Homeಮುಖಪುಟಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

- Advertisement -
- Advertisement -

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ (ಫೆ.19) ಮಾಹಿತಿ ನೀಡಿದೆ.

ಶೃಂಗಸಭೆಯಲ್ಲಿ ಗುರುವಾರ ಬಿಲ್ ಗೇಟ್ಸ್ ಪ್ರಧಾನ ಭಾಷಣ ಮಾಡಬೇಕಿತ್ತು. ಅವರ ಬದಲಾಗಿ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಗಳ ಅಧ್ಯಕ್ಷ ಅಂಕುರ್ ವೋರಾ ಅವರು ಸಭೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿಯಾಗಿದೆ.

“ಎಐ ಶೃಂಗಸಭೆಯ ಪ್ರಮುಖ ಆದ್ಯತೆಗಳ ಮೇಲೆ ಗಮನವನ್ನು ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಚ್ಚರಿಕೆಯ ಪರಿಶೀಲನೆಯ ನಂತರ, ಬಿಲ್ ಗೇಟ್ಸ್ ಅವರು ತಮ್ಮ ಪ್ರಧಾನ ಭಾಷಣವನ್ನು ಮಾಡುವುದಿಲ್ಲ. ಗೇಟ್ಸ್ ಫೌಂಡೇಶನ್ ಅನ್ನು ಆಫ್ರಿಕಾ ಮತ್ತು ಭಾರತದ ಕಚೇರಿಗಳ ಅಧ್ಯಕ್ಷರಾದ ಅಂಕುರ್ ವೋರಾ ಪ್ರತಿನಿಧಿಸಲಿದ್ದು, ಅವರು ಇಂದು ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ” ಎಂದು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

“ನಮ್ಮ ಹಂಚಿಕೆಯ ಆರೋಗ್ಯ ಮತ್ತು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಭಾರತದಲ್ಲಿನ ನಮ್ಮ ಕೆಲಸಕ್ಕೆ ಗೇಟ್ಸ್ ಫೌಂಡೇಶನ್ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಹೇಳಿದೆ.

ಬಿಲ್ ಗೇಟ್ಸ್ ಸೋಮವಾರ (ಫೆ.16) ಭಾರತಕ್ಕೆ ಆಗಮಿಸಿದ್ದು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ.

ತೀವ್ರ ವಿರೋಧದದ ನಂತರ ದೂರ ಉಳಿದ ಗೇಟ್ಸ್

ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಜೊತೆ ಸಂಪರ್ಕ ಹೊಂದಿದ್ದ ಬಿಲ್‌ಗೇಟ್ಸ್ ಆರೋಪ ಹೊತ್ತಿರುವ ಬಿಲ್‌ ಗೇಟ್ಸ್ ಅನ್ನು ಭಾರತದ ಎಐ ಶೃಂಗಸಭೆಗೆ ಮುಖ್ಯ ಭಾಷಣಕಾರನಾಗಿ ಆಹ್ವಾನಿಸಿರುವುದನ್ನು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಮುಖವಾಗಿ ವಿರೋಧಿಸಿದ್ದರು.

ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಬಿಲ್ ಗೇಟ್ಸ್ ಹೆಸರು ಇರುವುದನ್ನು ಉಲ್ಲೇಖಿಸಿದ್ದ ಅವರು, ಇಂತಹ ಆರೋಪ ಹೊತ್ತ ವ್ಯಕ್ತಿಗೆ ಭಾರತದ ಪ್ರತಿಷ್ಠಿತ ವೇದಿಕೆಯಲ್ಲಿ ಅವಕಾಶ ನೀಡುವುದು ‘ಅವಮಾನಕರ’ ಎಂದು ಕಿಡಿಕಾರಿದ್ದರು. ‘ಭಾರತವು ಅವರಿಗೆ ನೈತಿಕ ಶುದ್ಧೀಕರಣದ ವೇದಿಕೆಯಾಗಬಾರದು’ ಎಂದು ಪ್ರಿಯಾಂಕಾ ಸರ್ಕಾರವನ್ನು ಒತ್ತಾಯಿಸಿದ್ದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದರು. ಬಿಲ್ ಗೇಟ್ಸ್ ವಿಷಯದಲ್ಲಿ ಸರ್ಕಾರದ ಒಳಗೇ ಗೊಂದಲಗಳಿವೆ ಎಂದು ಟೀಕಿಸಿದ್ದ ಖೇರಾ, ಗೇಟ್ಸ್ ಭಾಗವಹಿಸುವಿಕೆಯ ಬಗ್ಗೆ ಪ್ರಧಾನಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು, ಎಪ್‌ಸ್ಟೀನ್‌ ಲೈಂಗಿಕ ಹಗರಣದ ಸಂತ್ರಸ್ತರ ಪರವಾಗಿ ಭಾರತ ನಿಲ್ಲಬೇಕು. ಬಿಲ್‌ ಗೇಟ್ಸ್‌ನಂತಹ ವ್ಯಕ್ತಿಗಳನ್ನು ‘ಜಾಗತಿಕ ದಾರ್ಶನಿಕ’ ಎಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದರು.

ಎಕ್ಸ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅನೇಕ ಬಳಕೆದಾರರು #CancelBillGates ಹ್ಯಾಶ್‌ಟ್ಯಾಗ್ ಬಳಸಿ ಪ್ರತಿಭಟಿಸಿದ್ದರು. ಬಿಲ್ ಗೇಟ್ಸ್ ಭಾರತವನ್ನು ತಮ್ಮ ತಾಂತ್ರಿಕ ಮತ್ತು ವೈದ್ಯಕೀಯ ಉತ್ಪನ್ನಗಳ ಪ್ರಯೋಗಾಲಯವನ್ನಾಗಿ ಬಳಸುತ್ತಿದ್ದಾರೆ ಎಂಬ ಹಳೆಯ ಆರೋಪಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದರು.

ಈ ವಿರೋಧಗಳ ಬೆನ್ನಲ್ಲೇ, ಸರ್ಕಾರದ ಮೂಲಗಳು “ನಾವು ಎಫ್‌ಸ್ಟೀನ್‌ ಪ್ರಕರಣದ ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ” ಎಂದು ತಿಳಿಸಿದ್ದವು. ಅಂತಿಮವಾಗಿ ಶೃಂಗಸಭೆಯ ವೆಬ್‌ಸೈಟ್‌ನಿಂದ ಗೇಟ್ಸ್ ಹೆಸರು ಕಾಣೆಯಾಯಿತು ಮತ್ತು ಬಿಲ್ ಗೇಟ್ಸ್ ತಮ್ಮ ಭೇಟಿಯನ್ನು ರದ್ದುಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...