Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...