Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...