Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...