Homeಮುಖಪುಟಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

- Advertisement -
- Advertisement -

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ (ಫೆ.19) ಮಾಹಿತಿ ನೀಡಿದೆ.

ಶೃಂಗಸಭೆಯಲ್ಲಿ ಗುರುವಾರ ಬಿಲ್ ಗೇಟ್ಸ್ ಪ್ರಧಾನ ಭಾಷಣ ಮಾಡಬೇಕಿತ್ತು. ಅವರ ಬದಲಾಗಿ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಗಳ ಅಧ್ಯಕ್ಷ ಅಂಕುರ್ ವೋರಾ ಅವರು ಸಭೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿಯಾಗಿದೆ.

“ಎಐ ಶೃಂಗಸಭೆಯ ಪ್ರಮುಖ ಆದ್ಯತೆಗಳ ಮೇಲೆ ಗಮನವನ್ನು ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಚ್ಚರಿಕೆಯ ಪರಿಶೀಲನೆಯ ನಂತರ, ಬಿಲ್ ಗೇಟ್ಸ್ ಅವರು ತಮ್ಮ ಪ್ರಧಾನ ಭಾಷಣವನ್ನು ಮಾಡುವುದಿಲ್ಲ. ಗೇಟ್ಸ್ ಫೌಂಡೇಶನ್ ಅನ್ನು ಆಫ್ರಿಕಾ ಮತ್ತು ಭಾರತದ ಕಚೇರಿಗಳ ಅಧ್ಯಕ್ಷರಾದ ಅಂಕುರ್ ವೋರಾ ಪ್ರತಿನಿಧಿಸಲಿದ್ದು, ಅವರು ಇಂದು ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ” ಎಂದು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

“ನಮ್ಮ ಹಂಚಿಕೆಯ ಆರೋಗ್ಯ ಮತ್ತು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಭಾರತದಲ್ಲಿನ ನಮ್ಮ ಕೆಲಸಕ್ಕೆ ಗೇಟ್ಸ್ ಫೌಂಡೇಶನ್ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಹೇಳಿದೆ.

ಬಿಲ್ ಗೇಟ್ಸ್ ಸೋಮವಾರ (ಫೆ.16) ಭಾರತಕ್ಕೆ ಆಗಮಿಸಿದ್ದು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ.

ತೀವ್ರ ವಿರೋಧದದ ನಂತರ ದೂರ ಉಳಿದ ಗೇಟ್ಸ್

ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಜೊತೆ ಸಂಪರ್ಕ ಹೊಂದಿದ್ದ ಬಿಲ್‌ಗೇಟ್ಸ್ ಆರೋಪ ಹೊತ್ತಿರುವ ಬಿಲ್‌ ಗೇಟ್ಸ್ ಅನ್ನು ಭಾರತದ ಎಐ ಶೃಂಗಸಭೆಗೆ ಮುಖ್ಯ ಭಾಷಣಕಾರನಾಗಿ ಆಹ್ವಾನಿಸಿರುವುದನ್ನು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಮುಖವಾಗಿ ವಿರೋಧಿಸಿದ್ದರು.

ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಬಿಲ್ ಗೇಟ್ಸ್ ಹೆಸರು ಇರುವುದನ್ನು ಉಲ್ಲೇಖಿಸಿದ್ದ ಅವರು, ಇಂತಹ ಆರೋಪ ಹೊತ್ತ ವ್ಯಕ್ತಿಗೆ ಭಾರತದ ಪ್ರತಿಷ್ಠಿತ ವೇದಿಕೆಯಲ್ಲಿ ಅವಕಾಶ ನೀಡುವುದು ‘ಅವಮಾನಕರ’ ಎಂದು ಕಿಡಿಕಾರಿದ್ದರು. ‘ಭಾರತವು ಅವರಿಗೆ ನೈತಿಕ ಶುದ್ಧೀಕರಣದ ವೇದಿಕೆಯಾಗಬಾರದು’ ಎಂದು ಪ್ರಿಯಾಂಕಾ ಸರ್ಕಾರವನ್ನು ಒತ್ತಾಯಿಸಿದ್ದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದರು. ಬಿಲ್ ಗೇಟ್ಸ್ ವಿಷಯದಲ್ಲಿ ಸರ್ಕಾರದ ಒಳಗೇ ಗೊಂದಲಗಳಿವೆ ಎಂದು ಟೀಕಿಸಿದ್ದ ಖೇರಾ, ಗೇಟ್ಸ್ ಭಾಗವಹಿಸುವಿಕೆಯ ಬಗ್ಗೆ ಪ್ರಧಾನಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು, ಎಪ್‌ಸ್ಟೀನ್‌ ಲೈಂಗಿಕ ಹಗರಣದ ಸಂತ್ರಸ್ತರ ಪರವಾಗಿ ಭಾರತ ನಿಲ್ಲಬೇಕು. ಬಿಲ್‌ ಗೇಟ್ಸ್‌ನಂತಹ ವ್ಯಕ್ತಿಗಳನ್ನು ‘ಜಾಗತಿಕ ದಾರ್ಶನಿಕ’ ಎಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದರು.

ಎಕ್ಸ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅನೇಕ ಬಳಕೆದಾರರು #CancelBillGates ಹ್ಯಾಶ್‌ಟ್ಯಾಗ್ ಬಳಸಿ ಪ್ರತಿಭಟಿಸಿದ್ದರು. ಬಿಲ್ ಗೇಟ್ಸ್ ಭಾರತವನ್ನು ತಮ್ಮ ತಾಂತ್ರಿಕ ಮತ್ತು ವೈದ್ಯಕೀಯ ಉತ್ಪನ್ನಗಳ ಪ್ರಯೋಗಾಲಯವನ್ನಾಗಿ ಬಳಸುತ್ತಿದ್ದಾರೆ ಎಂಬ ಹಳೆಯ ಆರೋಪಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದರು.

ಈ ವಿರೋಧಗಳ ಬೆನ್ನಲ್ಲೇ, ಸರ್ಕಾರದ ಮೂಲಗಳು “ನಾವು ಎಫ್‌ಸ್ಟೀನ್‌ ಪ್ರಕರಣದ ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ” ಎಂದು ತಿಳಿಸಿದ್ದವು. ಅಂತಿಮವಾಗಿ ಶೃಂಗಸಭೆಯ ವೆಬ್‌ಸೈಟ್‌ನಿಂದ ಗೇಟ್ಸ್ ಹೆಸರು ಕಾಣೆಯಾಯಿತು ಮತ್ತು ಬಿಲ್ ಗೇಟ್ಸ್ ತಮ್ಮ ಭೇಟಿಯನ್ನು ರದ್ದುಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...