Homeಕರ್ನಾಟಕಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಆದರೆ ಈ ಎರಡು ಕಾಲೇಜುಗಳು ಮಾತ್ರ ಹಣ ದೋಚುವ ತಮ್ಮ ನಿತ್ಯಕಾಯಕದಲ್ಲಿ ನಿರತವಾಗಿವೆ. ಆ ಮೂಲಕ ಯಾರೇ ಹೋರಾಡಲಿ, ಯಾರೇ ಕೂಗಾಡಲಿ, ನಮ್ಮ ಹಣ ದೋಚುವುದರಲ್ಲಿ ಸಾಟಿ ಇಲ್ಲ ಎನ್ನುತ್ತಿದ್ದಾರೆ ಬಳ್ಳಾರಿಯ ಈ ಎರಡು ಖಾಸಗಿ ಕಾಲೇಜುಗಳು.

ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನೂ ಆರಂಭವೇ ಆಗಿಲ್ಲ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಶಿಕ್ಷಣ ತಜ್ಞರು ಎಚ್ವರಿಕೆ ನೀಡುತ್ತಿದ್ದಾರೆ. ಆದರೆ ಬಳ್ಳಾರಿಯಲ್ಲಿರುವ ಶ್ರೀ ಚೈತನ್ಯ ಎಜುಕೇಷನ್ ಇನ್ಸ್ಟಿಟ್ಯೂಟ್ ಮತ್ತು ನಾರಾಯಣ ಶಿಕ್ಷಣ ಸಂಸ್ಥೆಗಳು ಈಗಾಗಲೇ ಭರ್ಜರಿಯಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳುತ್ತಿವೆ.

ಅಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳಿಂದ ತಲಾ 70,000 ಹಣ ಪಡೆದು ರಶೀದಿ ನೀಡಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ಬಗ್ಗೆ ಮೊದಲಿಗೆ ಎನ್‌ಎಸ್‌ಯುಐ ಬಳ್ಳಾರಿ ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡರವರು ಬಳ್ಳಾರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐರವರಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ರಾಜ್ಯ ಕಾಂಗ್ರೆಸ್‌ ಪಕ್ಷವು ಟ್ವೀಟ್‌ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. “ಸುರೇಶ್‌ ಕುಮಾರ್‌ ಅವರೇ, ಎಲ್ಲಾ ವಿಷಯಗಳಲ್ಲೂ ಬಹಳ ನಾಟಕೀಯವಾಗಿ ವರ್ತಿಸುವ ತಾವು ಅನುಮತಿ ಇಲ್ಲದೇ ಪದವಿ ಪೂರ್ವ ಕಾಲೇಜು ನಡೆಯುತ್ತಿರುವ ಬಗ್ಗೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳೇ ನಡೆಯದೆ ಪ್ರಥಮ ಪಿಯುಸಿಗೆ ದಾಖಲಾತಿ ನಡೆಸುತ್ತಿರುವ ಬಗ್ಗೆ ಯಾವ ಕ್ರಮ ಜರುಗಿಸುವಿರಿ?
ಅಕ್ರಮ ನಡೆಸುತ್ತಿರುವ ಕಾಲೇಜುಗಳ ಪರವಾನಗಿ ರದ್ದುಪಡಿಸಿ ನಿಮ್ಮ ಬದ್ಧತೆ ತೋರಿಸಿ” ಎಂದು ಸವಾಲೆಸೆದಿದೆ.

1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಅವಧಿಗೆ ಮುನ್ನವೇ ದಾಖಲಾತಿ ಮಾಡಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗುತ್ತದೆ. ಅದರಲ್ಲಿಯೂ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಕಾಲೇಜುಗಳು ಹಣ ವಸೂಲಿಗಿಳಿದಿವೆ.

ಒಟ್ಟಾರೆಯಾಗಿ ಶಿಕ್ಷಣ ಎನ್ನುವುದು ಮನುಷ್ಯನ ಸಮಗ್ರ ವಿಕಾಸಕ್ಕೆ ದಾರಿಯಾಗಬೇಕು. ಆದರೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಆರಂಭಿಸಿದರೋ ಅಂದಿನಿಂದ ಎಲ್ಲಾ ಮೌಲ್ಯಗಳಿಗೂ ಬೆಲೆ ಇಲ್ಲದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...