Homeಅಂಕಣಗಳುಸರ್ವೋದಯ ಸಮಾಜದ ರಚನೆ

ಸರ್ವೋದಯ ಸಮಾಜದ ರಚನೆ

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |
ಸ್ವಾತಂತ್ರ್ಯಾ ನಂತರ ಭಾರತ ಎರಡು ಬಗೆಯ ಆರ್ಥಿಕ ವ್ಯವಸ್ಥೆಯನ್ನು ಕಂಡಿದೆ. ಒಂದು ನಿಯಂತ್ರಿತ ಆರ್ಥಿಕ ವ್ಯವಸ್ಥೆ. ಎರಡನೆಯದು ಮುಕ್ತ ಆರ್ಥಿಕ ವ್ಯವಸ್ಥೆ. ನಿಯಂತ್ರಿತ ಆರ್ಥಿಕ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮತ್ತು ಸರ್ಕಾರದ ಅಧಿಕಾರಿಗಳು ಜನರನ್ನು ಶೋಷಣೆಗೊಳಪಡಿಸಿದರೆ ಮುಕ್ತ ಆರ್ಥಿಕ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳು ಜನರನ್ನು ಶೋಷಿಸುತ್ತಾರೆ. ಈ ಎರಡೂ ಬಗೆಯ ಶೋಷಣೆಯಿಂದ ಜನರನ್ನು ಮುಕ್ತಗೊಳಿಸಬೇಕಾದರೆ ಇರುವ ಏಕೈಕ ದಾರಿ ಕೇಂದ್ರಿತ ಆರ್ಥಿಕ ವ್ಯವಸ್ಥೆ ಅಂದರೆ ಅದು ಗಾಂಧೀಜಿ ಕನಸಿನ ಗ್ರಾಮ ಸ್ವರಾಜ್ಯ ಪರಿಕಲ್ಪನೆ. ಹಿಂದೆ ಪ್ರತಿಯೊಂದು ಗ್ರಾಮವೂ ಸ್ವಸಂಪೂರ್ಣವಾಗಿತ್ತು. ಸ್ವಾವಲಂಬಿ ಗ್ರಾಮವಾಗಿತ್ತು. ಆಯಾ ಗ್ರಾಮದ ಅವಶ್ಯಕತೆಗಳನ್ನು ಅದೇ ಪೂರೈಸುತ್ತಿತ್ತು. ಇಂದು ಕೇಂದ್ರೀಕೃತ ಉತ್ಪಾದನಾ ಪದ್ಧತಿಯಿಂದಾಗಿ ಗ್ರಾಮಗಳು ಪರಾವಲಂಬಿಗಳಾಗಿವೆ. ಗ್ರಾಮಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಗ್ರಾಮಕೇಂದ್ರಿತ ಆರ್ಥಿಕ ವ್ಯವಸ್ಥೆಯನ್ನು ಜಾರಿಗೊಳಸಬೇಕಾಗಿದೆ. ಗ್ರಾಮಗಳು ಆಡಳಿತದ ಮೂಲ ಘಟಕಗಳಾಗಬೇಕು. ಗ್ರಾಮಸಭೆಯೇ ಗ್ರಾಮದ ಅಭಿವೃದ್ಧಿ ಯೋಜನೆಯನ್ನು ರೂಪಿಸಬೇಕು. ಗ್ರಾಮದ ಬೇಕು, ಬೇಡಗಳನ್ನು ನಿರ್ಧರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾವು ರೂಪಿಸಿದ ಯೋಜನೆಗಳನ್ನು ಗ್ರಾಮಗಳ ಮೇಲೆ ಹೇರಬಾರದು. ಪ್ರತಿ ಗ್ರಾಮದಲ್ಲಿ ಒಂದು ಗ್ರಾಮಕೋಕ ಇರಬೇಕು. ಪ್ರತಿ ಗ್ರಾಮದಲ್ಲಿ ಪದಾರ್ಥಗಳ ಸಂಸ್ಕರಣ ಕೇಂದ್ರಗಳು ಸ್ಥಾಪನೆಯಾಗಬೇಕು. ರೇಷ್ಮೆಗೂಡನ್ನು ರೇಷ್ಮೆ ನೂಲನ್ನಾಗಿ ಪರಿಷ್ಕರಿಸುವ ಘಟಕಗಳು ಸ್ಥಾಪನೆಯಾಗಬೇಕು. ಹಣ್ಣುಗಳನ್ನು ಸಂಸ್ಕರಣೆ ಮಾಡಿ, ಹಣ್ಣಿನ ರಸ, ಇತ್ಯಾದಿಗಳನ್ನು ತಯಾರಿಸುವ ಘಟಕಗಳು ಆರಂಭವಾಗಬೇಕು. ಎರಡು ಮೂರು ಗ್ರಾಮಗಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ನೀಡುವ ಸಣ್ಣ ಕೈಗಾರಿಕಾ ಕೇಂದ್ರ ಸ್ಥಾಪನೆಯಾಗಬೇಕು. ಇಲ್ಲಿ ಉತ್ಪತ್ತಿಯಾಗುವ ಪದಾರ್ಥಗಳನ್ನು ಬೃಹತ್ ಕೈಗಾರಿಕೆಗಳು ಉತ್ಪಾದಿಸದಂತೆ ರೈತರೇ ಮಾರಿಕೊಳ್ಳುವ ಸ್ವಾತಂತ್ರ್ಯವನ್ನು ಹರಣ ಮಾಡಬಾರದು. ಬೀಜೋತ್ಪನ್ನ ಕಂಪನಿಗಳ ಅಡಿಯಾಳಾಗಲು ರೈತರನ್ನು ಬಿಡಬಾರದು.

ಗ್ರಾಮಗಳ ನಿರ್ವಹಿಸಲಾಗದ ಜವಾಬ್ದಾರಿಗಳನ್ನು ಮಾತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಹಿಸಿಕೊಳ್ಳಬೇಕು. ಉದಾಹರಣೆಗೆ ನೋಟು ಮುದ್ರಣ, ವಿದೇಶಾಂಗ ನೀತಿ ನಿರ್ವಹಣೆ, ಅಣೆಕಟ್ಟಗಳ ನಿರ್ಮಾಣ ದೇಶ ರಕ್ಷಣೆ ಮುಂತಾದ ಜವಾಬ್ದಾರಿಗಳನ್ನು ಕೇಂದ್ರ ಸರ್ಕಾರ ಹೊರಬೇಕು. ಸಾರಿಗೆ ವ್ಯವಸ್ಥೆ, ಪೊಲೀಸ್ ವ್ಯವಸ್ಥೆ, ರಸ್ತೆ ಕಾಮಗಾರಿ, ಶಿಕ್ಷಣ ನೀತಿ ನಿರೂಪಣೆ ಮುಂತಾದ ಹೊಣೆಗಾರಿಕೆ ರಾಜ್ಯ ಸರ್ಕಾರಗಳದ್ದು. ಗ್ರಾಮಸ್ವರಾಜ್ಯ ಸ್ಥಾಪನೆ ಮಾಡುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತದ ಹೊರೆ ಕಡಿಮೆಯಾಗುತ್ತದೆ. ನೌಕರಶಾಹಿಯ ದುರಾಡಳಿತ ಲಂಚರಾಷ್ಟ್ರ ಮತ್ತು ದಬ್ಬಾಳಿಕೆ ಕಡಿಮೆಯಾಗುತ್ತದೆ. ಹಳ್ಳಿಗಳಲ್ಲಿ ಲವಲವಿಕೆ ಉಂಟಾಗುತ್ತದೆ. ಹಳ್ಳಿಗರು ಜವಾಬ್ದಾರಿ ಜನರಾಗುತ್ತಾರೆ. ಗ್ರಾಮಗಳಲ್ಲಿ ಉದ್ಯೋಗಾವಕಾಶ ಹೆಚ್ಚುತ್ತದೆ. ಗ್ರಾಮೀಣ ಯುವಕರು, ಕಸುಬುದಾರರು ಹಳ್ಳಿಗಳನ್ನು ತೊರೆದು ಪಟ್ಟಣಗಳಿಗೆ ವಲಸೆ ಹೋಗುವ ಪಿಡುಗು ತಪ್ಪುತ್ತದೆ. ಗ್ರಾಮದ ಕೆರೆಗಳ ರಕ್ಷಣೆ, ಜಲ ಸಂಪನ್ಮೂಲಗಳ ರಕ್ಷಣೆ, ಹಳ್ಳಿಗರ ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ.

ರಾಜಕೀಯ ಪಕ್ಷಗಳ ಹಾವಳಿ ಹಳ್ಳಿಗಳಲ್ಲಿ ತಪ್ಪುತ್ತದೆ. ಪಂಚಾಯ್ತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಭಾಗವಹಿಸುವಂತಿಲ್ಲ, ಮೂಗು ತೂರಿಸುವಂತಿಲ್ಲ ಎಂಬ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಆದರೂ ರಾಜಕೀಯ ಪಕ್ಷಗಳು ಪ್ರಚ್ಛನ್ನವಾಗಿ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಭಾಗವಹಿಸುತ್ತಿವೆ. ಗ್ರಾಮ ಸ್ವರಾಜ್ಯ ಸ್ಥಾಪನೆಯಾದ ಮೇಲೆ ರಾಜಕೀಯ ಪಕ್ಷಗಳು ಗ್ರಾಮಗಳಿಗೆ ನುಸುಳದಂತೆ ಮಾಡುವ ಕಾನೂನನ್ನು ಗ್ರಾಮ ಪಂಚಾಯ್ತಿ ಕೈಗೊಳ್ಳಬಹುದು. ಆರೋಗ್ಯ ಕೇಂದ್ರಗಳನ್ನು, ಕುಡಿಯುವ ನೀರನ್ನು ಪೂರೈಸುವ ಕೆಲಸವನ್ನೂ ಈಗ ಸರ್ಕಾರ ಖಾಸಗಿ ಯುವಕರಿಗೆ ವಹಿಸುತ್ತಿವೆ. ಗ್ರಾಮ ಸ್ವರಾಜ್ಯದಲ್ಲಿ ಇವೆರಡರ ನಿರ್ವಹಣೆಯ ಹೊಣೆಗಾರಿಕೆಯನ್ನು ಪಂಚಾಯ್ತಿಗಳು ನಿರ್ವಹಿಸುತ್ತಿವೆ. ಖಾಸಗಿಯವರ ಶೋಷಣೆಯಿಂದ ಗ್ರಾಮಗಳು ಮುಕ್ತವಾಗುತ್ತವೆ. ಪರದೇಶಗಳ ಕಂಪನಿಗಳು ತಯಾರಿಸುವ ಫೇಸ್ ಪೌಡರ್, ಕುಂಕುಮ, ಸೋಪು, ಟೂತ್‍ಪೇಸ್ಟ್, ಕಾಡಿಗೆ, ಕೃತಕ ನೂಲಿನ ಬಟ್ಟೆಗಳು, ಸಿದ್ಧ ಪಡಿಸಿದ ಉಡುಪುಗಳು, ಪೆಪ್ಸಿ ಕೋಲಾ, ಫ್ರೂಟಿ ಗ್ರಾಮಗಳಿಗೆ ನುಗ್ಗಿಬರುತ್ತಿವೆ ಗ್ರಾಮಸಭೆಯತ್ತ ಗ್ರಾಮ ಪಂಚಾಯ್ತಿಗಳು ಈ ಬಗೆಯ ಶೋಷಣೆಗೆ ಅವಕಾಶ ಕೊಡುವುದಿಲ್ಲ.

ಅವು ಗ್ರಾಮಗಳಿಗೆ ಪ್ರವೇಶಿಸದಂತೆ ಕಾನೂನು ಕಟ್ಟಳೆ ಮಾಡಲಾಗುತ್ತದೆ. ಊರಿನಲ್ಲಿ ನಡೆಯುವ ಕಳ್ಳತನ, ಹಾದರ, ಮೋಸ, ದಾಂಧಲೆ ಇವುಗಳನ್ನೆಲ್ಲ ತಡೆಯಲು ಸ್ವತಂತ್ರ ಪೊಲೀಸ್ ವ್ಯವಸ್ಥೆ ಗ್ರಾಮಮಟ್ಟದ ನ್ಯಾಯಾಲಯಗಳನ್ನು ಸ್ಥಾಪಿಸಿಕೊಳ್ಳಲಾಗುತ್ತದೆ. ಭಾರಿ ಕೊಲೆ, ವಂಚನೆ ಮುಂತಾದ ಅಪರಾಧಗಳನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತದೆ. ಗ್ರಾಮಸಭೆ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಹಳ್ಳಿಯ ಅಸೆಂಬ್ಲಿ ಅದಾಗಬೇಕು. ಗ್ರಾಮಸಭೆ ಎರಡು ದಿನ ನಡೆಯಬೇಕು. ಮೊದಲನೆಯ ದಿನ ವರದಿ ಮಂಡನೆ ಅದರ ಮೇಲೆ ಚರ್ಚೆ ನಡೆಯಬೇಕು. ನಡೆದಿರುವ ದುವ್ರ್ಯವಹಾರಗಳ ಕೂಲಂಕಶ ಚರ್ಚೆಯಾಗಿ ಅದನ್ನೇ ನಡೆಸಿದವರ ಮೇಲೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ನಿರ್ಣಯ ರೂಪದಲ್ಲಿ ಮಂಡಿಸಿ ಸಭೆಯ ಸಮ್ಮತಿ ಪಡೆದುಕೊಳ್ಳಬೇಕು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವ ಹಣ ಮನೆಗಂದಾಯ, ಭೂ ಕಂದಾಯದಿಂದ ಬಂದ ಹಣ ಕಾರ್ಖಾನೆಗಳು, ಹೋಟೆಲ್ ಮುಂತಾದ ಉದ್ಯಮಗಳು ಬಸ್‍ಸ್ಟಾಂಡಿನ ನಿರ್ವಹಣೆ ತೆರಿಗೆ ಟೋಲ್, ನೀರಿನ ಸೆಸ್ ಮುಂತಾದ ಬಾಬತ್ತುಗಳಿಂದ ಬರುವ ವರಮಾನ ನಾನಾ ಬಾಬುಗಳಿಂದ ಸಂಗ್ರಹವಾಗುವ ಹಣ ಗ್ರಾಮದ ಸಂಪನ್ಮೂಳ ಇದನ್ನು ಪಾರದರ್ಶಕವಾಗಿ ನಿರ್ವಹಿಸುವ ಜವಾಬ್ದಾರಿ ಪಂಚಾಯ್ತಿಯದು. ಆದ್ಯತೆಯ ಮೇಲೆ ಬಡತನ ನಿವಾರಣೆ ಯೋಜನೆಗಳನ್ನು ರೂಪಿಸಬೇಕು. ಈ ಕೆಲಸ ಅಂತ್ಯೋದಯದಿಂದ ಆರಂಭ ಆಗಬೇಕು. ಮೊದಲ ಆದ್ಯತೆ ಹಳ್ಳಿಯ ಕಟ್ಟಕಡೆಯ ವ್ಯಕ್ತಿಯನ್ನು ಬಡತನದಿಂದ ಪಾರು ಮಾಡುವುದು ಹೀಗೆ ಗ್ರಾಮದ ಎಲ್ಲರಿಗೂ ಊಟ, ಉದ್ಯೋಗ, ವಿದ್ಯೆ ಇರಲು ಮನೆ ಒದಗಿಸುವುದು ಸರ್ವೋದಯದ ಗುರಿ.

ಭ್ರಷ್ಟಾಚಾರವನ್ನು ಕೊನೆಗಾಣಿಸುವುದು ಪಂಚಾಯ್ತಿಯ ಆದ್ಯ ಕರ್ತವ್ಯವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...