Homeಮುಖಪುಟರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

- Advertisement -
- Advertisement -

ರಾಜ್ ಕುಂದ್ರಾ ಬಂಧನದ ಬಳಿಕ ವಿಚಾರಣೆಗೆ ಹಾಜರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ,  ‘ಹಾಟ್‌ಶಾಟ್‌’ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ ಎಂದಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ  ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿರುವ ಮುಂಬೈ ಪೊಲೀಸರು, ಆಪ್‌ಗಳ ಮೂಲಕ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಉತ್ತರಿಸಿರುವ ಅವರು, ನನಗೆ ಆಪ್‌ನಲ್ಲಿರುವ ವಿಷಯಗಳ ಬಗ್ಗೆ ನಿಖರವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಶೃಂಗಾರ ಮತ್ತು ಅಶ್ಲೀಲತೆ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಒತ್ತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಶಿಲ್ಪಾ ತನ್ನ ಪತಿ ರಾಜ್ ಕುಂದ್ರಾ ನಿರಪರಾಧಿ ಎಂದು ಅಪರಾಧ ವಿಭಾಗ ಪೋಲಿಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ತನ್ನ ಪತಿ ರಾಜ್ ಕುಂದ್ರಾ ಯಾವುದೇ ರೀತಿಯ ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಜೊತೆಗೆ ಆ್ಯಪ್‌ನಲ್ಲಿ ಭಾಗಿಯಾಗಿದ್ದ ಲಂಡನ್ ಮೂಲದ ರಾಜ್ ಕುಂದ್ರಾ ಅವರ ಸೋದರ ಮಾವ ಪ್ರದೀಪ್ ಬಕ್ಷಿ ಈ ಪ್ರಕರಣದ ಆರೋಪಿ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಎಎನ್‌ಐಗೆ ತಿಳಿಸಿವೆ.

ರಾಜ್ ಕುಂದ್ರಾ ಅವರನ್ನು ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅವರಿಂದ 48 ಟಿಬಿ ಮೌಲ್ಯದ ಚಿತ್ರಗಳು ಮತ್ತು ವಿಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಹೆಚ್ಚಿನವು ವಯಸ್ಕರ ಚಿತ್ರಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್‌ನಲ್ಲಿರುವ ರಾಜ್ ಕುಂದ್ರಾ ಅವರ ಖಾತೆಯಿಂದ ಯುನೈಟೆಡ್ ಬ್ಯಾಂಕ್ ಆಫ್ ಆಫ್ರಿಕಾದಲ್ಲಿ ಒಂದು ವಹಿವಾಟು ನಡೆದಿದೆ. ಅಶ್ಲೀಲ ವಿಷಯದ ಮಾರಾಟದಿಂದ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು ರಾಜ್ ಕುಂದ್ರಾ ಅವರ ವಕೀಲ ಅಬದ್ ಪೋಂಡಾ, ಪೊಲೀಸರು ವಶಪಡಿಸಿಕೊಂಡಿರುವ ಚಿತ್ರಗಳು ಮತ್ತು ವಿಡಿಯೊಗಳನ್ನು ‘ಅಶ್ಲೀಲತೆ’ ಎಂದು ವರ್ಗೀಕರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್‌ಫ್ಲಿಕ್ಸ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದೇ ರೀತಿಯ ಕಂಟೆಂಟ್ ಲಭ್ಯವಿರುವುದರಿಂದ, ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಅಶ್ಲೀಲತೆ ವಿಷಯ ಬರಲು ಸಾಧ್ಯವಿಲ್ಲ ಎಂದು ವಕೀಲ ಅಬದ್ ಪೋಂಡಾ ಹೇಳಿದ್ದಾರೆ.

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಪೊಲೀಸರಿಗೆ ರಾಜ್ ಕುಂದ್ರಾ ವಿರುದ್ದ, ಉದ್ಯೋಗದ ಭರವಸೆ ನೀಡಿದ ನಂತರ ಅಶ್ಲೀಲ ಚಿತ್ರವೊಂದರಲ್ಲಿ ಭಾಗವಹಿಸಲು ಒತ್ತಾಯಿಸಲಾಯಿತು ಎಂದು ಆರೋಪ ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...