Homeಅಂಕಣಗಳುಸರ್ವೋದಯ ಸಮಾಜದ ರಚನೆ

ಸರ್ವೋದಯ ಸಮಾಜದ ರಚನೆ

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |
ಸ್ವಾತಂತ್ರ್ಯಾ ನಂತರ ಭಾರತ ಎರಡು ಬಗೆಯ ಆರ್ಥಿಕ ವ್ಯವಸ್ಥೆಯನ್ನು ಕಂಡಿದೆ. ಒಂದು ನಿಯಂತ್ರಿತ ಆರ್ಥಿಕ ವ್ಯವಸ್ಥೆ. ಎರಡನೆಯದು ಮುಕ್ತ ಆರ್ಥಿಕ ವ್ಯವಸ್ಥೆ. ನಿಯಂತ್ರಿತ ಆರ್ಥಿಕ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮತ್ತು ಸರ್ಕಾರದ ಅಧಿಕಾರಿಗಳು ಜನರನ್ನು ಶೋಷಣೆಗೊಳಪಡಿಸಿದರೆ ಮುಕ್ತ ಆರ್ಥಿಕ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳು ಜನರನ್ನು ಶೋಷಿಸುತ್ತಾರೆ. ಈ ಎರಡೂ ಬಗೆಯ ಶೋಷಣೆಯಿಂದ ಜನರನ್ನು ಮುಕ್ತಗೊಳಿಸಬೇಕಾದರೆ ಇರುವ ಏಕೈಕ ದಾರಿ ಕೇಂದ್ರಿತ ಆರ್ಥಿಕ ವ್ಯವಸ್ಥೆ ಅಂದರೆ ಅದು ಗಾಂಧೀಜಿ ಕನಸಿನ ಗ್ರಾಮ ಸ್ವರಾಜ್ಯ ಪರಿಕಲ್ಪನೆ. ಹಿಂದೆ ಪ್ರತಿಯೊಂದು ಗ್ರಾಮವೂ ಸ್ವಸಂಪೂರ್ಣವಾಗಿತ್ತು. ಸ್ವಾವಲಂಬಿ ಗ್ರಾಮವಾಗಿತ್ತು. ಆಯಾ ಗ್ರಾಮದ ಅವಶ್ಯಕತೆಗಳನ್ನು ಅದೇ ಪೂರೈಸುತ್ತಿತ್ತು. ಇಂದು ಕೇಂದ್ರೀಕೃತ ಉತ್ಪಾದನಾ ಪದ್ಧತಿಯಿಂದಾಗಿ ಗ್ರಾಮಗಳು ಪರಾವಲಂಬಿಗಳಾಗಿವೆ. ಗ್ರಾಮಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಗ್ರಾಮಕೇಂದ್ರಿತ ಆರ್ಥಿಕ ವ್ಯವಸ್ಥೆಯನ್ನು ಜಾರಿಗೊಳಸಬೇಕಾಗಿದೆ. ಗ್ರಾಮಗಳು ಆಡಳಿತದ ಮೂಲ ಘಟಕಗಳಾಗಬೇಕು. ಗ್ರಾಮಸಭೆಯೇ ಗ್ರಾಮದ ಅಭಿವೃದ್ಧಿ ಯೋಜನೆಯನ್ನು ರೂಪಿಸಬೇಕು. ಗ್ರಾಮದ ಬೇಕು, ಬೇಡಗಳನ್ನು ನಿರ್ಧರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾವು ರೂಪಿಸಿದ ಯೋಜನೆಗಳನ್ನು ಗ್ರಾಮಗಳ ಮೇಲೆ ಹೇರಬಾರದು. ಪ್ರತಿ ಗ್ರಾಮದಲ್ಲಿ ಒಂದು ಗ್ರಾಮಕೋಕ ಇರಬೇಕು. ಪ್ರತಿ ಗ್ರಾಮದಲ್ಲಿ ಪದಾರ್ಥಗಳ ಸಂಸ್ಕರಣ ಕೇಂದ್ರಗಳು ಸ್ಥಾಪನೆಯಾಗಬೇಕು. ರೇಷ್ಮೆಗೂಡನ್ನು ರೇಷ್ಮೆ ನೂಲನ್ನಾಗಿ ಪರಿಷ್ಕರಿಸುವ ಘಟಕಗಳು ಸ್ಥಾಪನೆಯಾಗಬೇಕು. ಹಣ್ಣುಗಳನ್ನು ಸಂಸ್ಕರಣೆ ಮಾಡಿ, ಹಣ್ಣಿನ ರಸ, ಇತ್ಯಾದಿಗಳನ್ನು ತಯಾರಿಸುವ ಘಟಕಗಳು ಆರಂಭವಾಗಬೇಕು. ಎರಡು ಮೂರು ಗ್ರಾಮಗಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ನೀಡುವ ಸಣ್ಣ ಕೈಗಾರಿಕಾ ಕೇಂದ್ರ ಸ್ಥಾಪನೆಯಾಗಬೇಕು. ಇಲ್ಲಿ ಉತ್ಪತ್ತಿಯಾಗುವ ಪದಾರ್ಥಗಳನ್ನು ಬೃಹತ್ ಕೈಗಾರಿಕೆಗಳು ಉತ್ಪಾದಿಸದಂತೆ ರೈತರೇ ಮಾರಿಕೊಳ್ಳುವ ಸ್ವಾತಂತ್ರ್ಯವನ್ನು ಹರಣ ಮಾಡಬಾರದು. ಬೀಜೋತ್ಪನ್ನ ಕಂಪನಿಗಳ ಅಡಿಯಾಳಾಗಲು ರೈತರನ್ನು ಬಿಡಬಾರದು.

ಗ್ರಾಮಗಳ ನಿರ್ವಹಿಸಲಾಗದ ಜವಾಬ್ದಾರಿಗಳನ್ನು ಮಾತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಹಿಸಿಕೊಳ್ಳಬೇಕು. ಉದಾಹರಣೆಗೆ ನೋಟು ಮುದ್ರಣ, ವಿದೇಶಾಂಗ ನೀತಿ ನಿರ್ವಹಣೆ, ಅಣೆಕಟ್ಟಗಳ ನಿರ್ಮಾಣ ದೇಶ ರಕ್ಷಣೆ ಮುಂತಾದ ಜವಾಬ್ದಾರಿಗಳನ್ನು ಕೇಂದ್ರ ಸರ್ಕಾರ ಹೊರಬೇಕು. ಸಾರಿಗೆ ವ್ಯವಸ್ಥೆ, ಪೊಲೀಸ್ ವ್ಯವಸ್ಥೆ, ರಸ್ತೆ ಕಾಮಗಾರಿ, ಶಿಕ್ಷಣ ನೀತಿ ನಿರೂಪಣೆ ಮುಂತಾದ ಹೊಣೆಗಾರಿಕೆ ರಾಜ್ಯ ಸರ್ಕಾರಗಳದ್ದು. ಗ್ರಾಮಸ್ವರಾಜ್ಯ ಸ್ಥಾಪನೆ ಮಾಡುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತದ ಹೊರೆ ಕಡಿಮೆಯಾಗುತ್ತದೆ. ನೌಕರಶಾಹಿಯ ದುರಾಡಳಿತ ಲಂಚರಾಷ್ಟ್ರ ಮತ್ತು ದಬ್ಬಾಳಿಕೆ ಕಡಿಮೆಯಾಗುತ್ತದೆ. ಹಳ್ಳಿಗಳಲ್ಲಿ ಲವಲವಿಕೆ ಉಂಟಾಗುತ್ತದೆ. ಹಳ್ಳಿಗರು ಜವಾಬ್ದಾರಿ ಜನರಾಗುತ್ತಾರೆ. ಗ್ರಾಮಗಳಲ್ಲಿ ಉದ್ಯೋಗಾವಕಾಶ ಹೆಚ್ಚುತ್ತದೆ. ಗ್ರಾಮೀಣ ಯುವಕರು, ಕಸುಬುದಾರರು ಹಳ್ಳಿಗಳನ್ನು ತೊರೆದು ಪಟ್ಟಣಗಳಿಗೆ ವಲಸೆ ಹೋಗುವ ಪಿಡುಗು ತಪ್ಪುತ್ತದೆ. ಗ್ರಾಮದ ಕೆರೆಗಳ ರಕ್ಷಣೆ, ಜಲ ಸಂಪನ್ಮೂಲಗಳ ರಕ್ಷಣೆ, ಹಳ್ಳಿಗರ ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ.

ರಾಜಕೀಯ ಪಕ್ಷಗಳ ಹಾವಳಿ ಹಳ್ಳಿಗಳಲ್ಲಿ ತಪ್ಪುತ್ತದೆ. ಪಂಚಾಯ್ತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಭಾಗವಹಿಸುವಂತಿಲ್ಲ, ಮೂಗು ತೂರಿಸುವಂತಿಲ್ಲ ಎಂಬ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಆದರೂ ರಾಜಕೀಯ ಪಕ್ಷಗಳು ಪ್ರಚ್ಛನ್ನವಾಗಿ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಭಾಗವಹಿಸುತ್ತಿವೆ. ಗ್ರಾಮ ಸ್ವರಾಜ್ಯ ಸ್ಥಾಪನೆಯಾದ ಮೇಲೆ ರಾಜಕೀಯ ಪಕ್ಷಗಳು ಗ್ರಾಮಗಳಿಗೆ ನುಸುಳದಂತೆ ಮಾಡುವ ಕಾನೂನನ್ನು ಗ್ರಾಮ ಪಂಚಾಯ್ತಿ ಕೈಗೊಳ್ಳಬಹುದು. ಆರೋಗ್ಯ ಕೇಂದ್ರಗಳನ್ನು, ಕುಡಿಯುವ ನೀರನ್ನು ಪೂರೈಸುವ ಕೆಲಸವನ್ನೂ ಈಗ ಸರ್ಕಾರ ಖಾಸಗಿ ಯುವಕರಿಗೆ ವಹಿಸುತ್ತಿವೆ. ಗ್ರಾಮ ಸ್ವರಾಜ್ಯದಲ್ಲಿ ಇವೆರಡರ ನಿರ್ವಹಣೆಯ ಹೊಣೆಗಾರಿಕೆಯನ್ನು ಪಂಚಾಯ್ತಿಗಳು ನಿರ್ವಹಿಸುತ್ತಿವೆ. ಖಾಸಗಿಯವರ ಶೋಷಣೆಯಿಂದ ಗ್ರಾಮಗಳು ಮುಕ್ತವಾಗುತ್ತವೆ. ಪರದೇಶಗಳ ಕಂಪನಿಗಳು ತಯಾರಿಸುವ ಫೇಸ್ ಪೌಡರ್, ಕುಂಕುಮ, ಸೋಪು, ಟೂತ್‍ಪೇಸ್ಟ್, ಕಾಡಿಗೆ, ಕೃತಕ ನೂಲಿನ ಬಟ್ಟೆಗಳು, ಸಿದ್ಧ ಪಡಿಸಿದ ಉಡುಪುಗಳು, ಪೆಪ್ಸಿ ಕೋಲಾ, ಫ್ರೂಟಿ ಗ್ರಾಮಗಳಿಗೆ ನುಗ್ಗಿಬರುತ್ತಿವೆ ಗ್ರಾಮಸಭೆಯತ್ತ ಗ್ರಾಮ ಪಂಚಾಯ್ತಿಗಳು ಈ ಬಗೆಯ ಶೋಷಣೆಗೆ ಅವಕಾಶ ಕೊಡುವುದಿಲ್ಲ.

ಅವು ಗ್ರಾಮಗಳಿಗೆ ಪ್ರವೇಶಿಸದಂತೆ ಕಾನೂನು ಕಟ್ಟಳೆ ಮಾಡಲಾಗುತ್ತದೆ. ಊರಿನಲ್ಲಿ ನಡೆಯುವ ಕಳ್ಳತನ, ಹಾದರ, ಮೋಸ, ದಾಂಧಲೆ ಇವುಗಳನ್ನೆಲ್ಲ ತಡೆಯಲು ಸ್ವತಂತ್ರ ಪೊಲೀಸ್ ವ್ಯವಸ್ಥೆ ಗ್ರಾಮಮಟ್ಟದ ನ್ಯಾಯಾಲಯಗಳನ್ನು ಸ್ಥಾಪಿಸಿಕೊಳ್ಳಲಾಗುತ್ತದೆ. ಭಾರಿ ಕೊಲೆ, ವಂಚನೆ ಮುಂತಾದ ಅಪರಾಧಗಳನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತದೆ. ಗ್ರಾಮಸಭೆ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಹಳ್ಳಿಯ ಅಸೆಂಬ್ಲಿ ಅದಾಗಬೇಕು. ಗ್ರಾಮಸಭೆ ಎರಡು ದಿನ ನಡೆಯಬೇಕು. ಮೊದಲನೆಯ ದಿನ ವರದಿ ಮಂಡನೆ ಅದರ ಮೇಲೆ ಚರ್ಚೆ ನಡೆಯಬೇಕು. ನಡೆದಿರುವ ದುವ್ರ್ಯವಹಾರಗಳ ಕೂಲಂಕಶ ಚರ್ಚೆಯಾಗಿ ಅದನ್ನೇ ನಡೆಸಿದವರ ಮೇಲೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ನಿರ್ಣಯ ರೂಪದಲ್ಲಿ ಮಂಡಿಸಿ ಸಭೆಯ ಸಮ್ಮತಿ ಪಡೆದುಕೊಳ್ಳಬೇಕು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವ ಹಣ ಮನೆಗಂದಾಯ, ಭೂ ಕಂದಾಯದಿಂದ ಬಂದ ಹಣ ಕಾರ್ಖಾನೆಗಳು, ಹೋಟೆಲ್ ಮುಂತಾದ ಉದ್ಯಮಗಳು ಬಸ್‍ಸ್ಟಾಂಡಿನ ನಿರ್ವಹಣೆ ತೆರಿಗೆ ಟೋಲ್, ನೀರಿನ ಸೆಸ್ ಮುಂತಾದ ಬಾಬತ್ತುಗಳಿಂದ ಬರುವ ವರಮಾನ ನಾನಾ ಬಾಬುಗಳಿಂದ ಸಂಗ್ರಹವಾಗುವ ಹಣ ಗ್ರಾಮದ ಸಂಪನ್ಮೂಳ ಇದನ್ನು ಪಾರದರ್ಶಕವಾಗಿ ನಿರ್ವಹಿಸುವ ಜವಾಬ್ದಾರಿ ಪಂಚಾಯ್ತಿಯದು. ಆದ್ಯತೆಯ ಮೇಲೆ ಬಡತನ ನಿವಾರಣೆ ಯೋಜನೆಗಳನ್ನು ರೂಪಿಸಬೇಕು. ಈ ಕೆಲಸ ಅಂತ್ಯೋದಯದಿಂದ ಆರಂಭ ಆಗಬೇಕು. ಮೊದಲ ಆದ್ಯತೆ ಹಳ್ಳಿಯ ಕಟ್ಟಕಡೆಯ ವ್ಯಕ್ತಿಯನ್ನು ಬಡತನದಿಂದ ಪಾರು ಮಾಡುವುದು ಹೀಗೆ ಗ್ರಾಮದ ಎಲ್ಲರಿಗೂ ಊಟ, ಉದ್ಯೋಗ, ವಿದ್ಯೆ ಇರಲು ಮನೆ ಒದಗಿಸುವುದು ಸರ್ವೋದಯದ ಗುರಿ.

ಭ್ರಷ್ಟಾಚಾರವನ್ನು ಕೊನೆಗಾಣಿಸುವುದು ಪಂಚಾಯ್ತಿಯ ಆದ್ಯ ಕರ್ತವ್ಯವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...