Homeಕರ್ನಾಟಕಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

- Advertisement -
- Advertisement -

eಶಿವಮೊಗ್ಗ ಬಿಜೆಪಿ ಪಕ್ಷದ ಭದ್ರಕೋಟೆ. ರಾಜ್ಯದ ಅಧಿಕಾರದ ಕೇಂದ್ರ. ಆದರೆ, ಭದ್ರಾವತಿ ತಾಲೂಕು ಮಾತ್ರ ಇದಕ್ಕೆ ಅಪವಾದ. ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಾದರೂ, ಯಡಿಯೂರಪ್ಪನವರೇ ಬಂದು ಭರ್ಜರಿ ಪ್ರಚಾರ ಮಾಡಿದರೂ ಸಹ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಬಿಜೆಪಿ ಅಭ್ಯರ್ಥಿಯ ಮತ ಈವರೆಗೆ 15 ಸಾವಿರವನ್ನೂ ಮೀರಿದ ಇತಿಹಾಸವಿಲ್ಲ. ಆ ಮಟ್ಟಿಗೆ ಭದ್ರಾವತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಇಲ್ಲಿ ಏನಿದ್ದರೂ ಸಂಗಮೇಶ್ ವರ್ಸಸ್ ಅಪ್ಪಾಜಿ ಗೌಡ ನಡುವೆಯೇ ನೇರಾ ನೇರ ಸ್ಫರ್ಧೆಯಿತ್ತು.

ಆದರೆ, ಇದೀಗ ಜೆಡಿಎಸ್ ಪಕ್ಷದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಹೀಗಾಗಿ ಈಗ ಭದ್ರಾವತಿ ಮಟ್ಟಿಗೆ ಜೆಡಿಎಸ್ ನಾವಿಕನಿಲ್ಲದ ಹಡಗಿನಂತಾಗಿದ್ದು, ಜೆಡಿಎಸ್ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪಾಲಿಗೆ ರಾಜಕೀಯ ಎದುರಾಳಿಯೇ ಇಲ್ಲದಂತಾಗಿದೆ. ಈ ಪರಿಸ್ಥಿಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಭದ್ರಾವತಿಯಲ್ಲಿ ತನ್ನ ಮಾಮೂಲಿ ತಂತ್ರಗಾರಿಕೆ ಹೂಡುವ ಮೂಲಕ ಸಂಗಮೇಶ್‌ಗೆ ಪರ್ಯಾಯವಾಗಿ ಬಿಂಬಿಸಿಕೊಳ್ಳುವ ಯತ್ನದಲ್ಲಿದೆ.

ಇಂತಹ ಯತ್ನಗಳಲ್ಲೊಂದೆ ಭದ್ರಾವತಿಯಲ್ಲಿ ಇತ್ತೀಚೆಗೆ ಕಬಡ್ಡಿ ಅಂಗಳದಲ್ಲಿ ನಡೆದ ಗಲಾಟೆ. ಬಿ.ವೈ ವಿಜಯೇಂದ್ರ ಭದ್ರಾವತಿ ಪಕ್ಷ ಸಂಘಟನೆಯ ಕಾರಣಕ್ಕಾಗಿ ಭದ್ರಾವತಿ ನಗರದಲ್ಲಿ ಕಾಲಿಡುತ್ತಿದ್ದಂತೆ, ಇಂತಹದ್ದೊಂದು ಗಲಾಟೆ ನಡೆದಿರುವುದು ಸಹ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಭದ್ರಾವತಿ ಶಾಸಕ ಇದೇ ವಿಚಾರವಾಗಿ ಸದನದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು, ಸದನದಿಂದ ಅಮಾನತುಗೊಂಡಿದ್ದು ಇಡೀ ರಾಜ್ಯದ ಗಮನ ಸೆಳೆದಿತ್ತು. ಹಾಗಾದರೆ ಏನಿದು ಗಲಾಟೆ?

ಭದ್ರಾವತಿ ಕಬಡ್ಡಿ ಅಂಗಳದಲ್ಲಿ ನಡೆದದ್ದೇನು?

ಭದ್ರಾವತಿಯಲ್ಲಿ ಪ್ರತಿ ವರ್ಷ ಮಾಜಿ ಶಾಸಕ ಅಪ್ಪಾಜಿ ಗೌಡ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದರೆ, ಹಾಲಿ ಶಾಸಕ ಸಂಗಮೇಶ್ ಕಬಡ್ಡಿ ಟೂರ್ನಮೆಂಟ್ ಆಯೋಜನೆ ಮಾಡುವುದು ವಾಡಿಕೆ. ರಾಜ್ಯ ಮಟ್ಟದ ಈ ಟೂರ್ನಿಗಳಲ್ಲಿ ಭಾಗವಹಿಸಲು ರಾಜ್ಯದ ನಾನಾ ಮೂಲೆಗಳಿಂದ ಕ್ರೀಡಾಪಟುಗಳು ಭದ್ರಾವತಿಗೆ ಆಗಮಿಸುತ್ತಾರೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳೂ ಉಂಟು.

ಅದಂರತೆ ನಗರದ ಕನಕ ಮಂಟಪ ಆಟದ ಮೈದಾನದಲ್ಲಿ ಈ ಭಾರಿ ಫೆಬ್ರವರಿ 28ರಂದು ಶಾಸಕ ಸಂಗಮೇಶ್ ನೇತೃತ್ವದಲ್ಲಿ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಧರ್ಮಪ್ರಸಾದ್ ಅವರ ತಂಡವೂ ಭಾಗವಹಿಸಿತ್ತು. ಗಲಭೆಗೆ ಇಷ್ಟು ಮಾತ್ರದ ಕಾರಣ ಸಾಕಾಗಿತ್ತು.

ಶಾಸಕ ಸಂಗಮೇಶ್ ಅವರ ತಂಡ ಲೀಗ್ ಹಂತದಲ್ಲೇ ಸೋಲನುಭವಿಸಿ ಕೂಟದಿಂದ ಹೊರನಡೆದಿತ್ತು. ಫೈನಲ್ ಪಂದ್ಯದಲ್ಲಿ ಸ್ಥಳೀಯ ವ್ಯಕ್ತಿ ಉಮೇಶ್ ನೇತೃತ್ವದ ತಂಡ ಹಾಗೂ ಧರ್ಮಪ್ರಸಾದ್ ನೇತೃತ್ವದ ತಂಡ ಸೆಣಸಿದ್ದರೂ ಗೆದ್ದದ್ದು ಮಾತ್ರ ಉಮೇಶ್ ತಂಡ. ಆದರೆ, ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದ ಧರ್ಮಪ್ರಸಾದ್ ತಂಡ ಆಟದ ಮೈದಾನದಲ್ಲೆ ಪಟಾಕಿ ಹಚ್ಚಿ ಸಂಭ್ರಮಿಸಲು ಮುಂದಾಗಿತ್ತು.

ಅಸಲಿಗೆ ಕಬಡ್ಡಿ ಕೂಟಕ್ಕಾಗಿ 10 ಲಕ್ಷ ಖರ್ಚು ಮಾಡಿ ಸಿಂಥೆಟಿಕ್ ಮ್ಯಾಟ್ ಹಾಕಲಾಗಿತ್ತು. ಹೀಗಾಗಿ ಇಲ್ಲಿ ಪಟಾಕಿ ಸಿಡಿಸಬೇಡಿ ಎಂದು ಶಾಸಕ ಸಂಗಮೇಶ್ ಮಗ ಬಸವೇಶ್ ತಾಕೀತು ಮಾಡಿದ್ದಾರೆ. ಆದರೆ, ಗೆದ್ದ ಹುಮ್ಮಸ್ಸಿನಲ್ಲಿದ್ದ ಧರ್ಮಪ್ರಸಾದ್ ತಂಡ ಈ ಮಾತನ್ನು ಕೇಳುವ ಗೋಜಿಗೆ ಹೋಗಿಲ್ಲ. ಪರಿಣಾಮ ಸ್ಥಳದಲ್ಲಿ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ತಾಳ್ಮೆ ಕಳೆದುಕೊಂಡ ಶಾಸಕರ ಮಗ ಬಸವೇಶ್ ಬಿಜೆಪಿ ಬೆಂಬಲಿತರ ಮೇಲೆ ಕೈ ಮಾಡಿದ್ದು ನಿಜ. ಸಂಗಮೇಶ್ ಹಾಗೂ ಧರ್ಮಪ್ರಸಾದ್ ಬಣಗಳ ನಡುವೆ ತಳ್ಳಾಟ ನೂಕಾಟವಾಗಿ, ಅದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು.

ಈ ವೇಳೆ ಬಿಜೆಪಿ ಬೆಂಬಲಿತರೂ ಸಹ ಪ್ರತಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಗಲಾಟೆಯಾಗುತ್ತಿದ್ದಂತೆ ಸ್ಥಳದಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಜಗಳ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬಲ್ಲಿಗೆ ಬಂದು ನಿಂತಿದೆ. ಅಥವಾ ವಿಷಯವನ್ನು ತಿರುಚುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು.

ಗಲಾಟೆ ನಡೆಯುತ್ತಿದ್ದಂತೆ ಹಳೆ ನಗರ ಪೊಲೀಸ್ ಠಾಣೆಗೆ ತೆರಳಿದ್ದ ಧರ್ಮಪ್ರಸಾದ್ ಬಣ, ಶಾಸಕರ ಮಗ ಬಸವ ಹಾಗೂ ಆತನ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡದ್ದಾರೆ. ಸಂಗಮೇಶ್ ಬಣದವರೂ ಸಹ ಪ್ರತಿದೂರು ನೀಡಿದ್ದಾರೆ. ಕಾಂಗ್ರೆಸ್ ಮೇಲೆ 3 ಹಾಗೂ ಬಿಜೆಪಿ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ. ಈ ನಡುವೆ ಶಾಸಕರ ಮಗ ಬಸವ ಆಟಗಾರರ ಮೇಲೆ ಕೈ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಇದನ್ನು ಆಧಾರವಾಗಿಟ್ಟುಕೊಂಡು ಆತನ ವಿರುದ್ಧ ಸೆಕ್ಷನ್ 307 ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೆ, 15 ಜನ ಸಂಗಮೇಶ್ ಬೆಂಬಲಿಗರನ್ನು ಬಂಧಿಸಲಾಗಿದೆ.

ಸದನದಲ್ಲಿ ಶಾಸಕ ಸಂಗಮೇಶ್ ಹೈ ಡ್ರಾಮಾ

ತಮ್ಮ ಮಗ ಬಸವನ ಮೇಲೆ ನಾನ್ ಬೇಲಬಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಿದ್ದಂತೆ ಶಾಸಕ ಸಂಗಮೇಶ್ ವ್ಯಗ್ರರಾಗಿದ್ದಾರೆ. ಮುಂದಿನ 30 ದಿನ ಆತನಿಗೆ ಬೇಲ್ ಸಿಗುವುದು ಅಸಾಧ್ಯವಾಗಿದ್ದು, ಇದೀಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ವಿಚಾರ ಸಾಮಾನ್ಯವಾಗಿ ಸಂಗಮೇಶ್ ಆಕ್ರೋಶಕ್ಕೆ ಕಾರಣವಾಗಿದೆ.

ಏಕೆಂದರೆ ಭದ್ರಾವತಿ ಯಾವಾಗಲೂ ಸೂಕ್ಷ್ಮ ಪ್ರದೇಶಗಳಲ್ಲೊಂದು. ಅಪ್ಪಾಜಿ-ಸಂಗಮೇಶ್ ಬೆಂಬಲಿಗರ ನಡುವೆ ಆಗಾಗ್ಗೆ ಇಂತಹ ಗಲಾಟೆಗಳಾಗುವುದು ಮಾಮೂಲಿ. ಆದರೆ, ಅದಕ್ಕೊಂದು ನಿಯಂತ್ರಣವಿತ್ತು. ಯಾವ ಗಲಾಟೆಯೂ ತೀರಾ ವೀಪರೀತಕ್ಕೆ ಹೋದ ಇತಿಹಾಸವೇ ಇಲ್ಲ. ಇನ್ನು ಧರ್ಮವನ್ನು ಮುಂದಿಟ್ಟು ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಇಬ್ಬರೂ ಮುಂದಾಗಿರಲಿಲ್ಲ. ಏಕೆಂದರೆ ಭದ್ರಾವತಿ ಎಲ್ಲಾ ಧರ್ಮ ಹಾಗೂ ಹಲವು ಜಾತಿಗಳ ಜನ ಒಟ್ಟಿಗೆ ವಾಸಿಸುವ ನಗರ.

ಬಸವೇಶ್

ಆದರೆ, ಇದೇ ಮೊದಲ ಬಾರಿಗೆ ಬಿಜೆಪಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರಿದೆ. ಅಲ್ಲದೆ, ಶಾಸಕರ ಮಗನನ್ನು ಜೈಲಿಗೆ ಕಳುಹಿಸಲಾಗಿದೆ. ಪರಿಣಾಮ ಈ ವಿಚಾರ ರಾಜಕೀಯವಾಗಿ ದೊಡ್ಡ ತಿರುವು ಪಡೆದುಕೊಳ್ಳುತ್ತಿದೆ. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯೇತರ ಶಾಸಕ ಇರುವುದು ಭದ್ರಾವತಿಯಲ್ಲೇ. ಹೀಗಾಗಿ ಭದ್ರಾವತಿಯಲ್ಲೂ ಬಿಜೆಪಿ ಜಂಡಾ ಹಾರಿಸಲು ಕುತಂತ್ರ ನಡೆಸಲಾಗುತ್ತಿದೆ, ನಮ್ಮ ಮೇಲೆ ವಿನಾಃಕಾರಣ ಕೇಸು ದಾಖಲಿಸಲಾಗುತ್ತಿದೆ ಎಂಬುದು ಶಾಸಕ ಸಂಗಮೇಶ್ ಆರೋಪ.

ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಸದನದಲ್ಲೂ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು. ಅದೇ ಕಾರಣಕ್ಕೆ ಅವರನ್ನು ಇದೀಗ ಸದನದಿಂದಲೇ ಅಮಾನತು ಮಾಡಲಾಗಿದೆ. ಅಲ್ಲದೆ, ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಶಿವಮೊಗ್ಗಕ್ಕೆ ತೆರಳಿ ಕಾಂಗ್ರೆಸ್ ಚಲೋ ಚಳುವಳಿಯನ್ನೂ ನಡೆಸಿದ್ದರು. ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಆದರೆ, ಈ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ಈ ಪ್ರಕರಣ ಮುಂದೆ ಯಾವ ತಿರುವನ್ನು ಪಡೆಯಲಿದೆ? ಎಂಬುದನ್ನು ಕಾದು ನೋಡಬೇಕಿದೆ.

ಫೈನಲ್ ಪಂದ್ಯದ ಹಿಂದಿನ ದಿನವೇ ನಡೆದಿತ್ತು ಸಣ್ಣ ಕಿರಿಕ್

ಇದಿಷ್ಟು ಘಟನೆಗೆ ಸಂಬಂಧಿಸಿದ್ದಾದರೆ, ಇನ್ನೂ ಘಟನೆಯ ಹಿಂದಿನ ದಿನವೇ ಕಬ್ಬಡಿ ಆಟದ ಮೈದಾನದಲ್ಲಿ ಎರಡು ಗುಂಪುಗಳ ನಡುವೆ ಸಣ್ಣಪುಟ್ಟ ಗಲಾಟೆಗಳಾಗಿದ್ದವು. ಈ ಮಾಹಿತಿ ಪೊಲೀಸ್ ಇಲಾಖೆಗೂ ಗೊತ್ತು. ಹೀಗಾಗಿ ಭದ್ರಾವತಿ ನ್ಯೂ ಟೌನ್ ಸರ್ಕಲ್ ಇನ್ಸ್ಪೆಕ್ಟರ್ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಆಟದ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕಾಗಿತ್ತು. ಆದರೆ, ಅವರು ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರಣ ಈ ವಿಚಾರವನ್ನು ಗಮನಿಸುವಲ್ಲಿ ಎಡವಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...