Homeಮುಖಪುಟ'ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?' | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್...

‘ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?’ | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್ ಆಕ್ರೋಶ!

- Advertisement -
- Advertisement -

ದೆಹಲಿಯಲ್ಲಿರುವ ಸುಮಾರು 700 ವರ್ಷಗಳಷ್ಟು ಹಳೆಯ ಲೋಧಿ ಯುಗದ ಸಮಾಧಿಯನ್ನು ಆಕ್ರಮಿಸಿಕೊಂಡಿದ್ದಕ್ಕಾಗಿ ಡಿಫೆನ್ಸ್ ಕಾಲೋನಿ ವೆಲ್ಫೇರ್ ಅಸೋಸಿಯೇಷನ್ ​​(DCWA) ಅನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದ್ದು, ಸ್ಮಾರಕವನ್ನು ರಕ್ಷಿಸುವಲ್ಲಿ ವಿಫಲವಾದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಅನ್ನು ತರಾಟೆಗೆ ತೆಗೆದುಕೊಂಡಿದೆ. ಸ್ಮಾರಕಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಅಧ್ಯಯನ ಮಾಡಲು ಮತ್ತು ಅದರ ಮರುಸ್ಥಾಪನೆ ಕ್ರಮಗಳನ್ನು ಸೂಚಿಸಲು ಪುರಾತತ್ವ ತಜ್ಞರನ್ನು ನೇಮಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಕಾಲೊನಿ

ಸ್ಮಾರಕವು ಸಮಾಜ ವಿರೋಧಿ ಶಕ್ತಿಗಳಿಂದ ಹಾನಿಗೊಳಗಾಗುತ್ತದೆ ಎಂದು ಹೇಳುವ ಮೂಲಕ 1960 ರ ದಶಕದಲ್ಲಿ ಶೇಖ್ ಅಲಿಯ ಗುಮ್ಮಟವನ್ನು ಕಾಲೊನಿ ಅಸೋಸಿಯೇಷನ್ ಆಕ್ರಮಿಸಿಕೊಂಡಿತ್ತು. 15 ನೇ ಶತಮಾನದ ಈ ರಚನೆಯನ್ನು ಅಸೋಸಿಯೇಷನ್ ತನ್ನ ಕಚೇರಿಯಾಗಿ ಬಳಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ದೆಹಲಿ ಕಾಲೊನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುಮ್ಮಟವನ್ನು ಪ್ರವೇಶಿಸಲು ನಿಮಗೆ ಎಷ್ಟು ಧೈರ್ಯ ಇರಬೇಕು. ಯಾವ ರೀತಿಯ ವಾದಗಳನ್ನು ನೀವು ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಸೋಸಿಯೇಷನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಸೋಸಿಯೇಷನ್ ವಸಾಹತುಶಾಹಿ ಆಡಳಿತಗಾರರಂತೆ ಮಾತನಾಡುತ್ತಿದೆ ಎಂದು ನ್ಯಾಯಾಲಯ ಹೇಳಿದ್ದು, “ಅಸೋಸಿಯೇಷನ್ ಸ್ಥಳವನ್ನು ಆಕ್ರಮಿಸಿಕೊಂಡಿದ್ದಲ್ಲದೆ, ಎಸಿ ಅಳವಡಿಸಿದ ಕಚೇರಿಯಲ್ಲಿ ಕುಳಿತು ತನ್ನ ಆಡಳಿತವನ್ನು ನಡೆಸುತ್ತಿದೆ. ಅವರು ಬಾಡಿಗೆಯನ್ನು ಪಾವತಿಸುತ್ತಿದ್ದಾರೆಯೆ?” ನ್ಯಾಯಾಲಯ ಹೇಳಿದೆ.

ಅಸೋಸಿಯೇಷನ್‌ಗೆ ಸ್ಮಾರಕವನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ನ್ಯಾಯಾಲಯವು ಪುರಾತತ್ವ ಇಲಾಖೆಯನ್ನು ದೂಷಿಸಿದ್ದು, “ನೀವು (ಎಎಸ್‌ಐ) ಯಾವ ರೀತಿಯ ಪ್ರಾಧಿಕಾರ? ನಿಮಗೆ ಇರುವ ಕರ್ತವ್ಯವೇನು? ಪುರಾತನ ರಚನೆಗಳನ್ನು ರಕ್ಷಿಸುವ ನಿಮ್ಮ ಕರ್ತವ್ಯದಿಂದ ಹಿಂದೆ ಸರಿದಿದ್ದೀರಿ. ನಿಮ್ಮ ನಿಷ್ಕ್ರಿಯತೆಯನ್ನು ನೋಡಿ ನಾವು ವಿಚಲಿತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗುಮ್ಮಟದಿಂದ ಹೊರಹೋಗುವಂತೆ ಅಸೋಸಿಯೇಷನ್‌ಗೆ ನಿರ್ದೇಶನ ನೀಡುವುದಾಗಿ ನ್ಯಾಯಾಲಯವು ಹೇಳಿದ್ದು, 2025ರ ಜನವರಿ 21ರಂದು ವಿಚಾರಣೆಯನ್ನು ಮುಂದೂಡಿದೆ.

ಸಮಾಧಿಯನ್ನು 500 ವರ್ಷಗಳ ಹಿಂದೆ ಲೋದಿ ರಾಜವಂಶದ ಅವಧಿಯಲ್ಲಿ ನಿರ್ಮಿಸಲಾಗಿತ್ತು. ದೆಹಲಿಯ ಡಿಫೆನ್ಸ್ ಕಾಲೋನಿಯ ನಿವಾಸಿ ರಾಜೀವ್ ಸೂರಿ ಎಂಬುವರು ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕಟುವಾದ ಟೀಕೆಗಳನ್ನು ಮಾಡಿದೆ. ಈ ರಚನೆಯನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ನಿರ್ದೇಶನಗಳನ್ನು ನೀಡಲು ದೆಹಲಿ ಹೈಕೋರ್ಟ್ 2019ರಲ್ಲಿ ನಿರಾಕರಿಸಿದ ನಂತರ ಸೂರಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...