Homeಮುಖಪುಟ’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

- Advertisement -
- Advertisement -

ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.

ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್‌ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.

ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್‌ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.

ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.

ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್‌ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ದೆಹಲಿ ಹೈಕೋರ್ಟ್‌ನ ಸೂಚನೆಯ ನಂತರ, ಸೆಪ್ಟೆಂಬರ್‌ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ,  ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.

  2. ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...