Homeಅಂಕಣಗಳುಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

ಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

- Advertisement -
- Advertisement -

ಸಂಪಾದಕೀಯ |

ಹೆದರಿಕೊಳ್ಳಬೇಕಿಲ್ಲ. ದೀರ್ಘವಾದ ಯಾವುದೇ ಕೆಲಸಕ್ಕೂ ಸಹನೆಯಿಲ್ಲದ ಮನೋಭಾವ ಇಂದಿನ ದಿನಮಾನದ್ದು. ಯಾವುದೂ ದೀರ್ಘವಾಗಬಾರದು, ಸ್ವಲ್ಪವೂ ಬೋರ್ ಎನಿಸಬಾರದು, ಎಲ್ಲವೂ ಇನ್‍ಸ್ಟಂಟ್ ಆಗಿರಬೇಕು. ಹಾಗಿರುವಾಗ ಸುದೀರ್ಘ ಕಾಲದ ಪ್ರಕ್ರಿಯೆಯೊಂದಕ್ಕೆ ಸಿದ್ಧರಾಗಲೇಬೇಕು ಎಂದುಕೊಂಡರೆ, ಓದುಗರು ಹೆದರಿಕೊಳ್ಳುವ ಸಾಧ್ಯತೆ ಇದೆ. ಇಲ್ಲ, ಹೆದರಿಕೊಳ್ಳಬೇಕಿಲ್ಲ.
ಏಕೆಂದರೆ, ಆಗಲೇ ಪರಿಸ್ಥಿತಿ ಕೈ ಮೀರಿ ಹೋಗಿದೆ. ನಾವು ಬದುಕುತ್ತಿರುವ ಭೂಮಿಯನ್ನು, ಲಕ್ಷ ಲಕ್ಷ ವರ್ಷಗಳಿಂದ ಉಳಿದುಕೊಂಡು ಬಂದಿದ್ದ ಭೂಮಿಯನ್ನು ಕೇವಲ 100 ವರ್ಷಗಳಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಹಾಳು ಮಾಡಿದ್ದೇವೆ.
ಹಾಗಾಗಿ ತುರ್ತಾಗಿ ಏನೋ ಮಾಡಿ ಇದನ್ನು ಒಮ್ಮಿಂದೊಮ್ಮೆಗೇ ಸುಧಾರಿಸಲೂ ಸಾಧ್ಯವಿಲ್ಲ. ಮೊದಲಿಗೆ ಇನ್ನಷ್ಟು ಹಾಳುಗೆಡವುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಭೂಮಿಗೆ ಜ್ವರ ಬರಿಸಿರುವುದರಿಂದ, ಅದರ ತಾಪವನ್ನು ತಡೆದುಕೊಳ್ಳಲೇಬೇಕು, ಬೇರೆ ದಾರಿಯಿಲ್ಲ. ಇದನ್ನು ತಂಪಾಗಿಸಲು, ಪುನಶ್ಚೇತನಗೊಳಿಸಲು ದೃಢವಾದ ದೀರ್ಘಕಾಲಿಕ ಹೆಜ್ಜೆಗಳನ್ನಿಡಬೇಕು.
ಚುನಾವಣಾ ಕಾವು ಸಹಾ ಭೂಮಿಯ ಜ್ವರವನ್ನು ಏರಿಸಿದೆಯೆಂದರೆ ಆಶ್ಚರ್ಯವಾಗಬಹುದು. ಹೌದು, ಚುನಾವಣೆಯ ಸಂದರ್ಭದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಸಹಾ ಯಾರಿಗೂ (ಬರಪೀಡಿತವಾದ ಪ್ರದೇಶಗಳ ರೈತರಿಗೂ) ಒಂದು ಪ್ರಮುಖ ವಿಷಯವೆನಿಸಿಲ್ಲ. ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ಗಳೆರಡೂ ‘ತಾಪಮಾನ ಏರಿಕೆ’ಯ ಕುರಿತು ತಮ್ಮ ಪ್ರಣಾಳಿಕೆಗಳಲ್ಲಿ ಪ್ರಸ್ತಾಪಿಸಿವೆ. ನಿರ್ದಿಷ್ಟವಾದ ಕೆಲವು ಅಂಶಗಳೂ ಅವುಗಳಲ್ಲಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಒಂದೆರಡು ಹೆಜ್ಜೆ ಮುಂದಿದ್ದು, ಮಹಾರಾಷ್ಟ್ರದ ಕಾಂಗ್ರೆಸ್ ಘಟಕವು, ಏಪ್ರಿಲ್ 8ರಂದು ಪ್ರತ್ಯೇಕ ಪರಿಸರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಆದರೆ, ಈ ಎಲ್ಲಾ ಭರವಸೆಗಳೂ ಸಹಾ ಪರಿಣಾಮಕಾರಿಯಾದ ಫಲಿತಾಂಶಗಳಾಗಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುತ್ತವೆಂಬ ನಂಬಿಕೆ ಯಾರಿಗೂ ಇಲ್ಲ. ಅಷ್ಟೇ ಅಲ್ಲದೇ, ಈ ಕ್ರಮಗಳಷ್ಟೇ ಭೂಮಿಯನ್ನು ಉಳಿಸಲು ಸಾಧ್ಯವೂ ಇಲ್ಲ.
ಜನಸಂಖ್ಯೆಯ ಬಹಳಷ್ಟು ಜನರು ತೊಡಗಿಕೊಂಡಿರುವ ಕೃಷಿಯಿಂದ ಹಿಡಿದು, ಬೆರಳೆಣಿಕೆಯ ಕುಟುಂಬಗಳಿಗೆ ಭಾರೀ ಲಾಭ ತಂದುಕೊಡುವ ಉದ್ದಿಮೆಗಳವರೆಗೆ ಎಲ್ಲವೂ ಪರಿಸರ, ಅಂತರ್ಜಲ ಮತ್ತು ಗಾಳಿಯನ್ನು ಮನುಕುಲಕ್ಕೆ ಅಪಾಯಕಾರಿಯನ್ನಾಗಿಸುತ್ತಿದೆ. ಕರ್ನಾಟಕದಂತಹ ರಾಜ್ಯವು ಕಳೆದ 19 ವರ್ಷಗಳಲ್ಲಿ 16 ವರ್ಷಗಳು, ತನ್ನ ಭೂಭಾಗದ ಅರ್ಧದಷ್ಟು ಪ್ರದೇಶದಲ್ಲಿ ಬರ ಕಂಡಿದೆ. ಹೀಗಿರುವಾಗ ನಮಗೆ ಭಾರೀ ತೊಂದರೆ ಕಾದಿದೆಯೆಂಬ ಅಪಾಯದ ಭಾವವನ್ನು ಎಲ್ಲರೂ ತಳೆಯದೇ ಇದಕ್ಕೆ ಪರಿಹಾರವೆಲ್ಲಿಯದು?
ಕನಿಷ್ಠ ಚುನಾವಣೆಯ ನಂತರವಾದರೂ, ಈ ನಿಟ್ಟಿನಲ್ಲಿ ಸಮರೋಪಾದಿ ಕೆಲಸಗಳಾಗಬೇಕು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಕೈ ಜೋಡಿಸಬೇಕು. ಇದೇ ಮೇ 17ರಿಂದ 19ರವರೆಗೆ ತುಮಕೂರು ಜಿಲ್ಲೆಯ ಸಮತಾ ವಿದ್ಯಾಲಯದ ಆವರಣದಲ್ಲಿ ಆಸಕ್ತರಿಗೆ ಒಂದು ಕಾರ್ಯಾಗಾರವನ್ನು ಪ್ರೊ.ರವಿವರ್ಮಕುಮಾರ್ ಹಾಗೂ ಪ್ರೊ.ಯತಿರಾಜುರಂತಹ ಹಿರಿಯರು ಆಯೋಜಿಸುತ್ತಿದ್ದಾರೆ. ನೀರಿನ ತಜ್ಞ ರಾಜೇಂದ್ರ ಸಿಂಗ್ ಸಹಾ ಅಲ್ಲಿಗೆ ಬರುತ್ತಿದ್ದಾರೆ. ಇಂತಹ ಎಷ್ಟೋ ಪ್ರಯತ್ನಗಳು ಆಗುವ ಅಗತ್ಯವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ತಮ್ಮ ವ್ಯಾಪ್ತಿಯ ಕೆರೆಗಳ ಹೂಳೆತ್ತಿಸುವುದನ್ನು ಆದ್ಯತೆಯ ವಿಷಯವನ್ನಾಗಿಸಿಕೊಂಡಿದ್ದಾರೆ. ಇಂತಹುದೇ ಕೆಲಸವನ್ನು ಮಾರುತಿ ಪ್ರಸನ್ನ ಎಂಬ ತಹಸೀಲ್ದಾರರು ಮಂಡ್ಯ ತಾಲೂಕಿನಲ್ಲಿ ಮಾಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನರೇಗಾ ಮೂಲಕವೇ ಕೆರೆಗಳನ್ನು ಸಂಪನ್ನಗೊಳಿಸುವ ಕೆಲಸವನ್ನು ಮಾಡಲಾಗಿತ್ತು. ಹೋರಾಟಗಾರ್ತಿ ಕೆ.ನೀಲಾರಂಥವರು ಅದರ ಪ್ರೇರಕ ಶಕ್ತಿಯಾಗಿದ್ದರು. ಹಾಸನದಲ್ಲಿ ರೂಪಾ ಹಾಸನ, ಅಧಿಕಾರಿ ಎಚ್.ಎಲ್.ನಾಗರಾಜು ಅವರುಗಳೂ ರಚನಾತ್ಮಕವಾದ ಈ ಕೆಲಸಗಳಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಸರ್ಕಾರ ಮತ್ತು ಜನರು ಜೊತೆಗೂಡಬಹುದಾದ ಬಹಳ ಮುಖ್ಯವಾದ ಕ್ಷೇತ್ರ ಇದು.
ಆದರೆ, ನಮ್ಮ ಹೆಚ್ಚಿನ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿಯು ಸಾಮಾನ್ಯವಾಗಿ ಇಂಥವನ್ನು ಹಾಳುಗೆಡಹುವ ಯೋಜನೆಗಳನ್ನೇ ರೂಪಿಸುತ್ತಾರೆ. ಪ್ರಾಮಾಣಿಕರೆಂದು ಹೆಸರು ಮಾಡಿರುವವರು ರೂಲ್ ಪುಸ್ತಕವನ್ನಿಟ್ಟುಕೊಂಡು ತೊಂದರೆ ಕೊಡಲು ಸಾಧ್ಯವಿರುವುದನ್ನೆಲ್ಲಾ ಮಾಡುತ್ತಾರೆ. ಪಾರ್ಲಿಮೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವರು, ‘ಹೇಗೂ ಕರ್ನಾಟಕದ ಚುನಾವಣೆ ಮುಗಿದಿದೆ. ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಜಿ.ಪಂ ಸಿಇಓಗಳ ಸಭೆ ಕರೆಯಬೇಕು’ ಎಂದರೆ ಚುನಾವಣಾ ಆಯೋಗ ಬಿಡುತ್ತಿಲ್ಲವಂತೆ.
ನಾವಿರುವ ಪರಿಸರ, ನೆಲ, ಜಲಗಳನ್ನು ಸಂರಕ್ಷಿಸುವುದು ಮುಂದಿನ ದಿನಗಳಲ್ಲಿ ಎಲ್ಲಾ ಪಂಥೀಯರ, ವರ್ಗ ಜಾತಿ ಧರ್ಮ ಲಿಂಗಗಳ ಜನರ ಆದ್ಯತೆಯಾಗದೇ ಉಳಿಗಾಲವಿಲ್ಲ. ಅದರಲ್ಲೂ ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಬರಪೀಡಿತ ಪ್ರದೇಶವನ್ನು ಹೊಂದಿರುವ ಕರ್ನಾಟಕವು ಎಚ್ಚೆತ್ತುಕೊಳ್ಳಬೇಕಿದೆ. ಶಿರಾದಲ್ಲಿ ನಡೆಯುತ್ತಿರುವ ಶಿಬಿರವು ಚೈತನ್ಯವುಳ್ಳ ಯುವಜನರನ್ನು ಸಿದ್ಧಗೊಳಿಸಿ, ಕರ್ನಾಟಕವನ್ನು ಜಾಗೃತಿಗೊಳಿಸಲಿ ಎಂಬ ಆಶಯ ನಮ್ಮದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...