Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...