Homeಮುಖಪುಟಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

- Advertisement -
- Advertisement -

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿಸಿ) ನಿಯಂತ್ರಿಸುವ ಎಲ್ಲ ದೇವಾಲಯಗಳಿಗೆ ಹಿಂದೂಯೇತರರ ನಿಷೇಧವು ಅನ್ವಯಿಸುತ್ತದೆ, ಇದರಲ್ಲಿ ಬದರಿನಾಥ್-ಕೇದಾರನಾಥ ಧಾಮವೂ ಸೇರಿದೆ ಎಂದು ದೇವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಮುಂಬರುವ ದೇವಾಲಯ ಸಮಿತಿ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗುವುದು.

ಈ ನಿರ್ಧಾರವನ್ನು ಸಮರ್ಥಿಸುತ್ತಾ, ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ ಮಾತನಾಡಿ, ದೇವಾಲಯಗಳು ಪ್ರವಾಸಿ ಕೇಂದ್ರಗಳಲ್ಲ ಮತ್ತು ಪ್ರವೇಶವು ನಾಗರಿಕ ಹಕ್ಕುಗಳ ಸಮಸ್ಯೆಯಲ್ಲ ಎಂದು ವಾದಿಸಿದರು.

“ಕೇದಾರನಾಥ ಮತ್ತು ಬದರಿನಾಥ ಧಾಮಗಳು ಪ್ರವಾಸಿ ತಾಣಗಳಲ್ಲ. ಇವು ಆದಿ ಶಂಕರಾಚಾರ್ಯರು ಸ್ಥಾಪಿಸಿದ ವೈದಿಕ ಸಂಪ್ರದಾಯದ ಕೇಂದ್ರಗಳಾಗಿವೆ. ಭಾರತೀಯ ಸಂವಿಧಾನದ 26 ನೇ ವಿಧಿಯು ಪ್ರತಿಯೊಂದು ಧಾರ್ಮಿಕ ಪಂಗಡಕ್ಕೂ ತನ್ನದೇ ಆದ ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಈ ನಿರ್ಧಾರವು ಯಾರ ವಿರುದ್ಧವೂ ಅಲ್ಲ, ಶತಮಾನಗಳಷ್ಟು ಹಳೆಯದಾದ ನಂಬಿಕೆ, ಶಿಸ್ತು ಮತ್ತು ಶುದ್ಧತೆಯನ್ನು ರಕ್ಷಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ತಿಳಿಸಿದರು.

ಜೈನ ಮತ್ತು ಸಿಖ್ ಭಕ್ತರಿಗೂ ದೇವಾಲಯದ ಬಾಗಿಲುಗಳು ಮುಚ್ಚಲ್ಪಡುತ್ತವೆಯೇ ಎಂದು ಕೇಳಿದಾಗ, ಈ ವಿಷಯವು ಯಾವುದೇ ನಿರ್ದಿಷ್ಟ ಧರ್ಮದ ಬಗ್ಗೆ ಅಲ್ಲ. ಆದರೆ ನಂಬಿಕೆ ಮತ್ತು ಧಾರ್ಮಿಕ ಶಿಸ್ತಿನ ಬಗ್ಗೆ ಎಂದು ಅವರು ಹೇಳಿದರು.

“ಸನಾತನ ಧರ್ಮದಲ್ಲಿ ನಂಬಿಕೆ ಹೊಂದಿರುವ ಯಾರಿಗಾದರೂ ಕೇದಾರನಾಥ ಮತ್ತು ಬದರಿನಾಥ ಧಾಮದಲ್ಲಿ ಸ್ವಾಗತವಿದೆ. ಸನಾತನ ಸಂಪ್ರದಾಯದಲ್ಲಿ ನಂಬಿಕೆ ಹೊಂದಿರುವ ಯಾರಿಗಾದರೂ ಯಾವುದೇ ನಿರ್ಬಂಧವಿಲ್ಲ” ಎಂದು ಅವರು ಹೇಳಿದರು.

ಚಳಿಗಾಲ ಕಾರಣಕ್ಕೆ ಆರು ತಿಂಗಳ ಕಾಲ ಮುಚ್ಚುವಿಕೆಯ ನಂತರ ಬದರಿನಾಥ ದೇವಾಲಯವು ಏಪ್ರಿಲ್ 23 ರಂದು ತನ್ನ ದ್ವಾರಗಳನ್ನು ಮತ್ತೆ ತೆರೆಯಲಿದೆ. ಕೇದಾರನಾಥ ದೇವಾಲಯದ ದ್ವಾರಗಳನ್ನು ತೆರೆಯುವ ದಿನಾಂಕವನ್ನು ಮಹಾ ಶಿವರಾತ್ರಿಯಂದು ಘೋಷಿಸಲಾಗುವುದು.

ಕೇದಾರನಾಥ ಮತ್ತು ಬದರಿನಾಥ ಜೊತೆಗೆ, ಛೋಟಾ ಚಾರ್ ಧಾಮದ ಭಾಗವಾಗಿರುವ ಇತರ ಎರಡು ದೇವಾಲಯಗಳಲ್ಲಿ ಗಂಗೋತ್ರಿ ಮತ್ತು ಯಮುನೋತ್ರಿ ಸೇರಿವೆ. ಅವುಗಳ ಬಾಗಿಲುಗಳನ್ನು ಏಪ್ರಿಲ್ 19 ರಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಮತ್ತೆ ತೆರೆಯಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...