Homeಮುಖಪುಟಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

ಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

- Advertisement -
- Advertisement -

ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಆಂಡ್‌ ಅಡ್ಮಿನಿಸ್ಟ್ರೇಷನ್‌ನ ಮಾಜಿ ಪ್ರೊಫೆಸರ್ ಅರುಣ್ ಸಿ.ಮೆಹ್ತಾ ಅವರು ಸಿದ್ದಪಡಿಸಿದ ‘ಭಾರತದಲ್ಲಿ ಮುಸ್ಲಿಮರ ಶಿಕ್ಷಣದ ಸ್ಥಿತಿ’ ವರದಿಯ ಪ್ರಕಾರ 2021ರಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಪ್ರಮಾಣ 8.5% ಕಡಿಮೆಯಾಗಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (UDISE+) ಮತ್ತು ಉನ್ನತ ಶಿಕ್ಷಣದ ಕುರಿತ ಆಲ್ ಇಂಡಿಯಾ ಸರ್ವೆ (AISHE)ನ ಡೇಟಾವನ್ನು ಆಧರಿಸಿ ವರದಿಯನ್ನು ಸಿದ್ದಪಡಿಸಲಾಗಿದೆ.

2019-20ರಲ್ಲಿ 21 ಲಕ್ಷ ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2020-21ರಲ್ಲಿ ಈ ಸಂಖ್ಯೆ 19.21 ಲಕ್ಷಕ್ಕೆ ಕುಸಿದಿದೆ. 2016-17ರಲ್ಲಿ 17,39,218 ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2019-20ರಲ್ಲಿ 21,00,860 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರು. 2020-21ರಲ್ಲಿ 19,21,713ಕ್ಕೆ ಇಳಿಕೆಯಾಗಿದೆ. ಈ ಅಂಕಿ-ಅಂಶಗಳು ವಿದ್ಯಾರ್ಥಿಗಳ ದಾಖಲಾತಿಯಲ್ಲಿ 1,79,147ರಷ್ಟು ಇಳಿಕೆಯಾಗಿರುವುದನ್ನು ಬಹಿರಂಗಪಡಿಸುತ್ತದೆ.

ಇದಲ್ಲದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ವೆ ವೇಳೆ ಗಮನಿಸಲಾದ ಗಮನಾರ್ಹ ಅಂಶವೆಂದರೆ 11 ಮತ್ತು 12ನೇ ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಶೇಕಡಾವಾರು ಇಳಿಕೆಯಾಗಿದೆ.

ಪ್ರಾಥಮಿಕ ಹಂತದ 6-8ನೇ ತರಗತಿವರೆಗೆ ಒಟ್ಟು 6.67 ಕೋಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಮುಸ್ಲಿಮರು ಸುಮಾರು 14.42% ರಷ್ಟಿದ್ದರೆ, ಮಾಧ್ಯಮಿಕ ಹಂತದಲ್ಲಿ 9-10ನೇ ತರಗತಿಗಳಲ್ಲಿ ಇದು 12.62%ಕ್ಕೆ ಇಳಿಕೆಯಾಗಿದೆ ಮತ್ತು 11-12ನೇ ತರಗತಿಗೆ ಬರುವಾಗ ಇದು 10.76%ಕ್ಕೆ ಇಳಿಕೆಯಾಗುತ್ತಿದೆ ಎನ್ನುವುದನ್ನು ವರದಿಯು ಬಹಿರಂಗಪಡಿಸುತ್ತದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ಅಸ್ಸಾಂನಲ್ಲಿ 29.52% ಮತ್ತು ಪಶ್ಚಿಮ ಬಂಗಾಳದಲ್ಲಿ 23.22% ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸಿದರೆ,  ಜಮ್ಮು ಮತ್ತು ಕಾಶ್ಮೀರದಲ್ಲಿ 5.1% ಮತ್ತು ಕೇರಳ 11.91% ಡ್ರಾಪ್‌ಔಟ್ ತೋರಿಸುತ್ತದೆ. ಇದಲ್ಲದೆ ಬಿಹಾರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಅನೇಕ ಮುಸ್ಲಿಂ ಮಕ್ಕಳು ಇನ್ನೂ ಶಿಕ್ಷಣ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ ಮತ್ತು ವಯಸ್ಸಿಗೆ ತಕ್ಕಂತೆ ಅವರನ್ನು ಶಾಲೆಗಳಿಗೆ ಸೇರಿಸುವುದು ಆದ್ಯತೆಯಾಗಬೇಕು ಎಂದು ವರದಿ ಹೇಳಿದೆ.

ಅನೇಕ ಮುಸ್ಲಿಂ ವಿದ್ಯಾರ್ಥಿಗಳು ಕಡಿಮೆ ಆದಾಯದ ಕುಟುಂಬಗಳಿಂದ ಬಂದವರು ಮತ್ತು ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸಲು ಹೆಣಗಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಮತ್ತು ಬೆಂಬಲವನ್ನು ಒದಗಿಸುವುದು ಅತ್ಯಗತ್ಯ. ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳು, ಅನುದಾನಗಳು ಮತ್ತು ಹಣಕಾಸಿನ ನೆರವು ಅವಕಾಶಗಳ ಸಂಖ್ಯೆಯನ್ನು ಹೆಚ್ಚಿಸುವುದು ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.

AISHE ಸಮೀಕ್ಷೆ 2020-21 ಉನ್ನತ ಶಿಕ್ಷಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪ್ರಾತಿನಿಧ್ಯದ ಕುಸಿತವನ್ನು ಸಹ ಸೂಚಿಸಿದೆ. ಇದಲ್ಲದೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗಿಂತ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ ಎಂದು ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ: ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...