Homeಕರ್ನಾಟಕಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಆದರೆ ಈ ಎರಡು ಕಾಲೇಜುಗಳು ಮಾತ್ರ ಹಣ ದೋಚುವ ತಮ್ಮ ನಿತ್ಯಕಾಯಕದಲ್ಲಿ ನಿರತವಾಗಿವೆ. ಆ ಮೂಲಕ ಯಾರೇ ಹೋರಾಡಲಿ, ಯಾರೇ ಕೂಗಾಡಲಿ, ನಮ್ಮ ಹಣ ದೋಚುವುದರಲ್ಲಿ ಸಾಟಿ ಇಲ್ಲ ಎನ್ನುತ್ತಿದ್ದಾರೆ ಬಳ್ಳಾರಿಯ ಈ ಎರಡು ಖಾಸಗಿ ಕಾಲೇಜುಗಳು.

ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನೂ ಆರಂಭವೇ ಆಗಿಲ್ಲ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಶಿಕ್ಷಣ ತಜ್ಞರು ಎಚ್ವರಿಕೆ ನೀಡುತ್ತಿದ್ದಾರೆ. ಆದರೆ ಬಳ್ಳಾರಿಯಲ್ಲಿರುವ ಶ್ರೀ ಚೈತನ್ಯ ಎಜುಕೇಷನ್ ಇನ್ಸ್ಟಿಟ್ಯೂಟ್ ಮತ್ತು ನಾರಾಯಣ ಶಿಕ್ಷಣ ಸಂಸ್ಥೆಗಳು ಈಗಾಗಲೇ ಭರ್ಜರಿಯಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳುತ್ತಿವೆ.

ಅಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳಿಂದ ತಲಾ 70,000 ಹಣ ಪಡೆದು ರಶೀದಿ ನೀಡಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ಬಗ್ಗೆ ಮೊದಲಿಗೆ ಎನ್‌ಎಸ್‌ಯುಐ ಬಳ್ಳಾರಿ ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡರವರು ಬಳ್ಳಾರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐರವರಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ರಾಜ್ಯ ಕಾಂಗ್ರೆಸ್‌ ಪಕ್ಷವು ಟ್ವೀಟ್‌ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. “ಸುರೇಶ್‌ ಕುಮಾರ್‌ ಅವರೇ, ಎಲ್ಲಾ ವಿಷಯಗಳಲ್ಲೂ ಬಹಳ ನಾಟಕೀಯವಾಗಿ ವರ್ತಿಸುವ ತಾವು ಅನುಮತಿ ಇಲ್ಲದೇ ಪದವಿ ಪೂರ್ವ ಕಾಲೇಜು ನಡೆಯುತ್ತಿರುವ ಬಗ್ಗೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳೇ ನಡೆಯದೆ ಪ್ರಥಮ ಪಿಯುಸಿಗೆ ದಾಖಲಾತಿ ನಡೆಸುತ್ತಿರುವ ಬಗ್ಗೆ ಯಾವ ಕ್ರಮ ಜರುಗಿಸುವಿರಿ?
ಅಕ್ರಮ ನಡೆಸುತ್ತಿರುವ ಕಾಲೇಜುಗಳ ಪರವಾನಗಿ ರದ್ದುಪಡಿಸಿ ನಿಮ್ಮ ಬದ್ಧತೆ ತೋರಿಸಿ” ಎಂದು ಸವಾಲೆಸೆದಿದೆ.

1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಅವಧಿಗೆ ಮುನ್ನವೇ ದಾಖಲಾತಿ ಮಾಡಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗುತ್ತದೆ. ಅದರಲ್ಲಿಯೂ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಕಾಲೇಜುಗಳು ಹಣ ವಸೂಲಿಗಿಳಿದಿವೆ.

ಒಟ್ಟಾರೆಯಾಗಿ ಶಿಕ್ಷಣ ಎನ್ನುವುದು ಮನುಷ್ಯನ ಸಮಗ್ರ ವಿಕಾಸಕ್ಕೆ ದಾರಿಯಾಗಬೇಕು. ಆದರೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಆರಂಭಿಸಿದರೋ ಅಂದಿನಿಂದ ಎಲ್ಲಾ ಮೌಲ್ಯಗಳಿಗೂ ಬೆಲೆ ಇಲ್ಲದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...