Homeಅಂಕಣಗಳುಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

ಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

- Advertisement -
- Advertisement -

ಸಂಪಾದಕೀಯ |

ಹೆದರಿಕೊಳ್ಳಬೇಕಿಲ್ಲ. ದೀರ್ಘವಾದ ಯಾವುದೇ ಕೆಲಸಕ್ಕೂ ಸಹನೆಯಿಲ್ಲದ ಮನೋಭಾವ ಇಂದಿನ ದಿನಮಾನದ್ದು. ಯಾವುದೂ ದೀರ್ಘವಾಗಬಾರದು, ಸ್ವಲ್ಪವೂ ಬೋರ್ ಎನಿಸಬಾರದು, ಎಲ್ಲವೂ ಇನ್‍ಸ್ಟಂಟ್ ಆಗಿರಬೇಕು. ಹಾಗಿರುವಾಗ ಸುದೀರ್ಘ ಕಾಲದ ಪ್ರಕ್ರಿಯೆಯೊಂದಕ್ಕೆ ಸಿದ್ಧರಾಗಲೇಬೇಕು ಎಂದುಕೊಂಡರೆ, ಓದುಗರು ಹೆದರಿಕೊಳ್ಳುವ ಸಾಧ್ಯತೆ ಇದೆ. ಇಲ್ಲ, ಹೆದರಿಕೊಳ್ಳಬೇಕಿಲ್ಲ.
ಏಕೆಂದರೆ, ಆಗಲೇ ಪರಿಸ್ಥಿತಿ ಕೈ ಮೀರಿ ಹೋಗಿದೆ. ನಾವು ಬದುಕುತ್ತಿರುವ ಭೂಮಿಯನ್ನು, ಲಕ್ಷ ಲಕ್ಷ ವರ್ಷಗಳಿಂದ ಉಳಿದುಕೊಂಡು ಬಂದಿದ್ದ ಭೂಮಿಯನ್ನು ಕೇವಲ 100 ವರ್ಷಗಳಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಹಾಳು ಮಾಡಿದ್ದೇವೆ.
ಹಾಗಾಗಿ ತುರ್ತಾಗಿ ಏನೋ ಮಾಡಿ ಇದನ್ನು ಒಮ್ಮಿಂದೊಮ್ಮೆಗೇ ಸುಧಾರಿಸಲೂ ಸಾಧ್ಯವಿಲ್ಲ. ಮೊದಲಿಗೆ ಇನ್ನಷ್ಟು ಹಾಳುಗೆಡವುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಭೂಮಿಗೆ ಜ್ವರ ಬರಿಸಿರುವುದರಿಂದ, ಅದರ ತಾಪವನ್ನು ತಡೆದುಕೊಳ್ಳಲೇಬೇಕು, ಬೇರೆ ದಾರಿಯಿಲ್ಲ. ಇದನ್ನು ತಂಪಾಗಿಸಲು, ಪುನಶ್ಚೇತನಗೊಳಿಸಲು ದೃಢವಾದ ದೀರ್ಘಕಾಲಿಕ ಹೆಜ್ಜೆಗಳನ್ನಿಡಬೇಕು.
ಚುನಾವಣಾ ಕಾವು ಸಹಾ ಭೂಮಿಯ ಜ್ವರವನ್ನು ಏರಿಸಿದೆಯೆಂದರೆ ಆಶ್ಚರ್ಯವಾಗಬಹುದು. ಹೌದು, ಚುನಾವಣೆಯ ಸಂದರ್ಭದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಸಹಾ ಯಾರಿಗೂ (ಬರಪೀಡಿತವಾದ ಪ್ರದೇಶಗಳ ರೈತರಿಗೂ) ಒಂದು ಪ್ರಮುಖ ವಿಷಯವೆನಿಸಿಲ್ಲ. ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ಗಳೆರಡೂ ‘ತಾಪಮಾನ ಏರಿಕೆ’ಯ ಕುರಿತು ತಮ್ಮ ಪ್ರಣಾಳಿಕೆಗಳಲ್ಲಿ ಪ್ರಸ್ತಾಪಿಸಿವೆ. ನಿರ್ದಿಷ್ಟವಾದ ಕೆಲವು ಅಂಶಗಳೂ ಅವುಗಳಲ್ಲಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಒಂದೆರಡು ಹೆಜ್ಜೆ ಮುಂದಿದ್ದು, ಮಹಾರಾಷ್ಟ್ರದ ಕಾಂಗ್ರೆಸ್ ಘಟಕವು, ಏಪ್ರಿಲ್ 8ರಂದು ಪ್ರತ್ಯೇಕ ಪರಿಸರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಆದರೆ, ಈ ಎಲ್ಲಾ ಭರವಸೆಗಳೂ ಸಹಾ ಪರಿಣಾಮಕಾರಿಯಾದ ಫಲಿತಾಂಶಗಳಾಗಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುತ್ತವೆಂಬ ನಂಬಿಕೆ ಯಾರಿಗೂ ಇಲ್ಲ. ಅಷ್ಟೇ ಅಲ್ಲದೇ, ಈ ಕ್ರಮಗಳಷ್ಟೇ ಭೂಮಿಯನ್ನು ಉಳಿಸಲು ಸಾಧ್ಯವೂ ಇಲ್ಲ.
ಜನಸಂಖ್ಯೆಯ ಬಹಳಷ್ಟು ಜನರು ತೊಡಗಿಕೊಂಡಿರುವ ಕೃಷಿಯಿಂದ ಹಿಡಿದು, ಬೆರಳೆಣಿಕೆಯ ಕುಟುಂಬಗಳಿಗೆ ಭಾರೀ ಲಾಭ ತಂದುಕೊಡುವ ಉದ್ದಿಮೆಗಳವರೆಗೆ ಎಲ್ಲವೂ ಪರಿಸರ, ಅಂತರ್ಜಲ ಮತ್ತು ಗಾಳಿಯನ್ನು ಮನುಕುಲಕ್ಕೆ ಅಪಾಯಕಾರಿಯನ್ನಾಗಿಸುತ್ತಿದೆ. ಕರ್ನಾಟಕದಂತಹ ರಾಜ್ಯವು ಕಳೆದ 19 ವರ್ಷಗಳಲ್ಲಿ 16 ವರ್ಷಗಳು, ತನ್ನ ಭೂಭಾಗದ ಅರ್ಧದಷ್ಟು ಪ್ರದೇಶದಲ್ಲಿ ಬರ ಕಂಡಿದೆ. ಹೀಗಿರುವಾಗ ನಮಗೆ ಭಾರೀ ತೊಂದರೆ ಕಾದಿದೆಯೆಂಬ ಅಪಾಯದ ಭಾವವನ್ನು ಎಲ್ಲರೂ ತಳೆಯದೇ ಇದಕ್ಕೆ ಪರಿಹಾರವೆಲ್ಲಿಯದು?
ಕನಿಷ್ಠ ಚುನಾವಣೆಯ ನಂತರವಾದರೂ, ಈ ನಿಟ್ಟಿನಲ್ಲಿ ಸಮರೋಪಾದಿ ಕೆಲಸಗಳಾಗಬೇಕು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಕೈ ಜೋಡಿಸಬೇಕು. ಇದೇ ಮೇ 17ರಿಂದ 19ರವರೆಗೆ ತುಮಕೂರು ಜಿಲ್ಲೆಯ ಸಮತಾ ವಿದ್ಯಾಲಯದ ಆವರಣದಲ್ಲಿ ಆಸಕ್ತರಿಗೆ ಒಂದು ಕಾರ್ಯಾಗಾರವನ್ನು ಪ್ರೊ.ರವಿವರ್ಮಕುಮಾರ್ ಹಾಗೂ ಪ್ರೊ.ಯತಿರಾಜುರಂತಹ ಹಿರಿಯರು ಆಯೋಜಿಸುತ್ತಿದ್ದಾರೆ. ನೀರಿನ ತಜ್ಞ ರಾಜೇಂದ್ರ ಸಿಂಗ್ ಸಹಾ ಅಲ್ಲಿಗೆ ಬರುತ್ತಿದ್ದಾರೆ. ಇಂತಹ ಎಷ್ಟೋ ಪ್ರಯತ್ನಗಳು ಆಗುವ ಅಗತ್ಯವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ತಮ್ಮ ವ್ಯಾಪ್ತಿಯ ಕೆರೆಗಳ ಹೂಳೆತ್ತಿಸುವುದನ್ನು ಆದ್ಯತೆಯ ವಿಷಯವನ್ನಾಗಿಸಿಕೊಂಡಿದ್ದಾರೆ. ಇಂತಹುದೇ ಕೆಲಸವನ್ನು ಮಾರುತಿ ಪ್ರಸನ್ನ ಎಂಬ ತಹಸೀಲ್ದಾರರು ಮಂಡ್ಯ ತಾಲೂಕಿನಲ್ಲಿ ಮಾಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನರೇಗಾ ಮೂಲಕವೇ ಕೆರೆಗಳನ್ನು ಸಂಪನ್ನಗೊಳಿಸುವ ಕೆಲಸವನ್ನು ಮಾಡಲಾಗಿತ್ತು. ಹೋರಾಟಗಾರ್ತಿ ಕೆ.ನೀಲಾರಂಥವರು ಅದರ ಪ್ರೇರಕ ಶಕ್ತಿಯಾಗಿದ್ದರು. ಹಾಸನದಲ್ಲಿ ರೂಪಾ ಹಾಸನ, ಅಧಿಕಾರಿ ಎಚ್.ಎಲ್.ನಾಗರಾಜು ಅವರುಗಳೂ ರಚನಾತ್ಮಕವಾದ ಈ ಕೆಲಸಗಳಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಸರ್ಕಾರ ಮತ್ತು ಜನರು ಜೊತೆಗೂಡಬಹುದಾದ ಬಹಳ ಮುಖ್ಯವಾದ ಕ್ಷೇತ್ರ ಇದು.
ಆದರೆ, ನಮ್ಮ ಹೆಚ್ಚಿನ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿಯು ಸಾಮಾನ್ಯವಾಗಿ ಇಂಥವನ್ನು ಹಾಳುಗೆಡಹುವ ಯೋಜನೆಗಳನ್ನೇ ರೂಪಿಸುತ್ತಾರೆ. ಪ್ರಾಮಾಣಿಕರೆಂದು ಹೆಸರು ಮಾಡಿರುವವರು ರೂಲ್ ಪುಸ್ತಕವನ್ನಿಟ್ಟುಕೊಂಡು ತೊಂದರೆ ಕೊಡಲು ಸಾಧ್ಯವಿರುವುದನ್ನೆಲ್ಲಾ ಮಾಡುತ್ತಾರೆ. ಪಾರ್ಲಿಮೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವರು, ‘ಹೇಗೂ ಕರ್ನಾಟಕದ ಚುನಾವಣೆ ಮುಗಿದಿದೆ. ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಜಿ.ಪಂ ಸಿಇಓಗಳ ಸಭೆ ಕರೆಯಬೇಕು’ ಎಂದರೆ ಚುನಾವಣಾ ಆಯೋಗ ಬಿಡುತ್ತಿಲ್ಲವಂತೆ.
ನಾವಿರುವ ಪರಿಸರ, ನೆಲ, ಜಲಗಳನ್ನು ಸಂರಕ್ಷಿಸುವುದು ಮುಂದಿನ ದಿನಗಳಲ್ಲಿ ಎಲ್ಲಾ ಪಂಥೀಯರ, ವರ್ಗ ಜಾತಿ ಧರ್ಮ ಲಿಂಗಗಳ ಜನರ ಆದ್ಯತೆಯಾಗದೇ ಉಳಿಗಾಲವಿಲ್ಲ. ಅದರಲ್ಲೂ ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಬರಪೀಡಿತ ಪ್ರದೇಶವನ್ನು ಹೊಂದಿರುವ ಕರ್ನಾಟಕವು ಎಚ್ಚೆತ್ತುಕೊಳ್ಳಬೇಕಿದೆ. ಶಿರಾದಲ್ಲಿ ನಡೆಯುತ್ತಿರುವ ಶಿಬಿರವು ಚೈತನ್ಯವುಳ್ಳ ಯುವಜನರನ್ನು ಸಿದ್ಧಗೊಳಿಸಿ, ಕರ್ನಾಟಕವನ್ನು ಜಾಗೃತಿಗೊಳಿಸಲಿ ಎಂಬ ಆಶಯ ನಮ್ಮದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...