Homeಕರ್ನಾಟಕ2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

- Advertisement -
- Advertisement -

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು ಹಾಗೂ 2024ರ ಚುನಾವಣೆಯಲ್ಲಿ ಕಾರ್ಮಿಕ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ನಿರ್ಣಯಿಸಿದೆ. ಕಾರ್ಮಿಕರು, ರೈತರು ಹಾಗೂ ಕೂಲಿಕಾರರ ಬದುಕನ್ನು ಕಸಿಯುತ್ತಿರುವ ಸರ್ಕಾರಗಳನ್ನು ಮತ್ತು ಅವುಗಳ ನೀತಿಗಳನ್ನು ಕಿತ್ತೊಗೆಯಲು ಇಡೀ ದೇಶದ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಜಾತಿ, ಧರ್ಮ, ವರ್ಣ, ವರ್ಗ ಭೇದಗಳನ್ನು ಮರೆತು ಐಕ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ಕರೆ ನೀಡಿದೆ.

ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌’ (ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನ ನಡೆದಿದ್ದು, ಭಾನುವಾರ ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವೇಳೆ ದುಡಿಯುವ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಂಡಿರುವ ಹಲವು ನಿರ್ಣಯಗಳನ್ನು ಘೋಷಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅವರು, “ಆರ್‌ಎಸ್‌ಎಸ್‌ ಅಣತಿಯಂತೆ ಒಕ್ಕೂಟ ಸರ್ಕಾರ ನಡೆಯುತ್ತಿದ್ದು, ಧರ್ಮದ ರಾಜಕಾರಣ ಮಾಡಿ ಜನರನ್ನು ಬೀದಿಗೆ ತಳ್ಳುತ್ತಿದೆ. ಅದಾನಿ, ಅಂಬಾನಿಯಂತಹ ದೇಶದ ಶ್ರೀಮಂತರ ಸಂಪತ್ತನ್ನು ಹೆಚ್ಚುಮಾಡಲು ರೈತರು, ಕಾರ್ಮಿಕರು, ಬಡವರ ಬದುಕನ್ನು ಜರ್ಜರಿತಗೊಳಿಸಿದೆ. ಇಂತಹ ಸರ್ಕಾರಕ್ಕೆ ಮಾತಿನ ಮೂಲಕ ಹೇಳಿದರೆ ತಿಳಿಯಲ್ಲ. ಹಾಗಾಗಿ ದೇಶದ ಜನರು, ರೈತರು ಕಾರ್ಮಿಕರು ಐಕ್ಯತೆ ಸಾಧಿಸಿ ಹೋರಾಟದ ಮೂಲಕವೇ ಅವರನ್ನು ಕಿತ್ತೊಗೆಯಬೇಕು” ಎಂದು ಕರೆ ನೀಡಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ
CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ

 

“ನಾಲ್ಕು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ಜಾರಿ ತಂದು ಕಾರ್ಮಿಕರು ಸಂಘ ಕಟ್ಟುವ ಹಕ್ಕನ್ನು ಕಸಿಯಲು ಮುಂದಾಗಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿದು ಮತ್ತೆ ಗುಲಾಮಿ ಸಂಸ್ಕೃತಿಯನ್ನು ಜಾರಿಗೆ ತಂದು ಕೆಲಸದ ಅವಧಿಯನ್ನು ಎಂಟರಿಂದ 12 ಗಂಟೆಗೆ ಏರಿಸಲು ಒಕ್ಕೂಟ ಸರ್ಕಾರ ಮುಂದಾಗಿದ್ದು, ಅದನ್ನು ಕಾರ್ಮಿಕ ವರ್ಗ ಹಾಗೂ ಸಿಐಟಿಯು ಪ್ರಬಲ ಹೋರಾಟದಿಂದ ಹಿಮ್ಮೆಟ್ಟಿಸಿವೆ. ಮುಂದೆಯೂ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಹೋರಾಟದ ಮೂಲಕ ಬಗ್ಗು ಬಡಿಯಬೇಕು” ಎಂದು ಅವರು ಹೇಳಿದರು.

40% ಸರ್ಕಾರ ಕಿತ್ತೊಗೆಯೋಣ; ಮೀನಾಕ್ಷಿ ಸುಂದರಂ

ಸಭೆಯಲ್ಲಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ,“ಧರ್ಮವನ್ನು ತೋರಿಸಿ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ 40% ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತು ಬಿಸಾಕಬೇಕು. ಆ ನಿಟ್ಟಿನಲ್ಲಿ 2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು. ದೆಹಲಿ ರೈತ ಹೋರಾಟ ಮೋದಿ ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಪಾಠ ಕಲಿಸಿತೋ ಅದೇ ಹೋರಾಟದ ಭಾಷೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಜನ ಅನುಸರಿಸಬೇಕು” ಎಂದು ಕರೆ ಹೇಳಿದರು.

CITU ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು

“ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಜನ ಸಾಮಾನ್ಯರು ಆಯ್ಕೆ ಮಾಡಿರುವುದಲ್ಲ. ಬದಲಾಗಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರವಾಗಿ ಆಯ್ಕೆಯಾಗಿದ್ದವರನ್ನು ಖರೀದಿಸಿ ರೂಪುಗೊಂಡಿರುವುದು. ಹಾಗಂತ ಬಿಜೆಪಿ ತೊಲಗಿಸಿ ಕಾಂಗ್ರೆಸ್, ಜೆಡಿಎಸ್ ಅಥವಾ ಇನ್ಯಾವುದೊ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಪರಿಸ್ಥಿತಿ ಬದಲಾಗುತ್ತದೆ ಎಂದು ನಂಬಲಾಗಿದೆ. ಆದರೆ, ಸರ್ಕಾರಗಳು ಅಥವಾ ಅದರ ಪ್ರತಿನಿಧಿಗಳು ಮಾತ್ರವಲ್ಲ ಅವುಗಳ ನೀತಿಗಳು ಬದಲಾಗಬೇಕಿದೆ” ಎಂದು ಅವರು ಪ್ರತಿಪಾದಿಸಿದರು.

“ಹಿಂದೆ ಐಟಿಐ ಓದಿದರೆ ಸಾಕಿತ್ತು, ಕಾರ್ಖಾನೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡಿ ನಂತರ ಖಾಯಂ ಉದ್ಯೋಗ ಪಡೆಯುವ ಅವಕಾಶ ಇತ್ತು. ಅದರೆ ಇಂದಿನ ಯುವಜನತೆ ಏನೇ ಶಿಕ್ಷಣ ಪಡೆದರೂ ಯಾವುದೇ ಮಾನ್ಯತೆ ಇಲ್ಲ. ಆದರೆ, ಒಂದು ಕಾರ್ಪೊರೇಟ್ ಕಂಪನಿ ನೀಡುವ ಸರ್ಟಿಫಿಕೇಟ್‌ಗೆ ಮಾನ್ಯತೆ ಪಡೆಯುತ್ತಿದೆ. ಕಾರ್ಮಿಕ ಕಾನೂನುಗಳ ಮೂಲಕ ಪರ್ಮನೆಂಟ್ ಕಾರ್ಮಿಕರನ್ನು ಮನೆಗೆ ಕಳಿಸುತ್ತ ಟ್ರೈನಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಶೋಷಿಸಲಾಗುತ್ತಿದೆ. ಕೈಗಾರಿಕೆ ಸ್ಥಾಪಿಸಲು ಭೂಮಿ ಕೊಟ್ಟ ರೈತರ ಮಕ್ಕಳಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ” ಎಂದು ಮೀನಾಕ್ಷಿ ಸುಂದರಂ ಅಕ್ರೋಶ ವ್ಯಕ್ತಪಡಿಸಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಿರುವ ಕಾರ್ಮಿಕರು

“ಸದಾ ಮಾಧ್ಯಮಗಳ ಮುಂದೆ ಸೈನಿಕರ ಬಗ್ಗೆ ಮಾತನಾಡುವ ಈ ಸರ್ಕಾರ, ದೇಶದ ರಕ್ಷಣೆ ಮಾಡುವವರನ್ನೂ ಕಡೆಗಣಿಸಲು ಮುಂದಾಗಿದೆ. ಅಲ್ಲಿಯೂ ಅಗ್ನಿವೀರ್ ಎಂಬ ಹೆಸರಿನಲ್ಲಿ ದೇಶದ ರಕ್ಷಣಾ ವಲಯವನ್ನು ಕಡೆಗಣಿಸಿದೆ. ಅದನ್ನೂ ಕೂಡ ಖಾಸಗಿಯವರಿಗೆ ವಹಿಸಲಾಗುತ್ತಿದೆ. ಗಡಿಯಲ್ಲಿ ಜೀವ ಕೊಡುವವರಿಗೂ ಉದ್ಯೋಗ ಭದ್ರತೆಯನ್ನು ಕಸಿಯುವ ಹುನ್ನಾರ ಮಾಡಿದೆ. ದೇಶದಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೂ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿ, ಕಾರ್ಖಾನೆಗಳು ಸೇರಿದಂತೆ ಎಲ್ಲವನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಬಿಇಎಂಎಲ್, ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ” ಎಂದು ಅವರು ಹೇಳಿದರು.

ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿದೆ: ಡಾ.ಕೆ. ಹೇಮಲತ

ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಕೆ. ಹೇಮಲತ, “ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯಗಳ ಕಾರ್ಮಿಕ ನಾಯಕರು ಸಮ್ಮೇಳನದಲ್ಲಿ ನಡೆದ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಆಗ ಅಲ್ಲಿನ ಬಿಜೆಪಿ ಸರ್ಕಾರದ ನೀತಿಗಳು ಎಷ್ಟು ತೊಂದರೆ ಮಾಡುತ್ತಿವೆ ಎಂದು ಅವರು ವಿವರಿಸಿದ್ದಾರೆ. ಅದೇ ರೀತಿ ಕೇರಳದ ಕಾರ್ಮಿಕ ನಾಯಕರು ಕೂಡಾ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅವರು ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿ ನಿಂತಿದೆ ಎಂದು ವಿವರಿಸಿದ್ದರು” ಎಂದು ಅವರು ಹೇಳಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

“ಕೇರಳದ ಎಡಪಂಥೀಯ ಸರ್ಕಾರ ಖಾಸಗೀಕರನದ ವಿರುದ್ಧ ನಿಂತಿದೆ. ಕೊರೊನಾ ಸಂದರ್ಭದಲ್ಲಿ ಕಾರ್ಮಿಕರು, ರೈತರು ಹಾಗೂ ಬಡವರ ಹಾಗೂ ಆ ರಾಜ್ಯದ ಜನರಿಗಾಗಿ ಕೇರಳ ಸರ್ಕಾರ ಕೆಲಸ ಮಾಡಿದೆ. ಹಾಗಾಗಿ ದೇಶದ ಬೇರೆ ರಾಜ್ಯಗಳಲ್ಲಿ ಕೂಡಾ ಅದೇ ರೀತಿಯ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಅದಕ್ಕಾಗಿ ನಾವು ನಿರ್ಣಯ ಕೈಗೊಂಡಿದ್ದೇವೆ” ಎಂದು ಹೇಮಲತ ಅವರು ಹೇಳಿದರು.

ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ಹಾಗೂ ಕಾರ್ಮಿಕರು, ಕೊಳಗೇರಿ ನಿವಾಸಿಗಳ ಬದುಕು, ಮನೆಗೆಲಸದವರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ನಿರ್ಮಾಣಗೊಂಡ ಕಿರುಚಿತ್ರಗಳನ್ನು ಸಿಐಟಿಯು ಸಮ್ಮೇಳನದಲ್ಲಿ ಪ್ರದರ್ಶನ ನಡೆಸಿ ಬಹುಮಾನ ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಕೇರಳ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಕಾರ್ಮಿಕ ಪ್ರತಿನಿಧಿಗಳು ಸೇರಿದಂತೆ, ಕರ್ನಾಟಕದ ಎಲ್ಲಾ ಜಿಲ್ಲೆಗಳ ಕಾರ್ಮಿಕರು ಸೇರಿದ್ದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದವು ತುಂಬಿ ತುಳುಕಿತ್ತು. ಸಮಾರಂಭದಲ್ಲಿ ಶ್ರಮಿಕ ವರ್ಗದ ಹೋರಾಟ, ಇತಿಹಾಸ ನೆಪಿಸುವ, ಡೊಳ್ಳು ಕುಣಿತ, ತಮಟೆ ವಾದ್ಯಗಳಂತಹ ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಿತು.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...