Homeಕರ್ನಾಟಕಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಆದರೆ ಈ ಎರಡು ಕಾಲೇಜುಗಳು ಮಾತ್ರ ಹಣ ದೋಚುವ ತಮ್ಮ ನಿತ್ಯಕಾಯಕದಲ್ಲಿ ನಿರತವಾಗಿವೆ. ಆ ಮೂಲಕ ಯಾರೇ ಹೋರಾಡಲಿ, ಯಾರೇ ಕೂಗಾಡಲಿ, ನಮ್ಮ ಹಣ ದೋಚುವುದರಲ್ಲಿ ಸಾಟಿ ಇಲ್ಲ ಎನ್ನುತ್ತಿದ್ದಾರೆ ಬಳ್ಳಾರಿಯ ಈ ಎರಡು ಖಾಸಗಿ ಕಾಲೇಜುಗಳು.

ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನೂ ಆರಂಭವೇ ಆಗಿಲ್ಲ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಶಿಕ್ಷಣ ತಜ್ಞರು ಎಚ್ವರಿಕೆ ನೀಡುತ್ತಿದ್ದಾರೆ. ಆದರೆ ಬಳ್ಳಾರಿಯಲ್ಲಿರುವ ಶ್ರೀ ಚೈತನ್ಯ ಎಜುಕೇಷನ್ ಇನ್ಸ್ಟಿಟ್ಯೂಟ್ ಮತ್ತು ನಾರಾಯಣ ಶಿಕ್ಷಣ ಸಂಸ್ಥೆಗಳು ಈಗಾಗಲೇ ಭರ್ಜರಿಯಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳುತ್ತಿವೆ.

ಅಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳಿಂದ ತಲಾ 70,000 ಹಣ ಪಡೆದು ರಶೀದಿ ನೀಡಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ಬಗ್ಗೆ ಮೊದಲಿಗೆ ಎನ್‌ಎಸ್‌ಯುಐ ಬಳ್ಳಾರಿ ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡರವರು ಬಳ್ಳಾರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐರವರಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ರಾಜ್ಯ ಕಾಂಗ್ರೆಸ್‌ ಪಕ್ಷವು ಟ್ವೀಟ್‌ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. “ಸುರೇಶ್‌ ಕುಮಾರ್‌ ಅವರೇ, ಎಲ್ಲಾ ವಿಷಯಗಳಲ್ಲೂ ಬಹಳ ನಾಟಕೀಯವಾಗಿ ವರ್ತಿಸುವ ತಾವು ಅನುಮತಿ ಇಲ್ಲದೇ ಪದವಿ ಪೂರ್ವ ಕಾಲೇಜು ನಡೆಯುತ್ತಿರುವ ಬಗ್ಗೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳೇ ನಡೆಯದೆ ಪ್ರಥಮ ಪಿಯುಸಿಗೆ ದಾಖಲಾತಿ ನಡೆಸುತ್ತಿರುವ ಬಗ್ಗೆ ಯಾವ ಕ್ರಮ ಜರುಗಿಸುವಿರಿ?
ಅಕ್ರಮ ನಡೆಸುತ್ತಿರುವ ಕಾಲೇಜುಗಳ ಪರವಾನಗಿ ರದ್ದುಪಡಿಸಿ ನಿಮ್ಮ ಬದ್ಧತೆ ತೋರಿಸಿ” ಎಂದು ಸವಾಲೆಸೆದಿದೆ.

1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಅವಧಿಗೆ ಮುನ್ನವೇ ದಾಖಲಾತಿ ಮಾಡಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗುತ್ತದೆ. ಅದರಲ್ಲಿಯೂ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಕಾಲೇಜುಗಳು ಹಣ ವಸೂಲಿಗಿಳಿದಿವೆ.

ಒಟ್ಟಾರೆಯಾಗಿ ಶಿಕ್ಷಣ ಎನ್ನುವುದು ಮನುಷ್ಯನ ಸಮಗ್ರ ವಿಕಾಸಕ್ಕೆ ದಾರಿಯಾಗಬೇಕು. ಆದರೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಆರಂಭಿಸಿದರೋ ಅಂದಿನಿಂದ ಎಲ್ಲಾ ಮೌಲ್ಯಗಳಿಗೂ ಬೆಲೆ ಇಲ್ಲದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...