Homeಮುಖಪುಟ’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

- Advertisement -
- Advertisement -

ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.

ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್‌ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.

ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್‌ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.

ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.

ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್‌ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ದೆಹಲಿ ಹೈಕೋರ್ಟ್‌ನ ಸೂಚನೆಯ ನಂತರ, ಸೆಪ್ಟೆಂಬರ್‌ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ,  ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.

  2. ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...