ. ಅದರ ಫೋಟೋ ತಗದು ಯಾರೋ ಸಮಾಜ ವಿರೋಧಿ ಮಾಧ್ಯಮದಾಗ ಹಾಕ್ಯಾರ.

ಅದು ಹಾರಲೆ ಡೇವಿಡ್ ಸನ್ ಬೈಕು. ಹಂಗ ಅಂತ ಅದರ ಮ್ಯಾಲೆ ಯಾರ ಕೂತು ಹಾರಲೇ ಅಂತ ಅಂದ್ರ ಅದು ಹಾರೋದಿಲ್ಲ. ಅದು ಬರೇ ನೆಲೆದ ಮ್ಯಾಲೆ ಓಡೋ ಗಾಡಿ. ಗ್ರೀಸು ಟೂ ದಾಗ ಉಪಯೋಗಿಸಿದ ಗಾಡಿ ಹೆಸರು ಹೋಂಡಾ ಎಳದಾಟ (ಸ್ಕರಾಂಬಲರ್). ರವಿಚಂದ್ರನ ಅವರು ಓಡಿಸಿದ್ದು, ಸುಜೂಕಿ ಅಂತ ಸ್ಟಿಕ್ಕರು ಹಚ್ಚಿದ ಯಮಹ ಅಂತ ಒಂದು ಊಹೆ. ಇರಲಿ.

ಆದರ ಈ ನಾಗಪುರದ ಗಾಡಿ ಐತೆಲ್ಲ, ಅದು ಅಂತಾ- ಇಂಥಾ ಬೈಕು ಅಲ್ಲ. ಅದರ ಬೆಲೆ ಸುಮಾರು ಐದು ಲಕ್ಷ ದಿಂದ 50 ಲಕ್ಷದ ವರೆಗೂ. ಇದು ಬರೀ ಒಂದು ಬೈಕ್ನ ಬೆಲೆ. ನೀವು ಬೈಕು ಶೋ ರೂಮಿನ ಬೆಲೆ ಅಂತ ಅಂದುಕೋಂಡೀರಿ, ಮತ್ತ.

ಆ ಪಟ ನೋಡಿದ ನಮ್ಮ ಪ್ರಶಾಂತ್ ಭೂಷಣ ವಕೀಲ ಸಾಹೇಬರು “ನ್ಯಾಯಾಧೀಶರು ಅದವರು ಹಿಂಗೆಲ್ಲ ಯಾರದರ ಗಾಡಿ ಇಸಕೊಂಡು ಓಡಸಬಾರದು. ಅದರಾಗ ರಾಜಕೀಯ ವ್ಯಕ್ತಿಗಳ ಕಡೆ ಇಸಕೋಬಾರದು,” ಅಂತ ಟ್ವೀಟ್ ಮಾಡಿದರು.

ಅಲ್ಲಿಂದ ಶುರು ಆತು ಬೋಬಡೆ ಸಾಹೇಬರ ತಿರಸ್ಕಾರದ ಪ್ರಕರಣ. ಅವರು ಭೂಷಣ ಅವರ ಮ್ಯಾಲಿನ ಹಳೇ ನ್ಯಾಯನಿಂದನೆ ಪ್ರಕರಣ ಎಲ್ಲಾ ತೆಗಿಸಿದರು.

ಈ ನ್ಯಾಯಾಂಗನಿಂದನೆ ಅಂದ್ರ ಖರೆ ಏನು? ಅದಕ್ಕ ಕಂಟೆಮ್ಟ ಅಂತ ಅಂತಾರು.
ಇಂಗ್ಲಿಷ್ನ ಕಂಟೆಮ್ಟ ಅನ್ನೋ ಪದಕ್ಕ ತಿರಸ್ಕಾರ, ಅನಾದರ, ಅಗೌರವ, ನಿಂದನೆ ಅನ್ನೋ ಅರ್ಥ ಅದಾವು.

ಕಾನೂನುತಜ್ಞ ಹಾಲಸಬರಿ ಅವರ ಪ್ರಕಾರ, ನ್ಯಾಯನಿರ್ಣಯ ಪ್ರಕ್ರಿಯೆಗೆ ಅಡ್ಡಿ ಮಾಡೋ ಯಾವುದೇ ಲಿಖಿತ, ಅಥವಾ ಅಲಿಖಿತ ಶಬ್ದ, ನ್ಯಾಯಾಂಗನಿಂದನೆ ಅನ್ನಿಸಿಕೊಳ್ಳತದ.

ಇನ್ನೂ ಭಾರತೀಯ ವಕೀಲರ ಕಾಯಿದೆ ಪ್ರಕಾರ, “ಒಬ್ಬ ವ್ಯಕ್ತಿ – ಅವನು ಪ್ರಕರಣದ ಕಕ್ಷಿದಾರ ಇರಬಹುದು ಅಥವಾ ಹೊರಗಿನವ ಆಗಿರಬಹುದು, ಅವನು ನ್ಯಾಯಾಧೀಶನ ಅಧಿಕಾರ ಕುಗ್ಗಿಸುವಂತೆ ಅಥವಾ ಅವನು ಪ್ರಕರಣ ನಡೆಸೋ ರೀತಿಯ ಬಗ್ಗೆ ಅಪಹಾಸ್ಯ ಮಾಡಿದರೆ, ವಿನಾಕಾರಣ ಟೀಕೆ ಮಾಡಿದರೆ, ಸಾಕ್ಷಿಗಳು, ಇತರ ಕಕ್ಷಿದಾರರು ಹಾಗೂ ಇತರರು ಪ್ರಕರಣ ಮುಗಿಯುವ ಮುಂಚೆ ಅದರ ಬಗ್ಗೆ ತಪ್ಪು ತಿಳಿದುಕೊಳ್ಳುವ ಹಾಗೆ ಸಾರ್ವಜನಿಕರಲ್ಲಿ, ಮಾಧ್ಯಮದಲ್ಲಿ ದುರಭಿಪ್ರಾಯ ಮೂಡಿಸಿದರೆ, ನ್ಯಾಯದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೆ, ಸಬೂತುಗಳಿಲ್ಲದೇ ನ್ಯಾಯಾಲಯದಲ್ಲಿ ಹಗರಣ ಆಗಿದೆ ಎಂಬ ಸುಳ್ಳುಗಳನ್ನು ಹಬ್ಬಿಸಿದರೆ” ಅದು ನ್ಯಾಯಾಂಗ ನಿಂದನೆ.

ಆದರೆ, ರಾಜಕೀಯ ನಿರ್ಲಿಪ್ತತೆಯನ್ನು ಮೈಗೂಡಿಸಿಕೊಳ್ಳಬೇಕಾದ ನ್ಯಾಯಾಧೀಶರು ಪುಢಾರಿ ರಾಜಕಾರಣೀಯ ಬೈಕು ಇಸಿದುಕೊಂಡು ಒಂದು ರೌಂಡ್ ಹೊಡಿಯಬಾರದು ಅನ್ನೋ ಮಾತು ನ್ಯಾಯಾಂಗನಿಂದನೆ ಆಗತೇತಿ ಅಂತ ಎಲ್ಲೂ ಇಲ್ಲ. ಅಂತರರಾಷ್ಟ್ರೀಯ ಕಾನೂನುದಾಗೂ ಇಲ್ಲ, ಭಾರತದ ಕಾನೂನುದಾಗೂ ಇಲ್ಲ.

ಮಜಾ ಅಂದ್ರ ನ್ಯಾಯಾಧೀಶರು ಫೋಟೋ ತಗದವರಿಗೆ ಏನೂ ಅಂದಿಲ್ಲ. ಅದರ ಬಗ್ಗೆ ಟಿಪ್ಪಣಿ ಮಾಡಿದ ವಕೀಲರಿಗೆ ಮಾತ್ರ ಬರೋಬ್ಬರಿ ಬಿಗಿ ಹಚ್ಚಿದಾರು.

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

ತಮ್ಮ ಕ್ರಿಯೆ- ಖಯಾಲಿಗಳನ್ನ ಜನರಿಗೆ ತೋರಿಸಿ ನಮ್ಮನ್ನ ನಗಿಪಾಟ್ಲಿಗೆ ಒಡ್ಡಿದರೂ ಅಂತ ನ್ಯಾಯಾಧೀಶರಿಗೆ ಅನ್ನಿಸಿರಬಹುದು. ಅವರಿಗೆ ಚೀನಾ ದೇಶದ ಒಂದು ಗಾದಿ ಮಾತು ನೆನಪು ಮಾಡಿಕೊಡೋಣ.

“ನೀವು ಮಾಡಿದ್ದು ಯಾರಿಗೂ ಗೊತ್ತು ಆಗಬಾರದು ಅಂತ ನಿಮಗ ಇದ್ದರ, ಅದನ್ನ ನೀವು ಮಾಡಾಕ ಹೋಗಬಾರದು”

ನಮ್ಮ ಘನ ಸರಕಾರ ಚೀನಾ ದೇಶದ ಮೊಬಾಯಿಲು ಯಾಪುಗಳ ಮ್ಯಾಲೆ ನಿರ್ಬಂಧ ಹೇರೇತಿ. ಅಲ್ಲಿನ ಗಾದಿ ಮಾತಿನ ಮ್ಯಾಲೆ ಏನು ನಿರ್ಬಂಧ ಇಲ್ಲಲ್ಲ!, ಅಲ್ಲವೇ, ಮನೋಲ್ಲಾಸಿನಿ?


ಇದನ್ನು ಓದಿ: ಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...