Homeಮುಖಪುಟಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

- Advertisement -
- Advertisement -

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ (ಫೆ.19) ಮಾಹಿತಿ ನೀಡಿದೆ.

ಶೃಂಗಸಭೆಯಲ್ಲಿ ಗುರುವಾರ ಬಿಲ್ ಗೇಟ್ಸ್ ಪ್ರಧಾನ ಭಾಷಣ ಮಾಡಬೇಕಿತ್ತು. ಅವರ ಬದಲಾಗಿ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಗಳ ಅಧ್ಯಕ್ಷ ಅಂಕುರ್ ವೋರಾ ಅವರು ಸಭೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿಯಾಗಿದೆ.

“ಎಐ ಶೃಂಗಸಭೆಯ ಪ್ರಮುಖ ಆದ್ಯತೆಗಳ ಮೇಲೆ ಗಮನವನ್ನು ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಚ್ಚರಿಕೆಯ ಪರಿಶೀಲನೆಯ ನಂತರ, ಬಿಲ್ ಗೇಟ್ಸ್ ಅವರು ತಮ್ಮ ಪ್ರಧಾನ ಭಾಷಣವನ್ನು ಮಾಡುವುದಿಲ್ಲ. ಗೇಟ್ಸ್ ಫೌಂಡೇಶನ್ ಅನ್ನು ಆಫ್ರಿಕಾ ಮತ್ತು ಭಾರತದ ಕಚೇರಿಗಳ ಅಧ್ಯಕ್ಷರಾದ ಅಂಕುರ್ ವೋರಾ ಪ್ರತಿನಿಧಿಸಲಿದ್ದು, ಅವರು ಇಂದು ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ” ಎಂದು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

“ನಮ್ಮ ಹಂಚಿಕೆಯ ಆರೋಗ್ಯ ಮತ್ತು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಭಾರತದಲ್ಲಿನ ನಮ್ಮ ಕೆಲಸಕ್ಕೆ ಗೇಟ್ಸ್ ಫೌಂಡೇಶನ್ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಹೇಳಿದೆ.

ಬಿಲ್ ಗೇಟ್ಸ್ ಸೋಮವಾರ (ಫೆ.16) ಭಾರತಕ್ಕೆ ಆಗಮಿಸಿದ್ದು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ.

ತೀವ್ರ ವಿರೋಧದದ ನಂತರ ದೂರ ಉಳಿದ ಗೇಟ್ಸ್

ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಜೊತೆ ಸಂಪರ್ಕ ಹೊಂದಿದ್ದ ಬಿಲ್‌ಗೇಟ್ಸ್ ಆರೋಪ ಹೊತ್ತಿರುವ ಬಿಲ್‌ ಗೇಟ್ಸ್ ಅನ್ನು ಭಾರತದ ಎಐ ಶೃಂಗಸಭೆಗೆ ಮುಖ್ಯ ಭಾಷಣಕಾರನಾಗಿ ಆಹ್ವಾನಿಸಿರುವುದನ್ನು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಮುಖವಾಗಿ ವಿರೋಧಿಸಿದ್ದರು.

ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಬಿಲ್ ಗೇಟ್ಸ್ ಹೆಸರು ಇರುವುದನ್ನು ಉಲ್ಲೇಖಿಸಿದ್ದ ಅವರು, ಇಂತಹ ಆರೋಪ ಹೊತ್ತ ವ್ಯಕ್ತಿಗೆ ಭಾರತದ ಪ್ರತಿಷ್ಠಿತ ವೇದಿಕೆಯಲ್ಲಿ ಅವಕಾಶ ನೀಡುವುದು ‘ಅವಮಾನಕರ’ ಎಂದು ಕಿಡಿಕಾರಿದ್ದರು. ‘ಭಾರತವು ಅವರಿಗೆ ನೈತಿಕ ಶುದ್ಧೀಕರಣದ ವೇದಿಕೆಯಾಗಬಾರದು’ ಎಂದು ಪ್ರಿಯಾಂಕಾ ಸರ್ಕಾರವನ್ನು ಒತ್ತಾಯಿಸಿದ್ದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದರು. ಬಿಲ್ ಗೇಟ್ಸ್ ವಿಷಯದಲ್ಲಿ ಸರ್ಕಾರದ ಒಳಗೇ ಗೊಂದಲಗಳಿವೆ ಎಂದು ಟೀಕಿಸಿದ್ದ ಖೇರಾ, ಗೇಟ್ಸ್ ಭಾಗವಹಿಸುವಿಕೆಯ ಬಗ್ಗೆ ಪ್ರಧಾನಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು, ಎಪ್‌ಸ್ಟೀನ್‌ ಲೈಂಗಿಕ ಹಗರಣದ ಸಂತ್ರಸ್ತರ ಪರವಾಗಿ ಭಾರತ ನಿಲ್ಲಬೇಕು. ಬಿಲ್‌ ಗೇಟ್ಸ್‌ನಂತಹ ವ್ಯಕ್ತಿಗಳನ್ನು ‘ಜಾಗತಿಕ ದಾರ್ಶನಿಕ’ ಎಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದರು.

ಎಕ್ಸ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅನೇಕ ಬಳಕೆದಾರರು #CancelBillGates ಹ್ಯಾಶ್‌ಟ್ಯಾಗ್ ಬಳಸಿ ಪ್ರತಿಭಟಿಸಿದ್ದರು. ಬಿಲ್ ಗೇಟ್ಸ್ ಭಾರತವನ್ನು ತಮ್ಮ ತಾಂತ್ರಿಕ ಮತ್ತು ವೈದ್ಯಕೀಯ ಉತ್ಪನ್ನಗಳ ಪ್ರಯೋಗಾಲಯವನ್ನಾಗಿ ಬಳಸುತ್ತಿದ್ದಾರೆ ಎಂಬ ಹಳೆಯ ಆರೋಪಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದರು.

ಈ ವಿರೋಧಗಳ ಬೆನ್ನಲ್ಲೇ, ಸರ್ಕಾರದ ಮೂಲಗಳು “ನಾವು ಎಫ್‌ಸ್ಟೀನ್‌ ಪ್ರಕರಣದ ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ” ಎಂದು ತಿಳಿಸಿದ್ದವು. ಅಂತಿಮವಾಗಿ ಶೃಂಗಸಭೆಯ ವೆಬ್‌ಸೈಟ್‌ನಿಂದ ಗೇಟ್ಸ್ ಹೆಸರು ಕಾಣೆಯಾಯಿತು ಮತ್ತು ಬಿಲ್ ಗೇಟ್ಸ್ ತಮ್ಮ ಭೇಟಿಯನ್ನು ರದ್ದುಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...