Homeಮುಖಪುಟರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

- Advertisement -
- Advertisement -

ರಾಜ್ ಕುಂದ್ರಾ ಬಂಧನದ ಬಳಿಕ ವಿಚಾರಣೆಗೆ ಹಾಜರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ,  ‘ಹಾಟ್‌ಶಾಟ್‌’ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ ಎಂದಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ  ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿರುವ ಮುಂಬೈ ಪೊಲೀಸರು, ಆಪ್‌ಗಳ ಮೂಲಕ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಉತ್ತರಿಸಿರುವ ಅವರು, ನನಗೆ ಆಪ್‌ನಲ್ಲಿರುವ ವಿಷಯಗಳ ಬಗ್ಗೆ ನಿಖರವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಶೃಂಗಾರ ಮತ್ತು ಅಶ್ಲೀಲತೆ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಒತ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಶಿಲ್ಪಾ ತನ್ನ ಪತಿ ರಾಜ್ ಕುಂದ್ರಾ ನಿರಪರಾಧಿ ಎಂದು ಅಪರಾಧ ವಿಭಾಗ ಪೋಲಿಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ತನ್ನ ಪತಿ ರಾಜ್ ಕುಂದ್ರಾ ಯಾವುದೇ ರೀತಿಯ ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಜೊತೆಗೆ ಆ್ಯಪ್‌ನಲ್ಲಿ ಭಾಗಿಯಾಗಿದ್ದ ಲಂಡನ್ ಮೂಲದ ರಾಜ್ ಕುಂದ್ರಾ ಅವರ ಸೋದರ ಮಾವ ಪ್ರದೀಪ್ ಬಕ್ಷಿ ಈ ಪ್ರಕರಣದ ಆರೋಪಿ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಎಎನ್‌ಐಗೆ ತಿಳಿಸಿವೆ.

ರಾಜ್ ಕುಂದ್ರಾ ಅವರನ್ನು ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅವರಿಂದ 48 ಟಿಬಿ ಮೌಲ್ಯದ ಚಿತ್ರಗಳು ಮತ್ತು ವಿಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ವಯಸ್ಕರ ಚಿತ್ರಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್‌ನಲ್ಲಿರುವ ರಾಜ್ ಕುಂದ್ರಾ ಅವರ ಖಾತೆಯಿಂದ ಯುನೈಟೆಡ್ ಬ್ಯಾಂಕ್ ಆಫ್ ಆಫ್ರಿಕಾದಲ್ಲಿ ಒಂದು ವಹಿವಾಟು ನಡೆದಿದೆ. ಅಶ್ಲೀಲ ವಿಷಯದ ಮಾರಾಟದಿಂದ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ರಾಜ್ ಕುಂದ್ರಾ ಅವರ ವಕೀಲ ಅಬದ್ ಪೋಂಡಾ, ಪೊಲೀಸರು ವಶಪಡಿಸಿಕೊಂಡಿರುವ ಚಿತ್ರಗಳು ಮತ್ತು ವಿಡಿಯೊಗಳನ್ನು ‘ಅಶ್ಲೀಲತೆ’ ಎಂದು ವರ್ಗೀಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್‌ಫ್ಲಿಕ್ಸ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದೇ ರೀತಿಯ ಕಂಟೆಂಟ್ ಲಭ್ಯವಿರುವುದರಿಂದ, ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಅಶ್ಲೀಲತೆ ವಿಷಯ ಬರಲು ಸಾಧ್ಯವಿಲ್ಲ ಎಂದು ವಕೀಲ ಅಬದ್ ಪೋಂಡಾ ಹೇಳಿದ್ದಾರೆ.

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಪೊಲೀಸರಿಗೆ ರಾಜ್ ಕುಂದ್ರಾ ವಿರುದ್ದ, ಉದ್ಯೋಗದ ಭರವಸೆ ನೀಡಿದ ನಂತರ ಅಶ್ಲೀಲ ಚಿತ್ರವೊಂದರಲ್ಲಿ ಭಾಗವಹಿಸಲು ಒತ್ತಾಯಿಸಲಾಯಿತು ಎಂದು ಆರೋಪ ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...