Homeಕರ್ನಾಟಕರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

’ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸುವುದಿಲ್ಲ.’

- Advertisement -
- Advertisement -

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಇದೇ ವೇಳೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಚಿವರಿಗೆ ಈ ಕುರಿತು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು.

 ಇಂಡಿಯಾ ಟುಡೇ ನ್ಯೂಸ್ ನಿರ್ದೇಶಕ ರಾಹುಲ್ ಕನ್ವಾಲ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಜೆ.ಪಿ.ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

“ಇದು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ.. ಕೆಲವೊಮ್ಮೆ ಏನಾಗುತ್ತದೆ ಎಂದರೆ ಜನ ಅತಿ ಉತ್ಸಾಹಿಗಳಾಗಿ ಬಿಡುತ್ತಾರೆ. ಅವರಿಗೆ ಗೊತ್ತಿರುತ್ತದೆ ಈಗ ಪೋನ್ ಬರುತ್ತದೆ ಎಂದು. ನಾನು ಕರೆ ಮಾಡಿದೆ ಅವರು ಏನೇನೋ ಹೇಳಲು ಆರಂಭಿಸಿದ್ದರು ಶಿವಕುಮಾರ್‌ ಹಾಗಂದರು.. ಅದು ಇದು ಎಂದು. ತಕ್ಷಣ ನಾನು ಏನು ಹೇಳಬೇಡಿ ಎಂದು ಖಡಕ್ ಆಗಿ ತಿಳಿಸಿದೆ” ಎಂದು ಹೇಳಿದ್ದಾರೆ.

ಬಳಿಕ ನೀವು ಅವರನನ್ನು ಟೈಟ್ ಮಾಡಿದ್ರಿ ಎಂಬ ರಾಹುಲ್ ಕನ್ವಾಲ್ ಹೇಳಿಕೆಗೆ ಹೌದು. ಆದರೆ, ಅದನ್ನು ಟೈಟ್ ಎನ್ನುವ ಹಾಗಿಲ್ಲ. ಅವರು ಹಿರಿಯ ನಾಯಕರು. ಅವರೇ ಹೀಗೆಲ್ಲಾ ತಪ್ಪು ತಪ್ಪಾಗಿ ಹೇಳಿ ನೀಡಬಾರದು ಎಂದಿದ್ದಾರೆ.

“ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಂಡು ಈಶ್ವರಪ್ಪ ಅವರನ್ನು ಈಗಲೇ ವಜಾ ಮಾಡಬೇಕಿತ್ತು. ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದನ್ನು ದೇಶದ್ರೋಹವೆಂದು ಗುರುತಿಸಿ ಜೈಲು ಶಿಕ್ಷೆ ವಿಧಿಸಬೇಕು. ಕೂಡಲೇ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.


ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...