Homeಅಂಕಣಗಳುಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

ಸುದೀರ್ಘ ಕಾಲದ ಪರಿಸರ ಪುನಶ್ಚೇತನದ ಕಾರ್ಯಕ್ರಮಗಳಿಗೆ ಸಿದ್ಧರಾಗೋಣ

- Advertisement -
- Advertisement -

ಸಂಪಾದಕೀಯ |

ಹೆದರಿಕೊಳ್ಳಬೇಕಿಲ್ಲ. ದೀರ್ಘವಾದ ಯಾವುದೇ ಕೆಲಸಕ್ಕೂ ಸಹನೆಯಿಲ್ಲದ ಮನೋಭಾವ ಇಂದಿನ ದಿನಮಾನದ್ದು. ಯಾವುದೂ ದೀರ್ಘವಾಗಬಾರದು, ಸ್ವಲ್ಪವೂ ಬೋರ್ ಎನಿಸಬಾರದು, ಎಲ್ಲವೂ ಇನ್‍ಸ್ಟಂಟ್ ಆಗಿರಬೇಕು. ಹಾಗಿರುವಾಗ ಸುದೀರ್ಘ ಕಾಲದ ಪ್ರಕ್ರಿಯೆಯೊಂದಕ್ಕೆ ಸಿದ್ಧರಾಗಲೇಬೇಕು ಎಂದುಕೊಂಡರೆ, ಓದುಗರು ಹೆದರಿಕೊಳ್ಳುವ ಸಾಧ್ಯತೆ ಇದೆ. ಇಲ್ಲ, ಹೆದರಿಕೊಳ್ಳಬೇಕಿಲ್ಲ.
ಏಕೆಂದರೆ, ಆಗಲೇ ಪರಿಸ್ಥಿತಿ ಕೈ ಮೀರಿ ಹೋಗಿದೆ. ನಾವು ಬದುಕುತ್ತಿರುವ ಭೂಮಿಯನ್ನು, ಲಕ್ಷ ಲಕ್ಷ ವರ್ಷಗಳಿಂದ ಉಳಿದುಕೊಂಡು ಬಂದಿದ್ದ ಭೂಮಿಯನ್ನು ಕೇವಲ 100 ವರ್ಷಗಳಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಹಾಳು ಮಾಡಿದ್ದೇವೆ.
ಹಾಗಾಗಿ ತುರ್ತಾಗಿ ಏನೋ ಮಾಡಿ ಇದನ್ನು ಒಮ್ಮಿಂದೊಮ್ಮೆಗೇ ಸುಧಾರಿಸಲೂ ಸಾಧ್ಯವಿಲ್ಲ. ಮೊದಲಿಗೆ ಇನ್ನಷ್ಟು ಹಾಳುಗೆಡವುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಭೂಮಿಗೆ ಜ್ವರ ಬರಿಸಿರುವುದರಿಂದ, ಅದರ ತಾಪವನ್ನು ತಡೆದುಕೊಳ್ಳಲೇಬೇಕು, ಬೇರೆ ದಾರಿಯಿಲ್ಲ. ಇದನ್ನು ತಂಪಾಗಿಸಲು, ಪುನಶ್ಚೇತನಗೊಳಿಸಲು ದೃಢವಾದ ದೀರ್ಘಕಾಲಿಕ ಹೆಜ್ಜೆಗಳನ್ನಿಡಬೇಕು.
ಚುನಾವಣಾ ಕಾವು ಸಹಾ ಭೂಮಿಯ ಜ್ವರವನ್ನು ಏರಿಸಿದೆಯೆಂದರೆ ಆಶ್ಚರ್ಯವಾಗಬಹುದು. ಹೌದು, ಚುನಾವಣೆಯ ಸಂದರ್ಭದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಸಹಾ ಯಾರಿಗೂ (ಬರಪೀಡಿತವಾದ ಪ್ರದೇಶಗಳ ರೈತರಿಗೂ) ಒಂದು ಪ್ರಮುಖ ವಿಷಯವೆನಿಸಿಲ್ಲ. ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ಗಳೆರಡೂ ‘ತಾಪಮಾನ ಏರಿಕೆ’ಯ ಕುರಿತು ತಮ್ಮ ಪ್ರಣಾಳಿಕೆಗಳಲ್ಲಿ ಪ್ರಸ್ತಾಪಿಸಿವೆ. ನಿರ್ದಿಷ್ಟವಾದ ಕೆಲವು ಅಂಶಗಳೂ ಅವುಗಳಲ್ಲಿವೆ. ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಒಂದೆರಡು ಹೆಜ್ಜೆ ಮುಂದಿದ್ದು, ಮಹಾರಾಷ್ಟ್ರದ ಕಾಂಗ್ರೆಸ್ ಘಟಕವು, ಏಪ್ರಿಲ್ 8ರಂದು ಪ್ರತ್ಯೇಕ ಪರಿಸರ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದೆ.
ಆದರೆ, ಈ ಎಲ್ಲಾ ಭರವಸೆಗಳೂ ಸಹಾ ಪರಿಣಾಮಕಾರಿಯಾದ ಫಲಿತಾಂಶಗಳಾಗಿ ಮುಂದಿನ ದಿನಗಳಲ್ಲಿ ಸಾಕಾರಗೊಳ್ಳುತ್ತವೆಂಬ ನಂಬಿಕೆ ಯಾರಿಗೂ ಇಲ್ಲ. ಅಷ್ಟೇ ಅಲ್ಲದೇ, ಈ ಕ್ರಮಗಳಷ್ಟೇ ಭೂಮಿಯನ್ನು ಉಳಿಸಲು ಸಾಧ್ಯವೂ ಇಲ್ಲ.
ಜನಸಂಖ್ಯೆಯ ಬಹಳಷ್ಟು ಜನರು ತೊಡಗಿಕೊಂಡಿರುವ ಕೃಷಿಯಿಂದ ಹಿಡಿದು, ಬೆರಳೆಣಿಕೆಯ ಕುಟುಂಬಗಳಿಗೆ ಭಾರೀ ಲಾಭ ತಂದುಕೊಡುವ ಉದ್ದಿಮೆಗಳವರೆಗೆ ಎಲ್ಲವೂ ಪರಿಸರ, ಅಂತರ್ಜಲ ಮತ್ತು ಗಾಳಿಯನ್ನು ಮನುಕುಲಕ್ಕೆ ಅಪಾಯಕಾರಿಯನ್ನಾಗಿಸುತ್ತಿದೆ. ಕರ್ನಾಟಕದಂತಹ ರಾಜ್ಯವು ಕಳೆದ 19 ವರ್ಷಗಳಲ್ಲಿ 16 ವರ್ಷಗಳು, ತನ್ನ ಭೂಭಾಗದ ಅರ್ಧದಷ್ಟು ಪ್ರದೇಶದಲ್ಲಿ ಬರ ಕಂಡಿದೆ. ಹೀಗಿರುವಾಗ ನಮಗೆ ಭಾರೀ ತೊಂದರೆ ಕಾದಿದೆಯೆಂಬ ಅಪಾಯದ ಭಾವವನ್ನು ಎಲ್ಲರೂ ತಳೆಯದೇ ಇದಕ್ಕೆ ಪರಿಹಾರವೆಲ್ಲಿಯದು?
ಕನಿಷ್ಠ ಚುನಾವಣೆಯ ನಂತರವಾದರೂ, ಈ ನಿಟ್ಟಿನಲ್ಲಿ ಸಮರೋಪಾದಿ ಕೆಲಸಗಳಾಗಬೇಕು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಕೈ ಜೋಡಿಸಬೇಕು. ಇದೇ ಮೇ 17ರಿಂದ 19ರವರೆಗೆ ತುಮಕೂರು ಜಿಲ್ಲೆಯ ಸಮತಾ ವಿದ್ಯಾಲಯದ ಆವರಣದಲ್ಲಿ ಆಸಕ್ತರಿಗೆ ಒಂದು ಕಾರ್ಯಾಗಾರವನ್ನು ಪ್ರೊ.ರವಿವರ್ಮಕುಮಾರ್ ಹಾಗೂ ಪ್ರೊ.ಯತಿರಾಜುರಂತಹ ಹಿರಿಯರು ಆಯೋಜಿಸುತ್ತಿದ್ದಾರೆ. ನೀರಿನ ತಜ್ಞ ರಾಜೇಂದ್ರ ಸಿಂಗ್ ಸಹಾ ಅಲ್ಲಿಗೆ ಬರುತ್ತಿದ್ದಾರೆ. ಇಂತಹ ಎಷ್ಟೋ ಪ್ರಯತ್ನಗಳು ಆಗುವ ಅಗತ್ಯವಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ತಮ್ಮ ವ್ಯಾಪ್ತಿಯ ಕೆರೆಗಳ ಹೂಳೆತ್ತಿಸುವುದನ್ನು ಆದ್ಯತೆಯ ವಿಷಯವನ್ನಾಗಿಸಿಕೊಂಡಿದ್ದಾರೆ. ಇಂತಹುದೇ ಕೆಲಸವನ್ನು ಮಾರುತಿ ಪ್ರಸನ್ನ ಎಂಬ ತಹಸೀಲ್ದಾರರು ಮಂಡ್ಯ ತಾಲೂಕಿನಲ್ಲಿ ಮಾಡಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನರೇಗಾ ಮೂಲಕವೇ ಕೆರೆಗಳನ್ನು ಸಂಪನ್ನಗೊಳಿಸುವ ಕೆಲಸವನ್ನು ಮಾಡಲಾಗಿತ್ತು. ಹೋರಾಟಗಾರ್ತಿ ಕೆ.ನೀಲಾರಂಥವರು ಅದರ ಪ್ರೇರಕ ಶಕ್ತಿಯಾಗಿದ್ದರು. ಹಾಸನದಲ್ಲಿ ರೂಪಾ ಹಾಸನ, ಅಧಿಕಾರಿ ಎಚ್.ಎಲ್.ನಾಗರಾಜು ಅವರುಗಳೂ ರಚನಾತ್ಮಕವಾದ ಈ ಕೆಲಸಗಳಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ಸರ್ಕಾರ ಮತ್ತು ಜನರು ಜೊತೆಗೂಡಬಹುದಾದ ಬಹಳ ಮುಖ್ಯವಾದ ಕ್ಷೇತ್ರ ಇದು.
ಆದರೆ, ನಮ್ಮ ಹೆಚ್ಚಿನ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿಯು ಸಾಮಾನ್ಯವಾಗಿ ಇಂಥವನ್ನು ಹಾಳುಗೆಡಹುವ ಯೋಜನೆಗಳನ್ನೇ ರೂಪಿಸುತ್ತಾರೆ. ಪ್ರಾಮಾಣಿಕರೆಂದು ಹೆಸರು ಮಾಡಿರುವವರು ರೂಲ್ ಪುಸ್ತಕವನ್ನಿಟ್ಟುಕೊಂಡು ತೊಂದರೆ ಕೊಡಲು ಸಾಧ್ಯವಿರುವುದನ್ನೆಲ್ಲಾ ಮಾಡುತ್ತಾರೆ. ಪಾರ್ಲಿಮೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವರು, ‘ಹೇಗೂ ಕರ್ನಾಟಕದ ಚುನಾವಣೆ ಮುಗಿದಿದೆ. ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಜಿ.ಪಂ ಸಿಇಓಗಳ ಸಭೆ ಕರೆಯಬೇಕು’ ಎಂದರೆ ಚುನಾವಣಾ ಆಯೋಗ ಬಿಡುತ್ತಿಲ್ಲವಂತೆ.
ನಾವಿರುವ ಪರಿಸರ, ನೆಲ, ಜಲಗಳನ್ನು ಸಂರಕ್ಷಿಸುವುದು ಮುಂದಿನ ದಿನಗಳಲ್ಲಿ ಎಲ್ಲಾ ಪಂಥೀಯರ, ವರ್ಗ ಜಾತಿ ಧರ್ಮ ಲಿಂಗಗಳ ಜನರ ಆದ್ಯತೆಯಾಗದೇ ಉಳಿಗಾಲವಿಲ್ಲ. ಅದರಲ್ಲೂ ರಾಜಸ್ತಾನದ ನಂತರ ಅತ್ಯಂತ ಹೆಚ್ಚು ಬರಪೀಡಿತ ಪ್ರದೇಶವನ್ನು ಹೊಂದಿರುವ ಕರ್ನಾಟಕವು ಎಚ್ಚೆತ್ತುಕೊಳ್ಳಬೇಕಿದೆ. ಶಿರಾದಲ್ಲಿ ನಡೆಯುತ್ತಿರುವ ಶಿಬಿರವು ಚೈತನ್ಯವುಳ್ಳ ಯುವಜನರನ್ನು ಸಿದ್ಧಗೊಳಿಸಿ, ಕರ್ನಾಟಕವನ್ನು ಜಾಗೃತಿಗೊಳಿಸಲಿ ಎಂಬ ಆಶಯ ನಮ್ಮದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...