Homeಕರ್ನಾಟಕದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

ದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

‍ನಾವೆಲ್ಲ ಸೇರಿ ಈಶ್ವರಪ್ಪ ಥರದ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು, ಇದು ನಮ್ಮ ಜವಾಬ್ದಾರಿ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿರುವ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸದನದಲ್ಲಿ ಇಂದು ಕಾಂಗ್ರೆಸ್‌ ನಾಯಕರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕಲಾಪವನ್ನು ಸ್ಪೀಕರ್‌ ಮುಂದೂಡಿದ್ದಾರೆ.

ಈ ಬಳಿಕ ಕಾಂಗ್ರೆಸ್‌ ಶಾಸಕಾಂಗ ಸಭೆ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯಪಾಲರು ಆ ಕೂಡಲೇ ಕೆ.ಎಸ್‌.ಈಶ್ವರಪ್ಪ ಅವರನ್ನು ವಜಾಗೊಳಿಸಬೇಕಿತ್ತು. ಮುಖ್ಯಮಂತ್ರಿಗಳು ಸಚಿವರಿಂದ ರಾಜೀನಾಮೆ ಪಡೆಯಬೇಕಿತ್ತು. ಮುಖ್ಯ ಕಾರ್ಯದರ್ಶಿ ಆಗಲಿ, ಪೊಲೀಸ್ ಮಹಾ ನಿರ್ದೇಶಕರಾಗಲಿ ಸ್ವಯಂ ಪ್ರೇರಿತವಾಗಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇದ್ಯಾವುದೂ ಆಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಾವು ಇಂದು ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದು, ಈ ವಿಚಾರ ಚರ್ಚೆ ಆಗದೇ, ಸರ್ಕಾರ ಉತ್ತರ ನೀಡುವ ಮುನ್ನವೇ ಸ್ಪೀಕರ್ ಅವರು ಆ ಸಚಿವರಿಗೆ ಉತ್ತರ ನೀಡಲು ಅವಕಾಶ ನೀಡಿದ್ದಾರೆ. ಸ್ಪೀಕರ್ ಅವರು ಪಕ್ಷಾತೀತವಾಗಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅವರು ಆ ರೀತಿ ನಡೆದುಕೊಂಡಿಲ್ಲ. ಇದು ಆರ್‌ಎಸ್‌ಎಸ್, ಬಿಜೆಪಿ ಅಜೆಂಡಾನಾ? ಸ್ಪೀಕರ್ ಅವರು ಏಕಪಕ್ಷೀಯವಾಗಿ ಒಂದು ಪಕ್ಷದ ಸದಸ್ಯರಂತೆ ನಡೆದುಕೊಳ್ಳುತ್ತಿದ್ದಾರೆ. ನಾಳೆ ಬೆಳಿಗ್ಗೆ ಒಳಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ. ಇಲ್ಲದಿದ್ದರೆ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಾದ ನಾವು ಈ ದೇಶದ ಗೌರವ, ಸ್ವಾಭಿಮಾನ ಉಳಿಸಲು ಕೆಲಸ ಮಾಡುತ್ತಿದ್ದೇವೆ. ನಾವು ಭಾರತೀಯರು. ನಮ್ಮ ದೇಶ, ರಾಷ್ಟ್ರಧ್ವಜ ರಕ್ಷಣೆ ವಿಚಾರದಲ್ಲಿ ನಮಗೆ ನಮ್ಮದೇ ಆದ ಜವಾಬ್ದಾರಿ ಇದೆ. ಅದನ್ನು ಸಂವಿಧಾನ ಪರಿಚ್ಛೇದ 51 ಎ ಮೂಲಕ ಕೊಟ್ಟಿದೆ. ಸಂವಿಧಾನಕ್ಕೆ ಬದ್ಧರಾಗಿ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಗೌರವಿಸಬೇಕು ಎಂದು ಇದರಲ್ಲಿ ಸ್ಪಷ್ಟವಾಗಿ ತಿಳಿಸಿದೆ ಎಂದು ವಿವರಿಸಿದ್ದಾರೆ.

ನಾವು ಜನಪ್ರತಿನಿಧಿಗಳಾಗಿ ಚುನಾವಣೆಗೆ ಸ್ಪರ್ಧಿಸುವಾಗ, ಶಾಸಕರಾಗಿ ಆಯ್ಕೆಯಾದ ಮೇಲೆ, ಸಚಿವರಾದ ನಂತರ ಸಂವಿಧಾನದ ಆಶಯ ಹಾಗೂ ಮಾರ್ಗದರ್ಶನದಲ್ಲಿ ಕೆಲಸ ಮಾಡುವಂತೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸುತ್ತಾರೆ. ನಾವು ದೇವರ ಹಾಗೂ ನಾವು ನಂಬಿಕೆ ಇಟ್ಟಿರುವವರ ಮೇಲೆ ಪ್ರಮಾಣ ಮಾಡುತ್ತೇವೆ. ಈ ರೀತಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದಿರುವ ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಕಾರ್ಯಕರ್ತರು, ನಾಯಕರು ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದ್ದು ನಡೆದಿದೆ. ಅವರನ್ನು ನಾವು ಜೈಲಿನಿಂದ ಬಿಡಿಸಿಕೊಂಡು ಬಂದ ಅನೇಕ ಉದಾಹರಣೆಗಳಿವೆ. ಇದೇ ವಿಧಾನಸಭೆಯಲ್ಲಿ ರೈತರ ಹೋರಾಟವನ್ನು ಕಾಂಗ್ರೆಸ್ ಕೃಪಾಪೋಷಿತ ನಾಟಕ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಮುಖ್ಯಮಂತ್ರಿಗಳು ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡಿದ್ದರು. ಈ ಎಲ್ಲ ಪ್ರಕರಣಗಳ ಪರಿಣಾಮವಾಗಿ ಇಂದು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಷ್ಟ್ರಧ್ವಜ ಹಾರಾಡುವ ಕಂಬದಲ್ಲಿ ಕೇಸರಿ ಧ್ವಜ ಹಾರಿಸಿದರು. ನಂತರ ಮಕ್ಕಳಿಗೆ ಕೇಸರಿ ಶಾಲು ಹಂಚಿದ್ದು ನಾನೇ, ನಾನು ಶಾಲುಗಳನ್ನು ಅಯೋಧ್ಯೆಯಿಂದ ತರಿಸಿಕೊಟ್ಟೆ ಎಂದು ಸಚಿವರೇ ಒಪ್ಪಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾವನೆ ಆದ ನಂತರವೂ ಅವರು ಅದನ್ನೇ ಹೇಳುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಇಷ್ಟಾದರೂ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.

ಅವರಿಂದ ದೇಶಕ್ಕೆ ಅಪಮಾನ ಆಗಲು ಅವಕಾಶ ನೀಡುತ್ತಿರುವುದೇಕೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯ ಏನು? ನೀವು, ನಾವೆಲ್ಲ ಸೇರಿ ಇಂತಹ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು. ಇದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...