Homeಮುಖಪುಟಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

ಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

- Advertisement -
- Advertisement -

ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಆಂಡ್‌ ಅಡ್ಮಿನಿಸ್ಟ್ರೇಷನ್‌ನ ಮಾಜಿ ಪ್ರೊಫೆಸರ್ ಅರುಣ್ ಸಿ.ಮೆಹ್ತಾ ಅವರು ಸಿದ್ದಪಡಿಸಿದ ‘ಭಾರತದಲ್ಲಿ ಮುಸ್ಲಿಮರ ಶಿಕ್ಷಣದ ಸ್ಥಿತಿ’ ವರದಿಯ ಪ್ರಕಾರ 2021ರಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಪ್ರಮಾಣ 8.5% ಕಡಿಮೆಯಾಗಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (UDISE+) ಮತ್ತು ಉನ್ನತ ಶಿಕ್ಷಣದ ಕುರಿತ ಆಲ್ ಇಂಡಿಯಾ ಸರ್ವೆ (AISHE)ನ ಡೇಟಾವನ್ನು ಆಧರಿಸಿ ವರದಿಯನ್ನು ಸಿದ್ದಪಡಿಸಲಾಗಿದೆ.

2019-20ರಲ್ಲಿ 21 ಲಕ್ಷ ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2020-21ರಲ್ಲಿ ಈ ಸಂಖ್ಯೆ 19.21 ಲಕ್ಷಕ್ಕೆ ಕುಸಿದಿದೆ. 2016-17ರಲ್ಲಿ 17,39,218 ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2019-20ರಲ್ಲಿ 21,00,860 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರು. 2020-21ರಲ್ಲಿ 19,21,713ಕ್ಕೆ ಇಳಿಕೆಯಾಗಿದೆ. ಈ ಅಂಕಿ-ಅಂಶಗಳು ವಿದ್ಯಾರ್ಥಿಗಳ ದಾಖಲಾತಿಯಲ್ಲಿ 1,79,147ರಷ್ಟು ಇಳಿಕೆಯಾಗಿರುವುದನ್ನು ಬಹಿರಂಗಪಡಿಸುತ್ತದೆ.

ಇದಲ್ಲದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ವೆ ವೇಳೆ ಗಮನಿಸಲಾದ ಗಮನಾರ್ಹ ಅಂಶವೆಂದರೆ 11 ಮತ್ತು 12ನೇ ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಶೇಕಡಾವಾರು ಇಳಿಕೆಯಾಗಿದೆ.

ಪ್ರಾಥಮಿಕ ಹಂತದ 6-8ನೇ ತರಗತಿವರೆಗೆ ಒಟ್ಟು 6.67 ಕೋಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಮುಸ್ಲಿಮರು ಸುಮಾರು 14.42% ರಷ್ಟಿದ್ದರೆ, ಮಾಧ್ಯಮಿಕ ಹಂತದಲ್ಲಿ 9-10ನೇ ತರಗತಿಗಳಲ್ಲಿ ಇದು 12.62%ಕ್ಕೆ ಇಳಿಕೆಯಾಗಿದೆ ಮತ್ತು 11-12ನೇ ತರಗತಿಗೆ ಬರುವಾಗ ಇದು 10.76%ಕ್ಕೆ ಇಳಿಕೆಯಾಗುತ್ತಿದೆ ಎನ್ನುವುದನ್ನು ವರದಿಯು ಬಹಿರಂಗಪಡಿಸುತ್ತದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ಅಸ್ಸಾಂನಲ್ಲಿ 29.52% ಮತ್ತು ಪಶ್ಚಿಮ ಬಂಗಾಳದಲ್ಲಿ 23.22% ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸಿದರೆ,  ಜಮ್ಮು ಮತ್ತು ಕಾಶ್ಮೀರದಲ್ಲಿ 5.1% ಮತ್ತು ಕೇರಳ 11.91% ಡ್ರಾಪ್‌ಔಟ್ ತೋರಿಸುತ್ತದೆ. ಇದಲ್ಲದೆ ಬಿಹಾರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಅನೇಕ ಮುಸ್ಲಿಂ ಮಕ್ಕಳು ಇನ್ನೂ ಶಿಕ್ಷಣ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ ಮತ್ತು ವಯಸ್ಸಿಗೆ ತಕ್ಕಂತೆ ಅವರನ್ನು ಶಾಲೆಗಳಿಗೆ ಸೇರಿಸುವುದು ಆದ್ಯತೆಯಾಗಬೇಕು ಎಂದು ವರದಿ ಹೇಳಿದೆ.

ಅನೇಕ ಮುಸ್ಲಿಂ ವಿದ್ಯಾರ್ಥಿಗಳು ಕಡಿಮೆ ಆದಾಯದ ಕುಟುಂಬಗಳಿಂದ ಬಂದವರು ಮತ್ತು ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸಲು ಹೆಣಗಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಮತ್ತು ಬೆಂಬಲವನ್ನು ಒದಗಿಸುವುದು ಅತ್ಯಗತ್ಯ. ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳು, ಅನುದಾನಗಳು ಮತ್ತು ಹಣಕಾಸಿನ ನೆರವು ಅವಕಾಶಗಳ ಸಂಖ್ಯೆಯನ್ನು ಹೆಚ್ಚಿಸುವುದು ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.

AISHE ಸಮೀಕ್ಷೆ 2020-21 ಉನ್ನತ ಶಿಕ್ಷಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪ್ರಾತಿನಿಧ್ಯದ ಕುಸಿತವನ್ನು ಸಹ ಸೂಚಿಸಿದೆ. ಇದಲ್ಲದೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗಿಂತ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ ಎಂದು ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ: ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...