Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...