Homeಅಂಕಣಗಳು`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?'

`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?’

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

- Advertisement -
- Advertisement -

ಈ ಹಳೆ ಮೈಸೂರು ಕಡೆ ಕೆಲಸ ಇರಲಾರದೆ ರಿಕಾಮಿ ಅಡ್ಡಾಡೋ ಹುಡುಗರಿಗೆ ಪಡ್ಡೆ ಹೈಕಳು ಅಂತಾರ. ಅದನ್ನ ಅಖಂಡ ಕರುನಾಡಿಗೆ ಗೊತ್ತಾಗೋ ಹಂಗ ಮಾಡಿದವರು ಯಾರಪಾ ಅಂದ್ರ ಪುರಾಣದ ಕಟ್ಟಿಯ ವಾಟಿಸ್ಸೆ ಮತ್ತು ಜುಮ್ಮಿ.

ಇಂತಹ ಪಡ್ಡೆ ಹೈಕಳುಗಳು, ಸುಮಾರು 80 ರ ದಶಕದಾಗ ಪ್ರೇಮಲೋಕ ಅಂತ ಒಂದು ಪಿಚ್ಛರು ಫುಲ್ ಫೇಮಸ್ ಮಾಡಿದ್ರು. ಅದು ಫೇಮಸ್ ಚಲನ ಚಿತ್ರ ನಿರ್ಮಾಪಕ ಎನ್ ವೀರಸ್ವಾಮಿ ಅವರ ಮಗ ರವಿ ಚಂದ್ರನ್ನ ಭಾರಿ ಫೇಮಸ್ ಮಾಡಿತು. ಅದು ‘ಗ್ರೀಸ್ ಟೂ’ ಅನ್ನೋ ಇಂಗ್ಲಿಷ್ ಚಿತ್ರದ ಕಾಪಿ ಅಂತ ನಮ್ಮೂರಿಂದ ಹುಬ್ಬಳ್ಳಿಗೆ ಹೋಗಿ ಪಿಚ್ಛರು ನೋಡಿ ಬಂದ ದೊಡ್ಡ ಹುಡುಗರೂ ಹೇಳಾಕ ಹತ್ತಿದ್ದರು. ನಮಗ ಅದು ಗೊತ್ತಾಗದ ಹೋಗಿ ನಾವು ಅದು ಕ್ರಿಸ್ಟೋ ಅನ್ನೋ ಪಿಚ್ಛರು ಅಂತ ತಪ್ಪು ತಪ್ಪು ಹೇಳತಿದ್ದಿವಿ.

ರವಿ ಅಣ್ಣಾ ಅವರು ತಮ್ಮ ಚಿತ್ರದ ಒರಿಜಿನಾಲಿಟಿ ಹಾಳಾಗಬಾರ್ದು ಅಂತ ಹೇಳಿ ಪ್ರೇಮ ಲೋಕದ `ಯಾರಿವನು ಈ ಮನ್ಮಥನು’ ಅನ್ನೋ ಹಾಡನ್ನು ಗ್ರೀಸು ಟೂ ಚಿತ್ರದ `ಹೂ ಈಸ್ ದ್ಯಾಟ ಗಾಯ್’ ಅನ್ನೋ ಹಾಡಿನ ಹಂಗನ ಚಿತ್ರೀಕರಣ ಮಾಡಿದ್ದರು. ಯಾರಿಗೂ ಯಾವ ಸಂದೇಹ ಇರಬಾರದು ಅಂತ ಅವರ ಉದ್ದೇಶ ಆಗಿತ್ತು ಅನ್ನೋದು ಆಮ್ಯಾಲೆ ಗೊತ್ತ ಆತು. ಅದರಾಗ ಆ ಹೀರೋ ಮೈಕೆಲ್ ಒಂದು ಬೈಕು ಹತ್ತಿಕೊಂಡ ಬಂದ ಪುಂಡರಿಗೆ ಹೊಡೀತಾನ, ಇದರಾಗ ರವಿಚಂದ್ರನ ಅವರು ಹಂಗ ತಮ್ಮ ಮಾರಿ ಮುಚ್ಚಿಕೊಂಡರೂ ಗೊತ್ತಾಗೋ ಹಂಗ ಮೇಕ್ ಅಪ್ ಮಾಡಿಕೊತಾನ. ಹುಡುಗಿಯರ ಮುಂದ ಗೂಂಡಾಗಳಿಗೆ ಹೊಡೀತಾನ. ಅದರಾಗ ಒಂದು ಸಾಲು ಬರತೇತಿ.

“ನೀ ಯಾರ ಅಂತ ಗೊತ್ತಿರದಾಗ ನೀ ಎಲ್ಲರಿಗೂ ಬೇಕು
ನೀನು ರಹಸ್ಯ ಆಗಿ ಇದ್ದಷ್ಟೂ ಭಾಳ ದೂರ ಹೋಗ್ತಿ
ನಿನ್ನ ಸುತ್ತ ಇರೋರೆಲ್ಲಾ ನೀ ಭಾಳ ದೊಡ್ಡ ಸ್ಟಾರ್ ಅಂತ ತಿಳ್ಕೊಂತಾರೂ..” ಈ ಸಾಲು ಭಾಷಾಂತರ ಮಾಡೋದು ಹಂಸಲೇಖ ಅವರು ಮರ್ತು ಬಿಟ್ಟಿದ್ದರು ಅಂತ ಕಾಣತೇತಿ.

ಈ ಸಾಲು ಈಗ ಯಾಕ ನೆನಪು ಆಗಾಕ ಹತ್ತೇತಿ ಅಂದ್ರ ನಮ್ಮ ಬೋಬಡೆ ಸಾಹೇಬರು ನಾಗಪುರದಾಗ ಒಬ್ಬ ಮರಿ ಪುಢಾರಿ ಅವರ ಮೋಟರ್ ಸೈಕಲ್ಲು ಮ್ಯಾಲೆ ಹತ್ತಿ ಒಂದ್ ರೌಂಡ್ ಹೋಗಿ ಬಂದಾರ. ಅದರ ಫೋಟೋ ತಗದು ಯಾರೋ ಸಮಾಜ ವಿರೋಧಿ ಮಾಧ್ಯಮದಾಗ ಹಾಕ್ಯಾರ.

ಅದು ಹಾರಲೆ ಡೇವಿಡ್ ಸನ್ ಬೈಕು. ಹಂಗ ಅಂತ ಅದರ ಮ್ಯಾಲೆ ಯಾರ ಕೂತು ಹಾರಲೇ ಅಂತ ಅಂದ್ರ ಅದು ಹಾರೋದಿಲ್ಲ. ಅದು ಬರೇ ನೆಲೆದ ಮ್ಯಾಲೆ ಓಡೋ ಗಾಡಿ. ಗ್ರೀಸು ಟೂ ದಾಗ ಉಪಯೋಗಿಸಿದ ಗಾಡಿ ಹೆಸರು ಹೋಂಡಾ ಎಳದಾಟ (ಸ್ಕರಾಂಬಲರ್). ರವಿಚಂದ್ರನ ಅವರು ಓಡಿಸಿದ್ದು, ಸುಜೂಕಿ ಅಂತ ಸ್ಟಿಕ್ಕರು ಹಚ್ಚಿದ ಯಮಹ ಅಂತ ಒಂದು ಊಹೆ. ಇರಲಿ.

ಆದರ ಈ ನಾಗಪುರದ ಗಾಡಿ ಐತೆಲ್ಲ, ಅದು ಅಂತಾ- ಇಂಥಾ ಬೈಕು ಅಲ್ಲ. ಅದರ ಬೆಲೆ ಸುಮಾರು ಐದು ಲಕ್ಷ ದಿಂದ 50 ಲಕ್ಷದ ವರೆಗೂ. ಇದು ಬರೀ ಒಂದು ಬೈಕ್ನ ಬೆಲೆ. ನೀವು ಬೈಕು ಶೋ ರೂಮಿನ ಬೆಲೆ ಅಂತ ಅಂದುಕೋಂಡೀರಿ, ಮತ್ತ.

ಆ ಪಟ ನೋಡಿದ ನಮ್ಮ ಪ್ರಶಾಂತ್ ಭೂಷಣ ವಕೀಲ ಸಾಹೇಬರು “ನ್ಯಾಯಾಧೀಶರು ಅದವರು ಹಿಂಗೆಲ್ಲ ಯಾರದರ ಗಾಡಿ ಇಸಕೊಂಡು ಓಡಸಬಾರದು. ಅದರಾಗ ರಾಜಕೀಯ ವ್ಯಕ್ತಿಗಳ ಕಡೆ ಇಸಕೋಬಾರದು,” ಅಂತ ಟ್ವೀಟ್ ಮಾಡಿದರು.

ಅಲ್ಲಿಂದ ಶುರು ಆತು ಬೋಬಡೆ ಸಾಹೇಬರ ತಿರಸ್ಕಾರದ ಪ್ರಕರಣ. ಅವರು ಭೂಷಣ ಅವರ ಮ್ಯಾಲಿನ ಹಳೇ ನ್ಯಾಯನಿಂದನೆ ಪ್ರಕರಣ ಎಲ್ಲಾ ತೆಗಿಸಿದರು.

ಈ ನ್ಯಾಯಾಂಗನಿಂದನೆ ಅಂದ್ರ ಖರೆ ಏನು? ಅದಕ್ಕ ಕಂಟೆಮ್ಟ ಅಂತ ಅಂತಾರು.
ಇಂಗ್ಲಿಷ್ನ ಕಂಟೆಮ್ಟ ಅನ್ನೋ ಪದಕ್ಕ ತಿರಸ್ಕಾರ, ಅನಾದರ, ಅಗೌರವ, ನಿಂದನೆ ಅನ್ನೋ ಅರ್ಥ ಅದಾವು.

ಕಾನೂನುತಜ್ಞ ಹಾಲಸಬರಿ ಅವರ ಪ್ರಕಾರ, ನ್ಯಾಯನಿರ್ಣಯ ಪ್ರಕ್ರಿಯೆಗೆ ಅಡ್ಡಿ ಮಾಡೋ ಯಾವುದೇ ಲಿಖಿತ, ಅಥವಾ ಅಲಿಖಿತ ಶಬ್ದ, ನ್ಯಾಯಾಂಗನಿಂದನೆ ಅನ್ನಿಸಿಕೊಳ್ಳತದ.

ಇನ್ನೂ ಭಾರತೀಯ ವಕೀಲರ ಕಾಯಿದೆ ಪ್ರಕಾರ, “ಒಬ್ಬ ವ್ಯಕ್ತಿ – ಅವನು ಪ್ರಕರಣದ ಕಕ್ಷಿದಾರ ಇರಬಹುದು ಅಥವಾ ಹೊರಗಿನವ ಆಗಿರಬಹುದು, ಅವನು ನ್ಯಾಯಾಧೀಶನ ಅಧಿಕಾರ ಕುಗ್ಗಿಸುವಂತೆ ಅಥವಾ ಅವನು ಪ್ರಕರಣ ನಡೆಸೋ ರೀತಿಯ ಬಗ್ಗೆ ಅಪಹಾಸ್ಯ ಮಾಡಿದರೆ, ವಿನಾಕಾರಣ ಟೀಕೆ ಮಾಡಿದರೆ, ಸಾಕ್ಷಿಗಳು, ಇತರ ಕಕ್ಷಿದಾರರು ಹಾಗೂ ಇತರರು ಪ್ರಕರಣ ಮುಗಿಯುವ ಮುಂಚೆ ಅದರ ಬಗ್ಗೆ ತಪ್ಪು ತಿಳಿದುಕೊಳ್ಳುವ ಹಾಗೆ ಸಾರ್ವಜನಿಕರಲ್ಲಿ, ಮಾಧ್ಯಮದಲ್ಲಿ ದುರಭಿಪ್ರಾಯ ಮೂಡಿಸಿದರೆ, ನ್ಯಾಯದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೆ, ಸಬೂತುಗಳಿಲ್ಲದೇ ನ್ಯಾಯಾಲಯದಲ್ಲಿ ಹಗರಣ ಆಗಿದೆ ಎಂಬ ಸುಳ್ಳುಗಳನ್ನು ಹಬ್ಬಿಸಿದರೆ” ಅದು ನ್ಯಾಯಾಂಗ ನಿಂದನೆ.

ಆದರೆ, ರಾಜಕೀಯ ನಿರ್ಲಿಪ್ತತೆಯನ್ನು ಮೈಗೂಡಿಸಿಕೊಳ್ಳಬೇಕಾದ ನ್ಯಾಯಾಧೀಶರು ಪುಢಾರಿ ರಾಜಕಾರಣೀಯ ಬೈಕು ಇಸಿದುಕೊಂಡು ಒಂದು ರೌಂಡ್ ಹೊಡಿಯಬಾರದು ಅನ್ನೋ ಮಾತು ನ್ಯಾಯಾಂಗನಿಂದನೆ ಆಗತೇತಿ ಅಂತ ಎಲ್ಲೂ ಇಲ್ಲ. ಅಂತರರಾಷ್ಟ್ರೀಯ ಕಾನೂನುದಾಗೂ ಇಲ್ಲ, ಭಾರತದ ಕಾನೂನುದಾಗೂ ಇಲ್ಲ.

ಮಜಾ ಅಂದ್ರ ನ್ಯಾಯಾಧೀಶರು ಫೋಟೋ ತಗದವರಿಗೆ ಏನೂ ಅಂದಿಲ್ಲ. ಅದರ ಬಗ್ಗೆ ಟಿಪ್ಪಣಿ ಮಾಡಿದ ವಕೀಲರಿಗೆ ಮಾತ್ರ ಬರೋಬ್ಬರಿ ಬಿಗಿ ಹಚ್ಚಿದಾರು.

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

ತಮ್ಮ ಕ್ರಿಯೆ- ಖಯಾಲಿಗಳನ್ನ ಜನರಿಗೆ ತೋರಿಸಿ ನಮ್ಮನ್ನ ನಗಿಪಾಟ್ಲಿಗೆ ಒಡ್ಡಿದರೂ ಅಂತ ನ್ಯಾಯಾಧೀಶರಿಗೆ ಅನ್ನಿಸಿರಬಹುದು. ಅವರಿಗೆ ಚೀನಾ ದೇಶದ ಒಂದು ಗಾದಿ ಮಾತು ನೆನಪು ಮಾಡಿಕೊಡೋಣ.

“ನೀವು ಮಾಡಿದ್ದು ಯಾರಿಗೂ ಗೊತ್ತು ಆಗಬಾರದು ಅಂತ ನಿಮಗ ಇದ್ದರ, ಅದನ್ನ ನೀವು ಮಾಡಾಕ ಹೋಗಬಾರದು”

ನಮ್ಮ ಘನ ಸರಕಾರ ಚೀನಾ ದೇಶದ ಮೊಬಾಯಿಲು ಯಾಪುಗಳ ಮ್ಯಾಲೆ ನಿರ್ಬಂಧ ಹೇರೇತಿ. ಅಲ್ಲಿನ ಗಾದಿ ಮಾತಿನ ಮ್ಯಾಲೆ ಏನು ನಿರ್ಬಂಧ ಇಲ್ಲಲ್ಲ!, ಅಲ್ಲವೇ, ಮನೋಲ್ಲಾಸಿನಿ?


ಇದನ್ನು ಓದಿ: ಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...