Homeಅಂಕಣಗಳುಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

ಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

- Advertisement -
- Advertisement -

ಸಂಪಾದಕೀಯ |

ಹೆದರಿಕೊಳ್ಳಬೇಕಿಲ್ಲ. ದೀರ್ಘವಾದ ಯಾವುದೇ ಕೆಲಸಕ್ಕೂ ಸಹನೆಯಿಲ್ಲದ ಮನೋಭಾವ ಇಂದಿನ ದಿನಮಾನದ್ದು. ಯಾವುದೂ ದೀರ್ಘವಾಗಬಾರದು, ಸ್ವಲ್ಪವೂ ಬೋರ್ ಎನಿಸಬಾರದು, ಎಲ್ಲವೂ ಇನ್‍ಸ್ಟಂಟ್ ಆಗಿರಬೇಕು. ಹಾಗಿರುವಾಗ ಸುದೀರ್ಘ ಕಾಲದ ಪ್ರಕ್ರಿಯೆಯೊಂದಕ್ಕೆ ಸಿದ್ಧರಾಗಲೇಬೇಕು ಎಂದುಕೊಂಡರೆ, ಓದುಗರು ಹೆದರಿಕೊಳ್ಳುವ ಸಾಧ್ಯತೆ ಇದೆ. ಇಲ್ಲ, ಹೆದರಿಕೊಳ್ಳಬೇಕಿಲ್ಲ.
ಏಕೆಂದರೆ, ಆಗಲೇ ಪರಿಸ್ಥಿತಿ ಕೈ ಮೀರಿ ಹೋಗಿದೆ. ನಾವು ಬದುಕುತ್ತಿರುವ ಭೂಮಿಯನ್ನು, ಲಕ್ಷ ಲಕ್ಷ ವರ್ಷಗಳಿಂದ ಉಳಿದುಕೊಂಡು ಬಂದಿದ್ದ ಭೂಮಿಯನ್ನು ಕೇವಲ 100 ವರ್ಷಗಳಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಹಾಳು ಮಾಡಿದ್ದೇವೆ.
ಹಾಗಾಗಿ ತುರ್ತಾಗಿ ಏನೋ ಮಾಡಿ ಇದನ್ನು ಒಮ್ಮಿಂದೊಮ್ಮೆಗೇ ಸುಧಾರಿಸಲೂ ಸಾಧ್ಯವಿಲ್ಲ. ಮೊದಲಿಗೆ ಇನ್ನಷ್ಟು ಹಾಳುಗೆಡವುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಭೂಮಿಗೆ ಜ್ವರ ಬರಿಸಿರುವುದರಿಂದ, ಅದರ ತಾಪವನ್ನು ತಡೆದುಕೊಳ್ಳಲೇಬೇಕು, ಬೇರೆ ದಾರಿಯಿಲ್ಲ. ಇದನ್ನು ತಂಪಾಗಿಸಲು, ಪುನಶ್ಚೇತನಗೊಳಿಸಲು ದೃಢವಾದ ದೀರ್ಘಕಾಲಿಕ ಹೆಜ್ಜೆಗಳನ್ನಿಡಬೇಕು.
ಚುನಾವಣಾ ಕಾವು ಸಹಾ ಭೂಮಿಯ ಜ್ವರವನ್ನು ಏರಿಸಿದೆಯೆಂದರೆ ಆಶ್ಚರ್ಯವಾಗಬಹುದು. ಹೌದು, ಚುನಾವಣೆಯ ಸಂದರ್ಭದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಸಹಾ ಯಾರಿಗೂ (ಬರಪೀಡಿತವಾದ ಪ್ರದೇಶಗಳ ರೈತರಿಗೂ) ಒಂದು ಪ್ರಮುಖ ವಿಷಯವೆನಿಸಿಲ್ಲ. ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ಗಳೆರಡೂ ‘ತಾಪಮಾನ ಏರಿಕೆ’ಯ ಕುರಿತು ತಮ್ಮ ಪ್ರಣಾಳಿಕೆಗಳಲ್ಲಿ ಪ್ರಸ್ತಾಪಿಸಿವೆ. ನಿರ್ದಿಷ್ಟವಾದ ಕೆಲವು ಅಂಶಗಳೂ ಅವುಗಳಲ್ಲಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಒಂದೆರಡು ಹೆಜ್ಜೆ ಮುಂದಿದ್ದು, ಮಹಾರಾಷ್ಟ್ರದ ಕಾಂಗ್ರೆಸ್ ಘಟಕವು, ಏಪ್ರಿಲ್ 8ರಂದು ಪ್ರತ್ಯೇಕ ಪರಿಸರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಆದರೆ, ಈ ಎಲ್ಲಾ ಭರವಸೆಗಳೂ ಸಹಾ ಪರಿಣಾಮಕಾರಿಯಾದ ಫಲಿತಾಂಶಗಳಾಗಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುತ್ತವೆಂಬ ನಂಬಿಕೆ ಯಾರಿಗೂ ಇಲ್ಲ. ಅಷ್ಟೇ ಅಲ್ಲದೇ, ಈ ಕ್ರಮಗಳಷ್ಟೇ ಭೂಮಿಯನ್ನು ಉಳಿಸಲು ಸಾಧ್ಯವೂ ಇಲ್ಲ.
ಜನಸಂಖ್ಯೆಯ ಬಹಳಷ್ಟು ಜನರು ತೊಡಗಿಕೊಂಡಿರುವ ಕೃಷಿಯಿಂದ ಹಿಡಿದು, ಬೆರಳೆಣಿಕೆಯ ಕುಟುಂಬಗಳಿಗೆ ಭಾರೀ ಲಾಭ ತಂದುಕೊಡುವ ಉದ್ದಿಮೆಗಳವರೆಗೆ ಎಲ್ಲವೂ ಪರಿಸರ, ಅಂತರ್ಜಲ ಮತ್ತು ಗಾಳಿಯನ್ನು ಮನುಕುಲಕ್ಕೆ ಅಪಾಯಕಾರಿಯನ್ನಾಗಿಸುತ್ತಿದೆ. ಕರ್ನಾಟಕದಂತಹ ರಾಜ್ಯವು ಕಳೆದ 19 ವರ್ಷಗಳಲ್ಲಿ 16 ವರ್ಷಗಳು, ತನ್ನ ಭೂಭಾಗದ ಅರ್ಧದಷ್ಟು ಪ್ರದೇಶದಲ್ಲಿ ಬರ ಕಂಡಿದೆ. ಹೀಗಿರುವಾಗ ನಮಗೆ ಭಾರೀ ತೊಂದರೆ ಕಾದಿದೆಯೆಂಬ ಅಪಾಯದ ಭಾವವನ್ನು ಎಲ್ಲರೂ ತಳೆಯದೇ ಇದಕ್ಕೆ ಪರಿಹಾರವೆಲ್ಲಿಯದು?
ಕನಿಷ್ಠ ಚುನಾವಣೆಯ ನಂತರವಾದರೂ, ಈ ನಿಟ್ಟಿನಲ್ಲಿ ಸಮರೋಪಾದಿ ಕೆಲಸಗಳಾಗಬೇಕು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಕೈ ಜೋಡಿಸಬೇಕು. ಇದೇ ಮೇ 17ರಿಂದ 19ರವರೆಗೆ ತುಮಕೂರು ಜಿಲ್ಲೆಯ ಸಮತಾ ವಿದ್ಯಾಲಯದ ಆವರಣದಲ್ಲಿ ಆಸಕ್ತರಿಗೆ ಒಂದು ಕಾರ್ಯಾಗಾರವನ್ನು ಪ್ರೊ.ರವಿವರ್ಮಕುಮಾರ್ ಹಾಗೂ ಪ್ರೊ.ಯತಿರಾಜುರಂತಹ ಹಿರಿಯರು ಆಯೋಜಿಸುತ್ತಿದ್ದಾರೆ. ನೀರಿನ ತಜ್ಞ ರಾಜೇಂದ್ರ ಸಿಂಗ್ ಸಹಾ ಅಲ್ಲಿಗೆ ಬರುತ್ತಿದ್ದಾರೆ. ಇಂತಹ ಎಷ್ಟೋ ಪ್ರಯತ್ನಗಳು ಆಗುವ ಅಗತ್ಯವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ತಮ್ಮ ವ್ಯಾಪ್ತಿಯ ಕೆರೆಗಳ ಹೂಳೆತ್ತಿಸುವುದನ್ನು ಆದ್ಯತೆಯ ವಿಷಯವನ್ನಾಗಿಸಿಕೊಂಡಿದ್ದಾರೆ. ಇಂತಹುದೇ ಕೆಲಸವನ್ನು ಮಾರುತಿ ಪ್ರಸನ್ನ ಎಂಬ ತಹಸೀಲ್ದಾರರು ಮಂಡ್ಯ ತಾಲೂಕಿನಲ್ಲಿ ಮಾಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನರೇಗಾ ಮೂಲಕವೇ ಕೆರೆಗಳನ್ನು ಸಂಪನ್ನಗೊಳಿಸುವ ಕೆಲಸವನ್ನು ಮಾಡಲಾಗಿತ್ತು. ಹೋರಾಟಗಾರ್ತಿ ಕೆ.ನೀಲಾರಂಥವರು ಅದರ ಪ್ರೇರಕ ಶಕ್ತಿಯಾಗಿದ್ದರು. ಹಾಸನದಲ್ಲಿ ರೂಪಾ ಹಾಸನ, ಅಧಿಕಾರಿ ಎಚ್.ಎಲ್.ನಾಗರಾಜು ಅವರುಗಳೂ ರಚನಾತ್ಮಕವಾದ ಈ ಕೆಲಸಗಳಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಸರ್ಕಾರ ಮತ್ತು ಜನರು ಜೊತೆಗೂಡಬಹುದಾದ ಬಹಳ ಮುಖ್ಯವಾದ ಕ್ಷೇತ್ರ ಇದು.
ಆದರೆ, ನಮ್ಮ ಹೆಚ್ಚಿನ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿಯು ಸಾಮಾನ್ಯವಾಗಿ ಇಂಥವನ್ನು ಹಾಳುಗೆಡಹುವ ಯೋಜನೆಗಳನ್ನೇ ರೂಪಿಸುತ್ತಾರೆ. ಪ್ರಾಮಾಣಿಕರೆಂದು ಹೆಸರು ಮಾಡಿರುವವರು ರೂಲ್ ಪುಸ್ತಕವನ್ನಿಟ್ಟುಕೊಂಡು ತೊಂದರೆ ಕೊಡಲು ಸಾಧ್ಯವಿರುವುದನ್ನೆಲ್ಲಾ ಮಾಡುತ್ತಾರೆ. ಪಾರ್ಲಿಮೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವರು, ‘ಹೇಗೂ ಕರ್ನಾಟಕದ ಚುನಾವಣೆ ಮುಗಿದಿದೆ. ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಜಿ.ಪಂ ಸಿಇಓಗಳ ಸಭೆ ಕರೆಯಬೇಕು’ ಎಂದರೆ ಚುನಾವಣಾ ಆಯೋಗ ಬಿಡುತ್ತಿಲ್ಲವಂತೆ.
ನಾವಿರುವ ಪರಿಸರ, ನೆಲ, ಜಲಗಳನ್ನು ಸಂರಕ್ಷಿಸುವುದು ಮುಂದಿನ ದಿನಗಳಲ್ಲಿ ಎಲ್ಲಾ ಪಂಥೀಯರ, ವರ್ಗ ಜಾತಿ ಧರ್ಮ ಲಿಂಗಗಳ ಜನರ ಆದ್ಯತೆಯಾಗದೇ ಉಳಿಗಾಲವಿಲ್ಲ. ಅದರಲ್ಲೂ ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಬರಪೀಡಿತ ಪ್ರದೇಶವನ್ನು ಹೊಂದಿರುವ ಕರ್ನಾಟಕವು ಎಚ್ಚೆತ್ತುಕೊಳ್ಳಬೇಕಿದೆ. ಶಿರಾದಲ್ಲಿ ನಡೆಯುತ್ತಿರುವ ಶಿಬಿರವು ಚೈತನ್ಯವುಳ್ಳ ಯುವಜನರನ್ನು ಸಿದ್ಧಗೊಳಿಸಿ, ಕರ್ನಾಟಕವನ್ನು ಜಾಗೃತಿಗೊಳಿಸಲಿ ಎಂಬ ಆಶಯ ನಮ್ಮದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...