Homeಕರ್ನಾಟಕದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

ದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

‍ನಾವೆಲ್ಲ ಸೇರಿ ಈಶ್ವರಪ್ಪ ಥರದ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು, ಇದು ನಮ್ಮ ಜವಾಬ್ದಾರಿ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿರುವ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸದನದಲ್ಲಿ ಇಂದು ಕಾಂಗ್ರೆಸ್‌ ನಾಯಕರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕಲಾಪವನ್ನು ಸ್ಪೀಕರ್‌ ಮುಂದೂಡಿದ್ದಾರೆ.

ಈ ಬಳಿಕ ಕಾಂಗ್ರೆಸ್‌ ಶಾಸಕಾಂಗ ಸಭೆ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯಪಾಲರು ಆ ಕೂಡಲೇ ಕೆ.ಎಸ್‌.ಈಶ್ವರಪ್ಪ ಅವರನ್ನು ವಜಾಗೊಳಿಸಬೇಕಿತ್ತು. ಮುಖ್ಯಮಂತ್ರಿಗಳು ಸಚಿವರಿಂದ ರಾಜೀನಾಮೆ ಪಡೆಯಬೇಕಿತ್ತು. ಮುಖ್ಯ ಕಾರ್ಯದರ್ಶಿ ಆಗಲಿ, ಪೊಲೀಸ್ ಮಹಾ ನಿರ್ದೇಶಕರಾಗಲಿ ಸ್ವಯಂ ಪ್ರೇರಿತವಾಗಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇದ್ಯಾವುದೂ ಆಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಾವು ಇಂದು ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದು, ಈ ವಿಚಾರ ಚರ್ಚೆ ಆಗದೇ, ಸರ್ಕಾರ ಉತ್ತರ ನೀಡುವ ಮುನ್ನವೇ ಸ್ಪೀಕರ್ ಅವರು ಆ ಸಚಿವರಿಗೆ ಉತ್ತರ ನೀಡಲು ಅವಕಾಶ ನೀಡಿದ್ದಾರೆ. ಸ್ಪೀಕರ್ ಅವರು ಪಕ್ಷಾತೀತವಾಗಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅವರು ಆ ರೀತಿ ನಡೆದುಕೊಂಡಿಲ್ಲ. ಇದು ಆರ್‌ಎಸ್‌ಎಸ್, ಬಿಜೆಪಿ ಅಜೆಂಡಾನಾ? ಸ್ಪೀಕರ್ ಅವರು ಏಕಪಕ್ಷೀಯವಾಗಿ ಒಂದು ಪಕ್ಷದ ಸದಸ್ಯರಂತೆ ನಡೆದುಕೊಳ್ಳುತ್ತಿದ್ದಾರೆ. ನಾಳೆ ಬೆಳಿಗ್ಗೆ ಒಳಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ. ಇಲ್ಲದಿದ್ದರೆ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಾದ ನಾವು ಈ ದೇಶದ ಗೌರವ, ಸ್ವಾಭಿಮಾನ ಉಳಿಸಲು ಕೆಲಸ ಮಾಡುತ್ತಿದ್ದೇವೆ. ನಾವು ಭಾರತೀಯರು. ನಮ್ಮ ದೇಶ, ರಾಷ್ಟ್ರಧ್ವಜ ರಕ್ಷಣೆ ವಿಚಾರದಲ್ಲಿ ನಮಗೆ ನಮ್ಮದೇ ಆದ ಜವಾಬ್ದಾರಿ ಇದೆ. ಅದನ್ನು ಸಂವಿಧಾನ ಪರಿಚ್ಛೇದ 51 ಎ ಮೂಲಕ ಕೊಟ್ಟಿದೆ. ಸಂವಿಧಾನಕ್ಕೆ ಬದ್ಧರಾಗಿ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಗೌರವಿಸಬೇಕು ಎಂದು ಇದರಲ್ಲಿ ಸ್ಪಷ್ಟವಾಗಿ ತಿಳಿಸಿದೆ ಎಂದು ವಿವರಿಸಿದ್ದಾರೆ.

ನಾವು ಜನಪ್ರತಿನಿಧಿಗಳಾಗಿ ಚುನಾವಣೆಗೆ ಸ್ಪರ್ಧಿಸುವಾಗ, ಶಾಸಕರಾಗಿ ಆಯ್ಕೆಯಾದ ಮೇಲೆ, ಸಚಿವರಾದ ನಂತರ ಸಂವಿಧಾನದ ಆಶಯ ಹಾಗೂ ಮಾರ್ಗದರ್ಶನದಲ್ಲಿ ಕೆಲಸ ಮಾಡುವಂತೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸುತ್ತಾರೆ. ನಾವು ದೇವರ ಹಾಗೂ ನಾವು ನಂಬಿಕೆ ಇಟ್ಟಿರುವವರ ಮೇಲೆ ಪ್ರಮಾಣ ಮಾಡುತ್ತೇವೆ. ಈ ರೀತಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದಿರುವ ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಕಾರ್ಯಕರ್ತರು, ನಾಯಕರು ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದ್ದು ನಡೆದಿದೆ. ಅವರನ್ನು ನಾವು ಜೈಲಿನಿಂದ ಬಿಡಿಸಿಕೊಂಡು ಬಂದ ಅನೇಕ ಉದಾಹರಣೆಗಳಿವೆ. ಇದೇ ವಿಧಾನಸಭೆಯಲ್ಲಿ ರೈತರ ಹೋರಾಟವನ್ನು ಕಾಂಗ್ರೆಸ್ ಕೃಪಾಪೋಷಿತ ನಾಟಕ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಮುಖ್ಯಮಂತ್ರಿಗಳು ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡಿದ್ದರು. ಈ ಎಲ್ಲ ಪ್ರಕರಣಗಳ ಪರಿಣಾಮವಾಗಿ ಇಂದು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಷ್ಟ್ರಧ್ವಜ ಹಾರಾಡುವ ಕಂಬದಲ್ಲಿ ಕೇಸರಿ ಧ್ವಜ ಹಾರಿಸಿದರು. ನಂತರ ಮಕ್ಕಳಿಗೆ ಕೇಸರಿ ಶಾಲು ಹಂಚಿದ್ದು ನಾನೇ, ನಾನು ಶಾಲುಗಳನ್ನು ಅಯೋಧ್ಯೆಯಿಂದ ತರಿಸಿಕೊಟ್ಟೆ ಎಂದು ಸಚಿವರೇ ಒಪ್ಪಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾವನೆ ಆದ ನಂತರವೂ ಅವರು ಅದನ್ನೇ ಹೇಳುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಇಷ್ಟಾದರೂ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.

ಅವರಿಂದ ದೇಶಕ್ಕೆ ಅಪಮಾನ ಆಗಲು ಅವಕಾಶ ನೀಡುತ್ತಿರುವುದೇಕೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯ ಏನು? ನೀವು, ನಾವೆಲ್ಲ ಸೇರಿ ಇಂತಹ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು. ಇದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...