Homeಕರ್ನಾಟಕ2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

- Advertisement -
- Advertisement -

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು ಹಾಗೂ 2024ರ ಚುನಾವಣೆಯಲ್ಲಿ ಕಾರ್ಮಿಕ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ನಿರ್ಣಯಿಸಿದೆ. ಕಾರ್ಮಿಕರು, ರೈತರು ಹಾಗೂ ಕೂಲಿಕಾರರ ಬದುಕನ್ನು ಕಸಿಯುತ್ತಿರುವ ಸರ್ಕಾರಗಳನ್ನು ಮತ್ತು ಅವುಗಳ ನೀತಿಗಳನ್ನು ಕಿತ್ತೊಗೆಯಲು ಇಡೀ ದೇಶದ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಜಾತಿ, ಧರ್ಮ, ವರ್ಣ, ವರ್ಗ ಭೇದಗಳನ್ನು ಮರೆತು ಐಕ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ಕರೆ ನೀಡಿದೆ.

ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌’ (ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನ ನಡೆದಿದ್ದು, ಭಾನುವಾರ ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವೇಳೆ ದುಡಿಯುವ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಂಡಿರುವ ಹಲವು ನಿರ್ಣಯಗಳನ್ನು ಘೋಷಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅವರು, “ಆರ್‌ಎಸ್‌ಎಸ್‌ ಅಣತಿಯಂತೆ ಒಕ್ಕೂಟ ಸರ್ಕಾರ ನಡೆಯುತ್ತಿದ್ದು, ಧರ್ಮದ ರಾಜಕಾರಣ ಮಾಡಿ ಜನರನ್ನು ಬೀದಿಗೆ ತಳ್ಳುತ್ತಿದೆ. ಅದಾನಿ, ಅಂಬಾನಿಯಂತಹ ದೇಶದ ಶ್ರೀಮಂತರ ಸಂಪತ್ತನ್ನು ಹೆಚ್ಚುಮಾಡಲು ರೈತರು, ಕಾರ್ಮಿಕರು, ಬಡವರ ಬದುಕನ್ನು ಜರ್ಜರಿತಗೊಳಿಸಿದೆ. ಇಂತಹ ಸರ್ಕಾರಕ್ಕೆ ಮಾತಿನ ಮೂಲಕ ಹೇಳಿದರೆ ತಿಳಿಯಲ್ಲ. ಹಾಗಾಗಿ ದೇಶದ ಜನರು, ರೈತರು ಕಾರ್ಮಿಕರು ಐಕ್ಯತೆ ಸಾಧಿಸಿ ಹೋರಾಟದ ಮೂಲಕವೇ ಅವರನ್ನು ಕಿತ್ತೊಗೆಯಬೇಕು” ಎಂದು ಕರೆ ನೀಡಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ
CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ

 

“ನಾಲ್ಕು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ಜಾರಿ ತಂದು ಕಾರ್ಮಿಕರು ಸಂಘ ಕಟ್ಟುವ ಹಕ್ಕನ್ನು ಕಸಿಯಲು ಮುಂದಾಗಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿದು ಮತ್ತೆ ಗುಲಾಮಿ ಸಂಸ್ಕೃತಿಯನ್ನು ಜಾರಿಗೆ ತಂದು ಕೆಲಸದ ಅವಧಿಯನ್ನು ಎಂಟರಿಂದ 12 ಗಂಟೆಗೆ ಏರಿಸಲು ಒಕ್ಕೂಟ ಸರ್ಕಾರ ಮುಂದಾಗಿದ್ದು, ಅದನ್ನು ಕಾರ್ಮಿಕ ವರ್ಗ ಹಾಗೂ ಸಿಐಟಿಯು ಪ್ರಬಲ ಹೋರಾಟದಿಂದ ಹಿಮ್ಮೆಟ್ಟಿಸಿವೆ. ಮುಂದೆಯೂ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಹೋರಾಟದ ಮೂಲಕ ಬಗ್ಗು ಬಡಿಯಬೇಕು” ಎಂದು ಅವರು ಹೇಳಿದರು.

40% ಸರ್ಕಾರ ಕಿತ್ತೊಗೆಯೋಣ; ಮೀನಾಕ್ಷಿ ಸುಂದರಂ

ಸಭೆಯಲ್ಲಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ,“ಧರ್ಮವನ್ನು ತೋರಿಸಿ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ 40% ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತು ಬಿಸಾಕಬೇಕು. ಆ ನಿಟ್ಟಿನಲ್ಲಿ 2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು. ದೆಹಲಿ ರೈತ ಹೋರಾಟ ಮೋದಿ ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಪಾಠ ಕಲಿಸಿತೋ ಅದೇ ಹೋರಾಟದ ಭಾಷೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಜನ ಅನುಸರಿಸಬೇಕು” ಎಂದು ಕರೆ ಹೇಳಿದರು.

CITU ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು

“ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಜನ ಸಾಮಾನ್ಯರು ಆಯ್ಕೆ ಮಾಡಿರುವುದಲ್ಲ. ಬದಲಾಗಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರವಾಗಿ ಆಯ್ಕೆಯಾಗಿದ್ದವರನ್ನು ಖರೀದಿಸಿ ರೂಪುಗೊಂಡಿರುವುದು. ಹಾಗಂತ ಬಿಜೆಪಿ ತೊಲಗಿಸಿ ಕಾಂಗ್ರೆಸ್, ಜೆಡಿಎಸ್ ಅಥವಾ ಇನ್ಯಾವುದೊ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಪರಿಸ್ಥಿತಿ ಬದಲಾಗುತ್ತದೆ ಎಂದು ನಂಬಲಾಗಿದೆ. ಆದರೆ, ಸರ್ಕಾರಗಳು ಅಥವಾ ಅದರ ಪ್ರತಿನಿಧಿಗಳು ಮಾತ್ರವಲ್ಲ ಅವುಗಳ ನೀತಿಗಳು ಬದಲಾಗಬೇಕಿದೆ” ಎಂದು ಅವರು ಪ್ರತಿಪಾದಿಸಿದರು.

“ಹಿಂದೆ ಐಟಿಐ ಓದಿದರೆ ಸಾಕಿತ್ತು, ಕಾರ್ಖಾನೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡಿ ನಂತರ ಖಾಯಂ ಉದ್ಯೋಗ ಪಡೆಯುವ ಅವಕಾಶ ಇತ್ತು. ಅದರೆ ಇಂದಿನ ಯುವಜನತೆ ಏನೇ ಶಿಕ್ಷಣ ಪಡೆದರೂ ಯಾವುದೇ ಮಾನ್ಯತೆ ಇಲ್ಲ. ಆದರೆ, ಒಂದು ಕಾರ್ಪೊರೇಟ್ ಕಂಪನಿ ನೀಡುವ ಸರ್ಟಿಫಿಕೇಟ್‌ಗೆ ಮಾನ್ಯತೆ ಪಡೆಯುತ್ತಿದೆ. ಕಾರ್ಮಿಕ ಕಾನೂನುಗಳ ಮೂಲಕ ಪರ್ಮನೆಂಟ್ ಕಾರ್ಮಿಕರನ್ನು ಮನೆಗೆ ಕಳಿಸುತ್ತ ಟ್ರೈನಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಶೋಷಿಸಲಾಗುತ್ತಿದೆ. ಕೈಗಾರಿಕೆ ಸ್ಥಾಪಿಸಲು ಭೂಮಿ ಕೊಟ್ಟ ರೈತರ ಮಕ್ಕಳಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ” ಎಂದು ಮೀನಾಕ್ಷಿ ಸುಂದರಂ ಅಕ್ರೋಶ ವ್ಯಕ್ತಪಡಿಸಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಿರುವ ಕಾರ್ಮಿಕರು

“ಸದಾ ಮಾಧ್ಯಮಗಳ ಮುಂದೆ ಸೈನಿಕರ ಬಗ್ಗೆ ಮಾತನಾಡುವ ಈ ಸರ್ಕಾರ, ದೇಶದ ರಕ್ಷಣೆ ಮಾಡುವವರನ್ನೂ ಕಡೆಗಣಿಸಲು ಮುಂದಾಗಿದೆ. ಅಲ್ಲಿಯೂ ಅಗ್ನಿವೀರ್ ಎಂಬ ಹೆಸರಿನಲ್ಲಿ ದೇಶದ ರಕ್ಷಣಾ ವಲಯವನ್ನು ಕಡೆಗಣಿಸಿದೆ. ಅದನ್ನೂ ಕೂಡ ಖಾಸಗಿಯವರಿಗೆ ವಹಿಸಲಾಗುತ್ತಿದೆ. ಗಡಿಯಲ್ಲಿ ಜೀವ ಕೊಡುವವರಿಗೂ ಉದ್ಯೋಗ ಭದ್ರತೆಯನ್ನು ಕಸಿಯುವ ಹುನ್ನಾರ ಮಾಡಿದೆ. ದೇಶದಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೂ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿ, ಕಾರ್ಖಾನೆಗಳು ಸೇರಿದಂತೆ ಎಲ್ಲವನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಬಿಇಎಂಎಲ್, ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ” ಎಂದು ಅವರು ಹೇಳಿದರು.

ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿದೆ: ಡಾ.ಕೆ. ಹೇಮಲತ

ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಕೆ. ಹೇಮಲತ, “ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯಗಳ ಕಾರ್ಮಿಕ ನಾಯಕರು ಸಮ್ಮೇಳನದಲ್ಲಿ ನಡೆದ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಆಗ ಅಲ್ಲಿನ ಬಿಜೆಪಿ ಸರ್ಕಾರದ ನೀತಿಗಳು ಎಷ್ಟು ತೊಂದರೆ ಮಾಡುತ್ತಿವೆ ಎಂದು ಅವರು ವಿವರಿಸಿದ್ದಾರೆ. ಅದೇ ರೀತಿ ಕೇರಳದ ಕಾರ್ಮಿಕ ನಾಯಕರು ಕೂಡಾ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅವರು ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿ ನಿಂತಿದೆ ಎಂದು ವಿವರಿಸಿದ್ದರು” ಎಂದು ಅವರು ಹೇಳಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

“ಕೇರಳದ ಎಡಪಂಥೀಯ ಸರ್ಕಾರ ಖಾಸಗೀಕರನದ ವಿರುದ್ಧ ನಿಂತಿದೆ. ಕೊರೊನಾ ಸಂದರ್ಭದಲ್ಲಿ ಕಾರ್ಮಿಕರು, ರೈತರು ಹಾಗೂ ಬಡವರ ಹಾಗೂ ಆ ರಾಜ್ಯದ ಜನರಿಗಾಗಿ ಕೇರಳ ಸರ್ಕಾರ ಕೆಲಸ ಮಾಡಿದೆ. ಹಾಗಾಗಿ ದೇಶದ ಬೇರೆ ರಾಜ್ಯಗಳಲ್ಲಿ ಕೂಡಾ ಅದೇ ರೀತಿಯ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಅದಕ್ಕಾಗಿ ನಾವು ನಿರ್ಣಯ ಕೈಗೊಂಡಿದ್ದೇವೆ” ಎಂದು ಹೇಮಲತ ಅವರು ಹೇಳಿದರು.

ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ಹಾಗೂ ಕಾರ್ಮಿಕರು, ಕೊಳಗೇರಿ ನಿವಾಸಿಗಳ ಬದುಕು, ಮನೆಗೆಲಸದವರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ನಿರ್ಮಾಣಗೊಂಡ ಕಿರುಚಿತ್ರಗಳನ್ನು ಸಿಐಟಿಯು ಸಮ್ಮೇಳನದಲ್ಲಿ ಪ್ರದರ್ಶನ ನಡೆಸಿ ಬಹುಮಾನ ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಕೇರಳ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಕಾರ್ಮಿಕ ಪ್ರತಿನಿಧಿಗಳು ಸೇರಿದಂತೆ, ಕರ್ನಾಟಕದ ಎಲ್ಲಾ ಜಿಲ್ಲೆಗಳ ಕಾರ್ಮಿಕರು ಸೇರಿದ್ದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದವು ತುಂಬಿ ತುಳುಕಿತ್ತು. ಸಮಾರಂಭದಲ್ಲಿ ಶ್ರಮಿಕ ವರ್ಗದ ಹೋರಾಟ, ಇತಿಹಾಸ ನೆಪಿಸುವ, ಡೊಳ್ಳು ಕುಣಿತ, ತಮಟೆ ವಾದ್ಯಗಳಂತಹ ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಿತು.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...