Homeಕರ್ನಾಟಕಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಪ್ರಧಾನಿ ಮೋದಿಯವರೇ, ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ" (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ- ಸಿದ್ದರಾಮಯ್ಯ

- Advertisement -
- Advertisement -

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿಗೆ ಸಂಬಂಧಿಸಿದಂತೆ ಕಾನೂನು ಮೀರಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಗ್ರಾಮೀಣ ಸುಮಾರ್ಗ ಯೋಜನೆಗೆ ಪದೇ ಪದೇ ಮನವಿ ಮಾಡ್ತಿದ್ದೇನೆ‌. ಆದರೆ ಇನ್ನೂ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. ಯಡಿಯೂರಪ್ಪನವರು 32 ಬಿಜೆಪಿ ಶಾಸಕರಿಗೆ ತಲಾ 20 ರಿಂದ 23 ಕೋಟಿ ರೂಪಾಯಿಗಳನ್ನು,‌ 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂಪಾಯಿಗಳನ್ನು, ಕಾಂಗ್ರೆಸ್‌ನ 30 ಮಂದಿ ಶಾಸಕರಿಗೆ 5 ಕೋಟಿ ರೂಪಾಯಿಗಳನ್ನು ಹಾಗೂ ಜೆಡಿಎಸ್‌‌ನ 18 ಮಂದಿ ಶಾಸಕರಿಗೆ ಸರ್ಕಾರದಿಂದ ತಲಾ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡವಂತೆ ಆದೇಶ ಹೊರಡಿಸಿದ್ದಾರೆ” ಎಂದು ಈಶ್ವರಪ್ಪ ಆರೋಪಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಬಿಜೆಪಿ ಮುಖಂಡರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

“ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ  ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗ ಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ  ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ’ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

“ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ  ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...