Homeಮುಖಪುಟಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

ಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

- Advertisement -
- Advertisement -

ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಆಂಡ್‌ ಅಡ್ಮಿನಿಸ್ಟ್ರೇಷನ್‌ನ ಮಾಜಿ ಪ್ರೊಫೆಸರ್ ಅರುಣ್ ಸಿ.ಮೆಹ್ತಾ ಅವರು ಸಿದ್ದಪಡಿಸಿದ ‘ಭಾರತದಲ್ಲಿ ಮುಸ್ಲಿಮರ ಶಿಕ್ಷಣದ ಸ್ಥಿತಿ’ ವರದಿಯ ಪ್ರಕಾರ 2021ರಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಪ್ರಮಾಣ 8.5% ಕಡಿಮೆಯಾಗಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (UDISE+) ಮತ್ತು ಉನ್ನತ ಶಿಕ್ಷಣದ ಕುರಿತ ಆಲ್ ಇಂಡಿಯಾ ಸರ್ವೆ (AISHE)ನ ಡೇಟಾವನ್ನು ಆಧರಿಸಿ ವರದಿಯನ್ನು ಸಿದ್ದಪಡಿಸಲಾಗಿದೆ.

2019-20ರಲ್ಲಿ 21 ಲಕ್ಷ ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2020-21ರಲ್ಲಿ ಈ ಸಂಖ್ಯೆ 19.21 ಲಕ್ಷಕ್ಕೆ ಕುಸಿದಿದೆ. 2016-17ರಲ್ಲಿ 17,39,218 ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2019-20ರಲ್ಲಿ 21,00,860 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರು. 2020-21ರಲ್ಲಿ 19,21,713ಕ್ಕೆ ಇಳಿಕೆಯಾಗಿದೆ. ಈ ಅಂಕಿ-ಅಂಶಗಳು ವಿದ್ಯಾರ್ಥಿಗಳ ದಾಖಲಾತಿಯಲ್ಲಿ 1,79,147ರಷ್ಟು ಇಳಿಕೆಯಾಗಿರುವುದನ್ನು ಬಹಿರಂಗಪಡಿಸುತ್ತದೆ.

ಇದಲ್ಲದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ವೆ ವೇಳೆ ಗಮನಿಸಲಾದ ಗಮನಾರ್ಹ ಅಂಶವೆಂದರೆ 11 ಮತ್ತು 12ನೇ ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಶೇಕಡಾವಾರು ಇಳಿಕೆಯಾಗಿದೆ.

ಪ್ರಾಥಮಿಕ ಹಂತದ 6-8ನೇ ತರಗತಿವರೆಗೆ ಒಟ್ಟು 6.67 ಕೋಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಮುಸ್ಲಿಮರು ಸುಮಾರು 14.42% ರಷ್ಟಿದ್ದರೆ, ಮಾಧ್ಯಮಿಕ ಹಂತದಲ್ಲಿ 9-10ನೇ ತರಗತಿಗಳಲ್ಲಿ ಇದು 12.62%ಕ್ಕೆ ಇಳಿಕೆಯಾಗಿದೆ ಮತ್ತು 11-12ನೇ ತರಗತಿಗೆ ಬರುವಾಗ ಇದು 10.76%ಕ್ಕೆ ಇಳಿಕೆಯಾಗುತ್ತಿದೆ ಎನ್ನುವುದನ್ನು ವರದಿಯು ಬಹಿರಂಗಪಡಿಸುತ್ತದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ಅಸ್ಸಾಂನಲ್ಲಿ 29.52% ಮತ್ತು ಪಶ್ಚಿಮ ಬಂಗಾಳದಲ್ಲಿ 23.22% ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸಿದರೆ,  ಜಮ್ಮು ಮತ್ತು ಕಾಶ್ಮೀರದಲ್ಲಿ 5.1% ಮತ್ತು ಕೇರಳ 11.91% ಡ್ರಾಪ್‌ಔಟ್ ತೋರಿಸುತ್ತದೆ. ಇದಲ್ಲದೆ ಬಿಹಾರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಅನೇಕ ಮುಸ್ಲಿಂ ಮಕ್ಕಳು ಇನ್ನೂ ಶಿಕ್ಷಣ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ ಮತ್ತು ವಯಸ್ಸಿಗೆ ತಕ್ಕಂತೆ ಅವರನ್ನು ಶಾಲೆಗಳಿಗೆ ಸೇರಿಸುವುದು ಆದ್ಯತೆಯಾಗಬೇಕು ಎಂದು ವರದಿ ಹೇಳಿದೆ.

ಅನೇಕ ಮುಸ್ಲಿಂ ವಿದ್ಯಾರ್ಥಿಗಳು ಕಡಿಮೆ ಆದಾಯದ ಕುಟುಂಬಗಳಿಂದ ಬಂದವರು ಮತ್ತು ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸಲು ಹೆಣಗಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಮತ್ತು ಬೆಂಬಲವನ್ನು ಒದಗಿಸುವುದು ಅತ್ಯಗತ್ಯ. ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳು, ಅನುದಾನಗಳು ಮತ್ತು ಹಣಕಾಸಿನ ನೆರವು ಅವಕಾಶಗಳ ಸಂಖ್ಯೆಯನ್ನು ಹೆಚ್ಚಿಸುವುದು ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.

AISHE ಸಮೀಕ್ಷೆ 2020-21 ಉನ್ನತ ಶಿಕ್ಷಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪ್ರಾತಿನಿಧ್ಯದ ಕುಸಿತವನ್ನು ಸಹ ಸೂಚಿಸಿದೆ. ಇದಲ್ಲದೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗಿಂತ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ ಎಂದು ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ: ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...