Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....