Homeಮುಖಪುಟ’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

- Advertisement -
- Advertisement -

ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.

ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್‌ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.

ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್‌ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.

ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.

ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್‌ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ದೆಹಲಿ ಹೈಕೋರ್ಟ್‌ನ ಸೂಚನೆಯ ನಂತರ, ಸೆಪ್ಟೆಂಬರ್‌ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ,  ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.

  2. ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ

LEAVE A REPLY

Please enter your comment!
Please enter your name here

- Advertisment -

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...