Homeಅಂಕಣಗಳುಸರ್ವೋದಯ ಸಮಾಜದ ರಚನೆ

ಸರ್ವೋದಯ ಸಮಾಜದ ರಚನೆ

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |
ಸ್ವಾತಂತ್ರ್ಯಾ ನಂತರ ಭಾರತ ಎರಡು ಬಗೆಯ ಆರ್ಥಿಕ ವ್ಯವಸ್ಥೆಯನ್ನು ಕಂಡಿದೆ. ಒಂದು ನಿಯಂತ್ರಿತ ಆರ್ಥಿಕ ವ್ಯವಸ್ಥೆ. ಎರಡನೆಯದು ಮುಕ್ತ ಆರ್ಥಿಕ ವ್ಯವಸ್ಥೆ. ನಿಯಂತ್ರಿತ ಆರ್ಥಿಕ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮತ್ತು ಸರ್ಕಾರದ ಅಧಿಕಾರಿಗಳು ಜನರನ್ನು ಶೋಷಣೆಗೊಳಪಡಿಸಿದರೆ ಮುಕ್ತ ಆರ್ಥಿಕ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳು ಜನರನ್ನು ಶೋಷಿಸುತ್ತಾರೆ. ಈ ಎರಡೂ ಬಗೆಯ ಶೋಷಣೆಯಿಂದ ಜನರನ್ನು ಮುಕ್ತಗೊಳಿಸಬೇಕಾದರೆ ಇರುವ ಏಕೈಕ ದಾರಿ ಕೇಂದ್ರಿತ ಆರ್ಥಿಕ ವ್ಯವಸ್ಥೆ ಅಂದರೆ ಅದು ಗಾಂಧೀಜಿ ಕನಸಿನ ಗ್ರಾಮ ಸ್ವರಾಜ್ಯ ಪರಿಕಲ್ಪನೆ. ಹಿಂದೆ ಪ್ರತಿಯೊಂದು ಗ್ರಾಮವೂ ಸ್ವಸಂಪೂರ್ಣವಾಗಿತ್ತು. ಸ್ವಾವಲಂಬಿ ಗ್ರಾಮವಾಗಿತ್ತು. ಆಯಾ ಗ್ರಾಮದ ಅವಶ್ಯಕತೆಗಳನ್ನು ಅದೇ ಪೂರೈಸುತ್ತಿತ್ತು. ಇಂದು ಕೇಂದ್ರೀಕೃತ ಉತ್ಪಾದನಾ ಪದ್ಧತಿಯಿಂದಾಗಿ ಗ್ರಾಮಗಳು ಪರಾವಲಂಬಿಗಳಾಗಿವೆ. ಗ್ರಾಮಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಗ್ರಾಮಕೇಂದ್ರಿತ ಆರ್ಥಿಕ ವ್ಯವಸ್ಥೆಯನ್ನು ಜಾರಿಗೊಳಸಬೇಕಾಗಿದೆ. ಗ್ರಾಮಗಳು ಆಡಳಿತದ ಮೂಲ ಘಟಕಗಳಾಗಬೇಕು. ಗ್ರಾಮಸಭೆಯೇ ಗ್ರಾಮದ ಅಭಿವೃದ್ಧಿ ಯೋಜನೆಯನ್ನು ರೂಪಿಸಬೇಕು. ಗ್ರಾಮದ ಬೇಕು, ಬೇಡಗಳನ್ನು ನಿರ್ಧರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾವು ರೂಪಿಸಿದ ಯೋಜನೆಗಳನ್ನು ಗ್ರಾಮಗಳ ಮೇಲೆ ಹೇರಬಾರದು. ಪ್ರತಿ ಗ್ರಾಮದಲ್ಲಿ ಒಂದು ಗ್ರಾಮಕೋಕ ಇರಬೇಕು. ಪ್ರತಿ ಗ್ರಾಮದಲ್ಲಿ ಪದಾರ್ಥಗಳ ಸಂಸ್ಕರಣ ಕೇಂದ್ರಗಳು ಸ್ಥಾಪನೆಯಾಗಬೇಕು. ರೇಷ್ಮೆಗೂಡನ್ನು ರೇಷ್ಮೆ ನೂಲನ್ನಾಗಿ ಪರಿಷ್ಕರಿಸುವ ಘಟಕಗಳು ಸ್ಥಾಪನೆಯಾಗಬೇಕು. ಹಣ್ಣುಗಳನ್ನು ಸಂಸ್ಕರಣೆ ಮಾಡಿ, ಹಣ್ಣಿನ ರಸ, ಇತ್ಯಾದಿಗಳನ್ನು ತಯಾರಿಸುವ ಘಟಕಗಳು ಆರಂಭವಾಗಬೇಕು. ಎರಡು ಮೂರು ಗ್ರಾಮಗಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ನೀಡುವ ಸಣ್ಣ ಕೈಗಾರಿಕಾ ಕೇಂದ್ರ ಸ್ಥಾಪನೆಯಾಗಬೇಕು. ಇಲ್ಲಿ ಉತ್ಪತ್ತಿಯಾಗುವ ಪದಾರ್ಥಗಳನ್ನು ಬೃಹತ್ ಕೈಗಾರಿಕೆಗಳು ಉತ್ಪಾದಿಸದಂತೆ ರೈತರೇ ಮಾರಿಕೊಳ್ಳುವ ಸ್ವಾತಂತ್ರ್ಯವನ್ನು ಹರಣ ಮಾಡಬಾರದು. ಬೀಜೋತ್ಪನ್ನ ಕಂಪನಿಗಳ ಅಡಿಯಾಳಾಗಲು ರೈತರನ್ನು ಬಿಡಬಾರದು.

ಗ್ರಾಮಗಳ ನಿರ್ವಹಿಸಲಾಗದ ಜವಾಬ್ದಾರಿಗಳನ್ನು ಮಾತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಹಿಸಿಕೊಳ್ಳಬೇಕು. ಉದಾಹರಣೆಗೆ ನೋಟು ಮುದ್ರಣ, ವಿದೇಶಾಂಗ ನೀತಿ ನಿರ್ವಹಣೆ, ಅಣೆಕಟ್ಟಗಳ ನಿರ್ಮಾಣ ದೇಶ ರಕ್ಷಣೆ ಮುಂತಾದ ಜವಾಬ್ದಾರಿಗಳನ್ನು ಕೇಂದ್ರ ಸರ್ಕಾರ ಹೊರಬೇಕು. ಸಾರಿಗೆ ವ್ಯವಸ್ಥೆ, ಪೊಲೀಸ್ ವ್ಯವಸ್ಥೆ, ರಸ್ತೆ ಕಾಮಗಾರಿ, ಶಿಕ್ಷಣ ನೀತಿ ನಿರೂಪಣೆ ಮುಂತಾದ ಹೊಣೆಗಾರಿಕೆ ರಾಜ್ಯ ಸರ್ಕಾರಗಳದ್ದು. ಗ್ರಾಮಸ್ವರಾಜ್ಯ ಸ್ಥಾಪನೆ ಮಾಡುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತದ ಹೊರೆ ಕಡಿಮೆಯಾಗುತ್ತದೆ. ನೌಕರಶಾಹಿಯ ದುರಾಡಳಿತ ಲಂಚರಾಷ್ಟ್ರ ಮತ್ತು ದಬ್ಬಾಳಿಕೆ ಕಡಿಮೆಯಾಗುತ್ತದೆ. ಹಳ್ಳಿಗಳಲ್ಲಿ ಲವಲವಿಕೆ ಉಂಟಾಗುತ್ತದೆ. ಹಳ್ಳಿಗರು ಜವಾಬ್ದಾರಿ ಜನರಾಗುತ್ತಾರೆ. ಗ್ರಾಮಗಳಲ್ಲಿ ಉದ್ಯೋಗಾವಕಾಶ ಹೆಚ್ಚುತ್ತದೆ. ಗ್ರಾಮೀಣ ಯುವಕರು, ಕಸುಬುದಾರರು ಹಳ್ಳಿಗಳನ್ನು ತೊರೆದು ಪಟ್ಟಣಗಳಿಗೆ ವಲಸೆ ಹೋಗುವ ಪಿಡುಗು ತಪ್ಪುತ್ತದೆ. ಗ್ರಾಮದ ಕೆರೆಗಳ ರಕ್ಷಣೆ, ಜಲ ಸಂಪನ್ಮೂಲಗಳ ರಕ್ಷಣೆ, ಹಳ್ಳಿಗರ ಹೊಣೆಗಾರಿಕೆಯನ್ನು ಹೆಚ್ಚಿಸುತ್ತದೆ.

ರಾಜಕೀಯ ಪಕ್ಷಗಳ ಹಾವಳಿ ಹಳ್ಳಿಗಳಲ್ಲಿ ತಪ್ಪುತ್ತದೆ. ಪಂಚಾಯ್ತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಭಾಗವಹಿಸುವಂತಿಲ್ಲ, ಮೂಗು ತೂರಿಸುವಂತಿಲ್ಲ ಎಂಬ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಆದರೂ ರಾಜಕೀಯ ಪಕ್ಷಗಳು ಪ್ರಚ್ಛನ್ನವಾಗಿ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಭಾಗವಹಿಸುತ್ತಿವೆ. ಗ್ರಾಮ ಸ್ವರಾಜ್ಯ ಸ್ಥಾಪನೆಯಾದ ಮೇಲೆ ರಾಜಕೀಯ ಪಕ್ಷಗಳು ಗ್ರಾಮಗಳಿಗೆ ನುಸುಳದಂತೆ ಮಾಡುವ ಕಾನೂನನ್ನು ಗ್ರಾಮ ಪಂಚಾಯ್ತಿ ಕೈಗೊಳ್ಳಬಹುದು. ಆರೋಗ್ಯ ಕೇಂದ್ರಗಳನ್ನು, ಕುಡಿಯುವ ನೀರನ್ನು ಪೂರೈಸುವ ಕೆಲಸವನ್ನೂ ಈಗ ಸರ್ಕಾರ ಖಾಸಗಿ ಯುವಕರಿಗೆ ವಹಿಸುತ್ತಿವೆ. ಗ್ರಾಮ ಸ್ವರಾಜ್ಯದಲ್ಲಿ ಇವೆರಡರ ನಿರ್ವಹಣೆಯ ಹೊಣೆಗಾರಿಕೆಯನ್ನು ಪಂಚಾಯ್ತಿಗಳು ನಿರ್ವಹಿಸುತ್ತಿವೆ. ಖಾಸಗಿಯವರ ಶೋಷಣೆಯಿಂದ ಗ್ರಾಮಗಳು ಮುಕ್ತವಾಗುತ್ತವೆ. ಪರದೇಶಗಳ ಕಂಪನಿಗಳು ತಯಾರಿಸುವ ಫೇಸ್ ಪೌಡರ್, ಕುಂಕುಮ, ಸೋಪು, ಟೂತ್‍ಪೇಸ್ಟ್, ಕಾಡಿಗೆ, ಕೃತಕ ನೂಲಿನ ಬಟ್ಟೆಗಳು, ಸಿದ್ಧ ಪಡಿಸಿದ ಉಡುಪುಗಳು, ಪೆಪ್ಸಿ ಕೋಲಾ, ಫ್ರೂಟಿ ಗ್ರಾಮಗಳಿಗೆ ನುಗ್ಗಿಬರುತ್ತಿವೆ ಗ್ರಾಮಸಭೆಯತ್ತ ಗ್ರಾಮ ಪಂಚಾಯ್ತಿಗಳು ಈ ಬಗೆಯ ಶೋಷಣೆಗೆ ಅವಕಾಶ ಕೊಡುವುದಿಲ್ಲ.

ಅವು ಗ್ರಾಮಗಳಿಗೆ ಪ್ರವೇಶಿಸದಂತೆ ಕಾನೂನು ಕಟ್ಟಳೆ ಮಾಡಲಾಗುತ್ತದೆ. ಊರಿನಲ್ಲಿ ನಡೆಯುವ ಕಳ್ಳತನ, ಹಾದರ, ಮೋಸ, ದಾಂಧಲೆ ಇವುಗಳನ್ನೆಲ್ಲ ತಡೆಯಲು ಸ್ವತಂತ್ರ ಪೊಲೀಸ್ ವ್ಯವಸ್ಥೆ ಗ್ರಾಮಮಟ್ಟದ ನ್ಯಾಯಾಲಯಗಳನ್ನು ಸ್ಥಾಪಿಸಿಕೊಳ್ಳಲಾಗುತ್ತದೆ. ಭಾರಿ ಕೊಲೆ, ವಂಚನೆ ಮುಂತಾದ ಅಪರಾಧಗಳನ್ನು ರಾಜ್ಯ ಸರ್ಕಾರ ನಿರ್ವಹಿಸುತ್ತದೆ. ಗ್ರಾಮಸಭೆ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಹಳ್ಳಿಯ ಅಸೆಂಬ್ಲಿ ಅದಾಗಬೇಕು. ಗ್ರಾಮಸಭೆ ಎರಡು ದಿನ ನಡೆಯಬೇಕು. ಮೊದಲನೆಯ ದಿನ ವರದಿ ಮಂಡನೆ ಅದರ ಮೇಲೆ ಚರ್ಚೆ ನಡೆಯಬೇಕು. ನಡೆದಿರುವ ದುವ್ರ್ಯವಹಾರಗಳ ಕೂಲಂಕಶ ಚರ್ಚೆಯಾಗಿ ಅದನ್ನೇ ನಡೆಸಿದವರ ಮೇಲೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ನಿರ್ಣಯ ರೂಪದಲ್ಲಿ ಮಂಡಿಸಿ ಸಭೆಯ ಸಮ್ಮತಿ ಪಡೆದುಕೊಳ್ಳಬೇಕು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವ ಹಣ ಮನೆಗಂದಾಯ, ಭೂ ಕಂದಾಯದಿಂದ ಬಂದ ಹಣ ಕಾರ್ಖಾನೆಗಳು, ಹೋಟೆಲ್ ಮುಂತಾದ ಉದ್ಯಮಗಳು ಬಸ್‍ಸ್ಟಾಂಡಿನ ನಿರ್ವಹಣೆ ತೆರಿಗೆ ಟೋಲ್, ನೀರಿನ ಸೆಸ್ ಮುಂತಾದ ಬಾಬತ್ತುಗಳಿಂದ ಬರುವ ವರಮಾನ ನಾನಾ ಬಾಬುಗಳಿಂದ ಸಂಗ್ರಹವಾಗುವ ಹಣ ಗ್ರಾಮದ ಸಂಪನ್ಮೂಳ ಇದನ್ನು ಪಾರದರ್ಶಕವಾಗಿ ನಿರ್ವಹಿಸುವ ಜವಾಬ್ದಾರಿ ಪಂಚಾಯ್ತಿಯದು. ಆದ್ಯತೆಯ ಮೇಲೆ ಬಡತನ ನಿವಾರಣೆ ಯೋಜನೆಗಳನ್ನು ರೂಪಿಸಬೇಕು. ಈ ಕೆಲಸ ಅಂತ್ಯೋದಯದಿಂದ ಆರಂಭ ಆಗಬೇಕು. ಮೊದಲ ಆದ್ಯತೆ ಹಳ್ಳಿಯ ಕಟ್ಟಕಡೆಯ ವ್ಯಕ್ತಿಯನ್ನು ಬಡತನದಿಂದ ಪಾರು ಮಾಡುವುದು ಹೀಗೆ ಗ್ರಾಮದ ಎಲ್ಲರಿಗೂ ಊಟ, ಉದ್ಯೋಗ, ವಿದ್ಯೆ ಇರಲು ಮನೆ ಒದಗಿಸುವುದು ಸರ್ವೋದಯದ ಗುರಿ.

ಭ್ರಷ್ಟಾಚಾರವನ್ನು ಕೊನೆಗಾಣಿಸುವುದು ಪಂಚಾಯ್ತಿಯ ಆದ್ಯ ಕರ್ತವ್ಯವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...