Homeಮುಖಪುಟರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

- Advertisement -
- Advertisement -

ರಾಜ್ ಕುಂದ್ರಾ ಬಂಧನದ ಬಳಿಕ ವಿಚಾರಣೆಗೆ ಹಾಜರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ,  ‘ಹಾಟ್‌ಶಾಟ್‌’ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ ಎಂದಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ  ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿರುವ ಮುಂಬೈ ಪೊಲೀಸರು, ಆಪ್‌ಗಳ ಮೂಲಕ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಉತ್ತರಿಸಿರುವ ಅವರು, ನನಗೆ ಆಪ್‌ನಲ್ಲಿರುವ ವಿಷಯಗಳ ಬಗ್ಗೆ ನಿಖರವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಶೃಂಗಾರ ಮತ್ತು ಅಶ್ಲೀಲತೆ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಒತ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಶಿಲ್ಪಾ ತನ್ನ ಪತಿ ರಾಜ್ ಕುಂದ್ರಾ ನಿರಪರಾಧಿ ಎಂದು ಅಪರಾಧ ವಿಭಾಗ ಪೋಲಿಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ತನ್ನ ಪತಿ ರಾಜ್ ಕುಂದ್ರಾ ಯಾವುದೇ ರೀತಿಯ ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಜೊತೆಗೆ ಆ್ಯಪ್‌ನಲ್ಲಿ ಭಾಗಿಯಾಗಿದ್ದ ಲಂಡನ್ ಮೂಲದ ರಾಜ್ ಕುಂದ್ರಾ ಅವರ ಸೋದರ ಮಾವ ಪ್ರದೀಪ್ ಬಕ್ಷಿ ಈ ಪ್ರಕರಣದ ಆರೋಪಿ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಎಎನ್‌ಐಗೆ ತಿಳಿಸಿವೆ.

ರಾಜ್ ಕುಂದ್ರಾ ಅವರನ್ನು ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅವರಿಂದ 48 ಟಿಬಿ ಮೌಲ್ಯದ ಚಿತ್ರಗಳು ಮತ್ತು ವಿಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ವಯಸ್ಕರ ಚಿತ್ರಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್‌ನಲ್ಲಿರುವ ರಾಜ್ ಕುಂದ್ರಾ ಅವರ ಖಾತೆಯಿಂದ ಯುನೈಟೆಡ್ ಬ್ಯಾಂಕ್ ಆಫ್ ಆಫ್ರಿಕಾದಲ್ಲಿ ಒಂದು ವಹಿವಾಟು ನಡೆದಿದೆ. ಅಶ್ಲೀಲ ವಿಷಯದ ಮಾರಾಟದಿಂದ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ರಾಜ್ ಕುಂದ್ರಾ ಅವರ ವಕೀಲ ಅಬದ್ ಪೋಂಡಾ, ಪೊಲೀಸರು ವಶಪಡಿಸಿಕೊಂಡಿರುವ ಚಿತ್ರಗಳು ಮತ್ತು ವಿಡಿಯೊಗಳನ್ನು ‘ಅಶ್ಲೀಲತೆ’ ಎಂದು ವರ್ಗೀಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್‌ಫ್ಲಿಕ್ಸ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದೇ ರೀತಿಯ ಕಂಟೆಂಟ್ ಲಭ್ಯವಿರುವುದರಿಂದ, ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಅಶ್ಲೀಲತೆ ವಿಷಯ ಬರಲು ಸಾಧ್ಯವಿಲ್ಲ ಎಂದು ವಕೀಲ ಅಬದ್ ಪೋಂಡಾ ಹೇಳಿದ್ದಾರೆ.

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಪೊಲೀಸರಿಗೆ ರಾಜ್ ಕುಂದ್ರಾ ವಿರುದ್ದ, ಉದ್ಯೋಗದ ಭರವಸೆ ನೀಡಿದ ನಂತರ ಅಶ್ಲೀಲ ಚಿತ್ರವೊಂದರಲ್ಲಿ ಭಾಗವಹಿಸಲು ಒತ್ತಾಯಿಸಲಾಯಿತು ಎಂದು ಆರೋಪ ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...