Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...