Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...