Homeಮುಖಪುಟ’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

- Advertisement -
- Advertisement -

ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.

ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್‌ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.

ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್‌ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.

ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.

ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್‌ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ದೆಹಲಿ ಹೈಕೋರ್ಟ್‌ನ ಸೂಚನೆಯ ನಂತರ, ಸೆಪ್ಟೆಂಬರ್‌ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ,  ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.

  2. ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...