Homeಕರ್ನಾಟಕನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

- Advertisement -
- Advertisement -

ಮಠಾಧೀಶರಿಗೂ ಅಸಮಾನತೆಯ ಸೋಂಕು ತಗಲುತ್ತಿದೆ, ಈ ಬಗ್ಗೆ ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ವಿಷಾಧವನ್ನು ವ್ಯಕ್ತಪಡಿಸಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು ಎಂದು ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿರುವ ಚಿತ್ರದುರ್ಗ-ಚಿಕ್ಕಮಗಳೂರು ಅಂತರ್‌ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ ‘ಮಠಗಳ ಧಾರ್ಮಿಕ, ಸಾಹಿತ್ಯಕ, ಸಾಂಸ್ಕೃತಿಕ ಕೊಡುಗೆ’ ಗೋಷ್ಠಿಯಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು. ಆ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿದ್ದು ಎಂದು ಮೊದಲೇ ತಿಳಿದಿದ್ದರೆ ಕನಕದಾಸನಂತೆ ಪ್ರತಿಭಟನೆ ನಡೆಸಿ ದೇವಾಲಯ ಪ್ರವೇಶಿಸುತ್ತಿದ್ದೆ. ಆದರೆ ಆ ವಿಷಯ ನಂತರ ತಿಳಿಯಿತು, ದೇವಾಲಯ ತೊಳೆಯುವ ಬದಲು ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ ಎಂದು ಸಲಹೆಯನ್ನು ನೀಡಿದ್ದಾರೆ.

ಇತ್ತೀಚೆಗಷ್ಟೇ ವೈಕುಂಠ ಏಕಾದಶಿಯಂದು ದೇವಾಲಯದ ಆಹ್ವಾನದ ಮೇರೆಗೆ ನಾವು ಮತ್ತು ಶಾಂತವೀರ ಸ್ವಾಮೀಜಿ ದೇವಾಲಯದ ಗರ್ಭಗುಡಿಯ ಮುಂದಿನ ಪ್ರಾಂಗಣದಲ್ಲಿ ನಿಂತಿದ್ದೆವು. ಗರ್ಭಗುಡಿಗೆ ನಮ್ಮ ಪ್ರವೇಶವನ್ನು ತಡೆದರು. ಆದರೆ ಪೂಜಾರಿಗಳ ಕುಟುಂಬದ ಹೆಣ್ಣುಮಕ್ಕಳಿಗೆ ಅವಕಾಶ ಕಲ್ಪಿಸಿದರು. ಮಠಾಧೀಶರಿಗೇ ಹೀಗಾದರೆ ಹೇಗೆ? ಮುಂದೆಂದೂ ಬಾಗೂರಿನ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಹೋಗುವುದಿಲ್ಲ. ಬಸವಣ್ಣನವರು ಕೊಟ್ಟ ಇಷ್ಟಲಿಂಗ ಪೂಜೆ ಇಂದು ಜಾತಿಯಾಗಿ ಪರಿವರ್ತನೆಯಾಗಿದೆ. ಕೆಲವು ಮಠಗಳಲ್ಲಿ ಇನ್ನೂ ಅಸಮಾನತೆ ಎದ್ದು ಕಾಣುತ್ತಿದೆ. ಬಸವಣ್ಣನವರ ತತ್ವ ಆದರ್ಶ ಮತ್ತು ವಚನಗಳನ್ನು ನಾವು ಪಾಲಿಸಿದಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ, ಕರ್ನಾಟಕದ ಪರಂಪರೆಯಲ್ಲಿ ಮಠಗಳ ಪಾತ್ರ ಬಹಳ ದೊಡ್ಡದಾಗಿದೆ. ಹಿಂದಿನಿಂದಲೂ ವೀರಶೈವ ಲಿಂಗಾಯತ ಮಠಗಳು ತಳ ಸಮುದಾಯಗಳ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬೆಳೆಸಿವೆ ಎಂದು ಅವರು ಹೇಳಿದ್ದಾರೆ.

ನಾವು ದೇಗುಲಕ್ಕೆ ಹೋಗಿ ಬಂದ ಮೇಲೆ ಕುರುಬರ ಸ್ವಾಮೀಜಿ ಒಳಗೆ ಬಂದರೆಂದು ದೇಗುಲವನ್ನೇ ಸ್ವಚ್ಛಗೊಳಿಸಿದ್ದರು. ಇದರಿಂದ ಅಲ್ಲಿನವರು ನಾವು ಹೋಗಿದ್ದಕ್ಕೆ ಸ್ವಚ್ಛವಾಯಿತು ಎಂದು ವ್ಯಂಗ್ಯವಾಡಿದ್ದರು. ಹಾಗಾಗಿ ನಾವು ಚನ್ನಕೇಶವ ದೇಗುಲಕ್ಕೆ ನಾವು ಹೋಗಲ್ಲ ಎಂದು ನಿರ್ಧಾರ ತೆಗೆದುಕೊಂಡೆವು ಎಂದು ಹೇಳಿದ್ದಾರೆ.

ಇದೇ ವೇಳೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಮೀಸಲಾತಿ ಕೇಳಬೇಕಾದವರು ಸುಮ್ಮನಿದ್ದಾರೆ. ಆದರೆ, ಇಂದು ಉಳ್ಳವರೇ ಮೀಸಲಾತಿ ಕೇಳುತ್ತಿದ್ದಾರೆ. ಮೀಸಲಾತಿಗಾಗಿ ಉಳ್ಳವರು ಮತ್ತು ಬಡವರ ನಡುವೆ ದೊಡ್ಡ ಕಂದಕ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಸಾಹಿತಿ ಚಟ್ನಳ್ಳಿ ಮಹೇಶ್ ಇದ್ದರು.

ಇದನ್ನು ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...