Homeಮುಖಪುಟರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

- Advertisement -
- Advertisement -

ರಾಜ್ ಕುಂದ್ರಾ ಬಂಧನದ ಬಳಿಕ ವಿಚಾರಣೆಗೆ ಹಾಜರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ,  ‘ಹಾಟ್‌ಶಾಟ್‌’ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ ಎಂದಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ  ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿರುವ ಮುಂಬೈ ಪೊಲೀಸರು, ಆಪ್‌ಗಳ ಮೂಲಕ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಉತ್ತರಿಸಿರುವ ಅವರು, ನನಗೆ ಆಪ್‌ನಲ್ಲಿರುವ ವಿಷಯಗಳ ಬಗ್ಗೆ ನಿಖರವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಶೃಂಗಾರ ಮತ್ತು ಅಶ್ಲೀಲತೆ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಒತ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಶಿಲ್ಪಾ ತನ್ನ ಪತಿ ರಾಜ್ ಕುಂದ್ರಾ ನಿರಪರಾಧಿ ಎಂದು ಅಪರಾಧ ವಿಭಾಗ ಪೋಲಿಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ತನ್ನ ಪತಿ ರಾಜ್ ಕುಂದ್ರಾ ಯಾವುದೇ ರೀತಿಯ ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಜೊತೆಗೆ ಆ್ಯಪ್‌ನಲ್ಲಿ ಭಾಗಿಯಾಗಿದ್ದ ಲಂಡನ್ ಮೂಲದ ರಾಜ್ ಕುಂದ್ರಾ ಅವರ ಸೋದರ ಮಾವ ಪ್ರದೀಪ್ ಬಕ್ಷಿ ಈ ಪ್ರಕರಣದ ಆರೋಪಿ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಎಎನ್‌ಐಗೆ ತಿಳಿಸಿವೆ.

ರಾಜ್ ಕುಂದ್ರಾ ಅವರನ್ನು ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅವರಿಂದ 48 ಟಿಬಿ ಮೌಲ್ಯದ ಚಿತ್ರಗಳು ಮತ್ತು ವಿಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ವಯಸ್ಕರ ಚಿತ್ರಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್‌ನಲ್ಲಿರುವ ರಾಜ್ ಕುಂದ್ರಾ ಅವರ ಖಾತೆಯಿಂದ ಯುನೈಟೆಡ್ ಬ್ಯಾಂಕ್ ಆಫ್ ಆಫ್ರಿಕಾದಲ್ಲಿ ಒಂದು ವಹಿವಾಟು ನಡೆದಿದೆ. ಅಶ್ಲೀಲ ವಿಷಯದ ಮಾರಾಟದಿಂದ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ರಾಜ್ ಕುಂದ್ರಾ ಅವರ ವಕೀಲ ಅಬದ್ ಪೋಂಡಾ, ಪೊಲೀಸರು ವಶಪಡಿಸಿಕೊಂಡಿರುವ ಚಿತ್ರಗಳು ಮತ್ತು ವಿಡಿಯೊಗಳನ್ನು ‘ಅಶ್ಲೀಲತೆ’ ಎಂದು ವರ್ಗೀಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್‌ಫ್ಲಿಕ್ಸ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದೇ ರೀತಿಯ ಕಂಟೆಂಟ್ ಲಭ್ಯವಿರುವುದರಿಂದ, ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಅಶ್ಲೀಲತೆ ವಿಷಯ ಬರಲು ಸಾಧ್ಯವಿಲ್ಲ ಎಂದು ವಕೀಲ ಅಬದ್ ಪೋಂಡಾ ಹೇಳಿದ್ದಾರೆ.

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಪೊಲೀಸರಿಗೆ ರಾಜ್ ಕುಂದ್ರಾ ವಿರುದ್ದ, ಉದ್ಯೋಗದ ಭರವಸೆ ನೀಡಿದ ನಂತರ ಅಶ್ಲೀಲ ಚಿತ್ರವೊಂದರಲ್ಲಿ ಭಾಗವಹಿಸಲು ಒತ್ತಾಯಿಸಲಾಯಿತು ಎಂದು ಆರೋಪ ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...