Homeಕರ್ನಾಟಕರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

’ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸುವುದಿಲ್ಲ.’

- Advertisement -
- Advertisement -

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಇದೇ ವೇಳೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಚಿವರಿಗೆ ಈ ಕುರಿತು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು.

 ಇಂಡಿಯಾ ಟುಡೇ ನ್ಯೂಸ್ ನಿರ್ದೇಶಕ ರಾಹುಲ್ ಕನ್ವಾಲ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಜೆ.ಪಿ.ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎಸಗಿದ ಈಶ್ವರಪ್ಪ; ಸದನದಲ್ಲಿ ಸ್ಪೀಕರ್‌ ಏಕಪಕ್ಷೀಯ ನಡೆ- ಡಿ.ಕೆ.ಶಿವಕುಮಾರ್‌ ಆರೋಪ

“ಇದು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ.. ಕೆಲವೊಮ್ಮೆ ಏನಾಗುತ್ತದೆ ಎಂದರೆ ಜನ ಅತಿ ಉತ್ಸಾಹಿಗಳಾಗಿ ಬಿಡುತ್ತಾರೆ. ಅವರಿಗೆ ಗೊತ್ತಿರುತ್ತದೆ ಈಗ ಪೋನ್ ಬರುತ್ತದೆ ಎಂದು. ನಾನು ಕರೆ ಮಾಡಿದೆ ಅವರು ಏನೇನೋ ಹೇಳಲು ಆರಂಭಿಸಿದ್ದರು ಶಿವಕುಮಾರ್‌ ಹಾಗಂದರು.. ಅದು ಇದು ಎಂದು. ತಕ್ಷಣ ನಾನು ಏನು ಹೇಳಬೇಡಿ ಎಂದು ಖಡಕ್ ಆಗಿ ತಿಳಿಸಿದೆ” ಎಂದು ಹೇಳಿದ್ದಾರೆ.

ಬಳಿಕ ನೀವು ಅವರನನ್ನು ಟೈಟ್ ಮಾಡಿದ್ರಿ ಎಂಬ ರಾಹುಲ್ ಕನ್ವಾಲ್ ಹೇಳಿಕೆಗೆ ಹೌದು. ಆದರೆ, ಅದನ್ನು ಟೈಟ್ ಎನ್ನುವ ಹಾಗಿಲ್ಲ. ಅವರು ಹಿರಿಯ ನಾಯಕರು. ಅವರೇ ಹೀಗೆಲ್ಲಾ ತಪ್ಪು ತಪ್ಪಾಗಿ ಹೇಳಿ ನೀಡಬಾರದು ಎಂದಿದ್ದಾರೆ.

“ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಂಡು ಈಶ್ವರಪ್ಪ ಅವರನ್ನು ಈಗಲೇ ವಜಾ ಮಾಡಬೇಕಿತ್ತು. ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದನ್ನು ದೇಶದ್ರೋಹವೆಂದು ಗುರುತಿಸಿ ಜೈಲು ಶಿಕ್ಷೆ ವಿಧಿಸಬೇಕು. ಕೂಡಲೇ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.


ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...