Homeಕ್ರೀಡೆಕ್ರಿಕೆಟ್ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

- Advertisement -
- Advertisement -

ಇನ್ನು ಮುಂದೆ ಪುರುಷ ಮತ್ತು ಮಹಿಳಾ ಕ್ರಿಕೆಟರ್‌ಗಳಿಗೆ ಪ್ರತಿ ಪಂದ್ಯಕ್ಕೆ ನೀಡುವ ವೇತನದಲ್ಲಿ ಸಮಾನತೆ ತರಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರನ ಮಂಡಳಿ (ಬಿಸಿಸಿಐ) ತಿಳಿಸಿದೆ.

ಇದುವರೆಗೂ ಪುರಷ ಕ್ರಿಕೆಟರ್‌ಗಳು ಪಡೆಯುತ್ತಿದ್ದ ಪಂದ್ಯ ಶುಲ್ಕವನ್ನು ಇನ್ನು ಮುಂದೆ ಮಹಿಳಾ ಕ್ರಿಕೆಟರ್‌ಗಳು ಪಡೆಯಲಿದ್ದಾರೆ. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಆಟಗಾರರು ತಲಾ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯುತ್ತಿದ್ದರು. ಅದೇ ಶುಲ್ಕವನ್ನು ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರರು ಸಹ ಪಡೆಯಲಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿತು, ಮಹಿಳಾ ರಾಷ್ಟ್ರೀಯ ತಂಡ ಮತ್ತು ದೇಶೀಯ ಮಹಿಳಾ ಆಟಗಾರರು ಪುರುಷರಿಗೆ ಸಮಾನವಾದ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ ಎಂದು ಘೋಷಿಸಿದೆ.

ಭಾರತದಲ್ಲಿ ಕ್ರಿಕೆಟ್‌ ಸೇರಿದಂತೆ ಇತರ ಕ್ರೀಡೆಗಳಲ್ಲಿ ಪುರುಷರ ತಂಡಕ್ಕೆ ಹೆಚ್ಚಿನ ಪ್ರಾಧಾನ್ಯತೆ ಕೊಡುತ್ತಿರುವುದನ್ನು ನೋಡಿದ್ದೇವೆ. ಅದನ್ನು ಬದಲಿಸುವ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗುತ್ತಿದೆ. ಬ್ಯಾಟ್ಸ್‌ಮನ್ ಎಂದು ಕರೆಯುವ ಬದಲು ಲಿಂಗಶೂನ್ಯವನ್ನು ಸೂಚಿಸಲು ಬ್ಯಾಟರ್ ಎಂದು ಕರೆಯಬೇಕು, ಅದೇ ರೀತಿ ಮ್ಯಾನ್ ಆಫ್ ದಿ ಮ್ಯಾಚ್ ಎಂದು ಕರೆಯುವ ಬದಲು ಪ್ಲೇಯರ್ ಆಫ್ ದಿ ಮ್ಯಾಚ್ ಎಂದು ಕರೆಯಬೇಕೆಂಬ ಹಲವು ಬದಲಾವಣೆಗಳನ್ನು ತರಲಾಗಿದೆ.

ಇದುವರೆಗೂ ಕೇವಲ ಪುರುಷರ ಐಪಿಎಲ್ ಟೂರ್ನಿಗಳು ನಡೆದಿವೆ. 2023ರ ರಿಂದ ಮಹಿಳಾ ಐಪಿಎಲ್ ಸಹ ನಡೆಸಲಾಗುವುದು ಎಂದು ಬಿಸಿಸಿಐ ಕೆಲ ದಿನಗಳ ಹಿಂದೆಯಷ್ಟೆ ಘೋಷಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಚಿತ್ರನಟಿ ರಮ್ಯಾ ದಿವ್ಯ ಸ್ಪಂದನ, “ತೀವ್ರ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾವಾಗಿದೆ. ಮನೋರಂಜನ ರಂಗ ಸಹ ಇದನ್ನು ಅನುಕರಿಸಬೇಕು” ಎಂದಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡುತ್ತಿದೆ. ಟಿ20 ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಸಿಸಿದ್ದ ಅದು ಏಷ್ಯಾ ಕಪ್ ಗೆದ್ದು ಬೀಗಿತ್ತು.

ಇದನ್ನೂ ಓದಿ; ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...