Homeಅಂಕಣಗಳು`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?'

`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?’

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

- Advertisement -
- Advertisement -

ಈ ಹಳೆ ಮೈಸೂರು ಕಡೆ ಕೆಲಸ ಇರಲಾರದೆ ರಿಕಾಮಿ ಅಡ್ಡಾಡೋ ಹುಡುಗರಿಗೆ ಪಡ್ಡೆ ಹೈಕಳು ಅಂತಾರ. ಅದನ್ನ ಅಖಂಡ ಕರುನಾಡಿಗೆ ಗೊತ್ತಾಗೋ ಹಂಗ ಮಾಡಿದವರು ಯಾರಪಾ ಅಂದ್ರ ಪುರಾಣದ ಕಟ್ಟಿಯ ವಾಟಿಸ್ಸೆ ಮತ್ತು ಜುಮ್ಮಿ.

ಇಂತಹ ಪಡ್ಡೆ ಹೈಕಳುಗಳು, ಸುಮಾರು 80 ರ ದಶಕದಾಗ ಪ್ರೇಮಲೋಕ ಅಂತ ಒಂದು ಪಿಚ್ಛರು ಫುಲ್ ಫೇಮಸ್ ಮಾಡಿದ್ರು. ಅದು ಫೇಮಸ್ ಚಲನ ಚಿತ್ರ ನಿರ್ಮಾಪಕ ಎನ್ ವೀರಸ್ವಾಮಿ ಅವರ ಮಗ ರವಿ ಚಂದ್ರನ್ನ ಭಾರಿ ಫೇಮಸ್ ಮಾಡಿತು. ಅದು ‘ಗ್ರೀಸ್ ಟೂ’ ಅನ್ನೋ ಇಂಗ್ಲಿಷ್ ಚಿತ್ರದ ಕಾಪಿ ಅಂತ ನಮ್ಮೂರಿಂದ ಹುಬ್ಬಳ್ಳಿಗೆ ಹೋಗಿ ಪಿಚ್ಛರು ನೋಡಿ ಬಂದ ದೊಡ್ಡ ಹುಡುಗರೂ ಹೇಳಾಕ ಹತ್ತಿದ್ದರು. ನಮಗ ಅದು ಗೊತ್ತಾಗದ ಹೋಗಿ ನಾವು ಅದು ಕ್ರಿಸ್ಟೋ ಅನ್ನೋ ಪಿಚ್ಛರು ಅಂತ ತಪ್ಪು ತಪ್ಪು ಹೇಳತಿದ್ದಿವಿ.

ರವಿ ಅಣ್ಣಾ ಅವರು ತಮ್ಮ ಚಿತ್ರದ ಒರಿಜಿನಾಲಿಟಿ ಹಾಳಾಗಬಾರ್ದು ಅಂತ ಹೇಳಿ ಪ್ರೇಮ ಲೋಕದ `ಯಾರಿವನು ಈ ಮನ್ಮಥನು’ ಅನ್ನೋ ಹಾಡನ್ನು ಗ್ರೀಸು ಟೂ ಚಿತ್ರದ `ಹೂ ಈಸ್ ದ್ಯಾಟ ಗಾಯ್’ ಅನ್ನೋ ಹಾಡಿನ ಹಂಗನ ಚಿತ್ರೀಕರಣ ಮಾಡಿದ್ದರು. ಯಾರಿಗೂ ಯಾವ ಸಂದೇಹ ಇರಬಾರದು ಅಂತ ಅವರ ಉದ್ದೇಶ ಆಗಿತ್ತು ಅನ್ನೋದು ಆಮ್ಯಾಲೆ ಗೊತ್ತ ಆತು. ಅದರಾಗ ಆ ಹೀರೋ ಮೈಕೆಲ್ ಒಂದು ಬೈಕು ಹತ್ತಿಕೊಂಡ ಬಂದ ಪುಂಡರಿಗೆ ಹೊಡೀತಾನ, ಇದರಾಗ ರವಿಚಂದ್ರನ ಅವರು ಹಂಗ ತಮ್ಮ ಮಾರಿ ಮುಚ್ಚಿಕೊಂಡರೂ ಗೊತ್ತಾಗೋ ಹಂಗ ಮೇಕ್ ಅಪ್ ಮಾಡಿಕೊತಾನ. ಹುಡುಗಿಯರ ಮುಂದ ಗೂಂಡಾಗಳಿಗೆ ಹೊಡೀತಾನ. ಅದರಾಗ ಒಂದು ಸಾಲು ಬರತೇತಿ.

“ನೀ ಯಾರ ಅಂತ ಗೊತ್ತಿರದಾಗ ನೀ ಎಲ್ಲರಿಗೂ ಬೇಕು
ನೀನು ರಹಸ್ಯ ಆಗಿ ಇದ್ದಷ್ಟೂ ಭಾಳ ದೂರ ಹೋಗ್ತಿ
ನಿನ್ನ ಸುತ್ತ ಇರೋರೆಲ್ಲಾ ನೀ ಭಾಳ ದೊಡ್ಡ ಸ್ಟಾರ್ ಅಂತ ತಿಳ್ಕೊಂತಾರೂ..” ಈ ಸಾಲು ಭಾಷಾಂತರ ಮಾಡೋದು ಹಂಸಲೇಖ ಅವರು ಮರ್ತು ಬಿಟ್ಟಿದ್ದರು ಅಂತ ಕಾಣತೇತಿ.

ಈ ಸಾಲು ಈಗ ಯಾಕ ನೆನಪು ಆಗಾಕ ಹತ್ತೇತಿ ಅಂದ್ರ ನಮ್ಮ ಬೋಬಡೆ ಸಾಹೇಬರು ನಾಗಪುರದಾಗ ಒಬ್ಬ ಮರಿ ಪುಢಾರಿ ಅವರ ಮೋಟರ್ ಸೈಕಲ್ಲು ಮ್ಯಾಲೆ ಹತ್ತಿ ಒಂದ್ ರೌಂಡ್ ಹೋಗಿ ಬಂದಾರ. ಅದರ ಫೋಟೋ ತಗದು ಯಾರೋ ಸಮಾಜ ವಿರೋಧಿ ಮಾಧ್ಯಮದಾಗ ಹಾಕ್ಯಾರ.

ಅದು ಹಾರಲೆ ಡೇವಿಡ್ ಸನ್ ಬೈಕು. ಹಂಗ ಅಂತ ಅದರ ಮ್ಯಾಲೆ ಯಾರ ಕೂತು ಹಾರಲೇ ಅಂತ ಅಂದ್ರ ಅದು ಹಾರೋದಿಲ್ಲ. ಅದು ಬರೇ ನೆಲೆದ ಮ್ಯಾಲೆ ಓಡೋ ಗಾಡಿ. ಗ್ರೀಸು ಟೂ ದಾಗ ಉಪಯೋಗಿಸಿದ ಗಾಡಿ ಹೆಸರು ಹೋಂಡಾ ಎಳದಾಟ (ಸ್ಕರಾಂಬಲರ್). ರವಿಚಂದ್ರನ ಅವರು ಓಡಿಸಿದ್ದು, ಸುಜೂಕಿ ಅಂತ ಸ್ಟಿಕ್ಕರು ಹಚ್ಚಿದ ಯಮಹ ಅಂತ ಒಂದು ಊಹೆ. ಇರಲಿ.

ಆದರ ಈ ನಾಗಪುರದ ಗಾಡಿ ಐತೆಲ್ಲ, ಅದು ಅಂತಾ- ಇಂಥಾ ಬೈಕು ಅಲ್ಲ. ಅದರ ಬೆಲೆ ಸುಮಾರು ಐದು ಲಕ್ಷ ದಿಂದ 50 ಲಕ್ಷದ ವರೆಗೂ. ಇದು ಬರೀ ಒಂದು ಬೈಕ್ನ ಬೆಲೆ. ನೀವು ಬೈಕು ಶೋ ರೂಮಿನ ಬೆಲೆ ಅಂತ ಅಂದುಕೋಂಡೀರಿ, ಮತ್ತ.

ಆ ಪಟ ನೋಡಿದ ನಮ್ಮ ಪ್ರಶಾಂತ್ ಭೂಷಣ ವಕೀಲ ಸಾಹೇಬರು “ನ್ಯಾಯಾಧೀಶರು ಅದವರು ಹಿಂಗೆಲ್ಲ ಯಾರದರ ಗಾಡಿ ಇಸಕೊಂಡು ಓಡಸಬಾರದು. ಅದರಾಗ ರಾಜಕೀಯ ವ್ಯಕ್ತಿಗಳ ಕಡೆ ಇಸಕೋಬಾರದು,” ಅಂತ ಟ್ವೀಟ್ ಮಾಡಿದರು.

ಅಲ್ಲಿಂದ ಶುರು ಆತು ಬೋಬಡೆ ಸಾಹೇಬರ ತಿರಸ್ಕಾರದ ಪ್ರಕರಣ. ಅವರು ಭೂಷಣ ಅವರ ಮ್ಯಾಲಿನ ಹಳೇ ನ್ಯಾಯನಿಂದನೆ ಪ್ರಕರಣ ಎಲ್ಲಾ ತೆಗಿಸಿದರು.

ಈ ನ್ಯಾಯಾಂಗನಿಂದನೆ ಅಂದ್ರ ಖರೆ ಏನು? ಅದಕ್ಕ ಕಂಟೆಮ್ಟ ಅಂತ ಅಂತಾರು.
ಇಂಗ್ಲಿಷ್ನ ಕಂಟೆಮ್ಟ ಅನ್ನೋ ಪದಕ್ಕ ತಿರಸ್ಕಾರ, ಅನಾದರ, ಅಗೌರವ, ನಿಂದನೆ ಅನ್ನೋ ಅರ್ಥ ಅದಾವು.

ಕಾನೂನುತಜ್ಞ ಹಾಲಸಬರಿ ಅವರ ಪ್ರಕಾರ, ನ್ಯಾಯನಿರ್ಣಯ ಪ್ರಕ್ರಿಯೆಗೆ ಅಡ್ಡಿ ಮಾಡೋ ಯಾವುದೇ ಲಿಖಿತ, ಅಥವಾ ಅಲಿಖಿತ ಶಬ್ದ, ನ್ಯಾಯಾಂಗನಿಂದನೆ ಅನ್ನಿಸಿಕೊಳ್ಳತದ.

ಇನ್ನೂ ಭಾರತೀಯ ವಕೀಲರ ಕಾಯಿದೆ ಪ್ರಕಾರ, “ಒಬ್ಬ ವ್ಯಕ್ತಿ – ಅವನು ಪ್ರಕರಣದ ಕಕ್ಷಿದಾರ ಇರಬಹುದು ಅಥವಾ ಹೊರಗಿನವ ಆಗಿರಬಹುದು, ಅವನು ನ್ಯಾಯಾಧೀಶನ ಅಧಿಕಾರ ಕುಗ್ಗಿಸುವಂತೆ ಅಥವಾ ಅವನು ಪ್ರಕರಣ ನಡೆಸೋ ರೀತಿಯ ಬಗ್ಗೆ ಅಪಹಾಸ್ಯ ಮಾಡಿದರೆ, ವಿನಾಕಾರಣ ಟೀಕೆ ಮಾಡಿದರೆ, ಸಾಕ್ಷಿಗಳು, ಇತರ ಕಕ್ಷಿದಾರರು ಹಾಗೂ ಇತರರು ಪ್ರಕರಣ ಮುಗಿಯುವ ಮುಂಚೆ ಅದರ ಬಗ್ಗೆ ತಪ್ಪು ತಿಳಿದುಕೊಳ್ಳುವ ಹಾಗೆ ಸಾರ್ವಜನಿಕರಲ್ಲಿ, ಮಾಧ್ಯಮದಲ್ಲಿ ದುರಭಿಪ್ರಾಯ ಮೂಡಿಸಿದರೆ, ನ್ಯಾಯದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೆ, ಸಬೂತುಗಳಿಲ್ಲದೇ ನ್ಯಾಯಾಲಯದಲ್ಲಿ ಹಗರಣ ಆಗಿದೆ ಎಂಬ ಸುಳ್ಳುಗಳನ್ನು ಹಬ್ಬಿಸಿದರೆ” ಅದು ನ್ಯಾಯಾಂಗ ನಿಂದನೆ.

ಆದರೆ, ರಾಜಕೀಯ ನಿರ್ಲಿಪ್ತತೆಯನ್ನು ಮೈಗೂಡಿಸಿಕೊಳ್ಳಬೇಕಾದ ನ್ಯಾಯಾಧೀಶರು ಪುಢಾರಿ ರಾಜಕಾರಣೀಯ ಬೈಕು ಇಸಿದುಕೊಂಡು ಒಂದು ರೌಂಡ್ ಹೊಡಿಯಬಾರದು ಅನ್ನೋ ಮಾತು ನ್ಯಾಯಾಂಗನಿಂದನೆ ಆಗತೇತಿ ಅಂತ ಎಲ್ಲೂ ಇಲ್ಲ. ಅಂತರರಾಷ್ಟ್ರೀಯ ಕಾನೂನುದಾಗೂ ಇಲ್ಲ, ಭಾರತದ ಕಾನೂನುದಾಗೂ ಇಲ್ಲ.

ಮಜಾ ಅಂದ್ರ ನ್ಯಾಯಾಧೀಶರು ಫೋಟೋ ತಗದವರಿಗೆ ಏನೂ ಅಂದಿಲ್ಲ. ಅದರ ಬಗ್ಗೆ ಟಿಪ್ಪಣಿ ಮಾಡಿದ ವಕೀಲರಿಗೆ ಮಾತ್ರ ಬರೋಬ್ಬರಿ ಬಿಗಿ ಹಚ್ಚಿದಾರು.

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

ತಮ್ಮ ಕ್ರಿಯೆ- ಖಯಾಲಿಗಳನ್ನ ಜನರಿಗೆ ತೋರಿಸಿ ನಮ್ಮನ್ನ ನಗಿಪಾಟ್ಲಿಗೆ ಒಡ್ಡಿದರೂ ಅಂತ ನ್ಯಾಯಾಧೀಶರಿಗೆ ಅನ್ನಿಸಿರಬಹುದು. ಅವರಿಗೆ ಚೀನಾ ದೇಶದ ಒಂದು ಗಾದಿ ಮಾತು ನೆನಪು ಮಾಡಿಕೊಡೋಣ.

“ನೀವು ಮಾಡಿದ್ದು ಯಾರಿಗೂ ಗೊತ್ತು ಆಗಬಾರದು ಅಂತ ನಿಮಗ ಇದ್ದರ, ಅದನ್ನ ನೀವು ಮಾಡಾಕ ಹೋಗಬಾರದು”

ನಮ್ಮ ಘನ ಸರಕಾರ ಚೀನಾ ದೇಶದ ಮೊಬಾಯಿಲು ಯಾಪುಗಳ ಮ್ಯಾಲೆ ನಿರ್ಬಂಧ ಹೇರೇತಿ. ಅಲ್ಲಿನ ಗಾದಿ ಮಾತಿನ ಮ್ಯಾಲೆ ಏನು ನಿರ್ಬಂಧ ಇಲ್ಲಲ್ಲ!, ಅಲ್ಲವೇ, ಮನೋಲ್ಲಾಸಿನಿ?


ಇದನ್ನು ಓದಿ: ಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...