Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...