Homeಕರ್ನಾಟಕಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದ ವಿವಾದದ ಕುರಿತು ಗುರುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, “ನಮ್ಮದು ಶಿಸ್ತಿನ ಪಕ್ಷ. ಶಿಸ್ತು ಉಲ್ಲಂಘನೆ ಆಗಬಾರದು. ಸಿಎಂ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ, ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, “ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಲಿ” ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

“ಕಳೆದ ವರ್ಷ ಕೋವಿಡ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇತ್ತೀಚೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಶಾಸಕರ ಒತ್ತಡದ ಮೇರೆಗೆ ಶಾಸಕರಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ. ಸಿಎಂ ಹಣಕಾಸು ಖಾತೆಯ ಸಚಿವರೂ ಆಗಿರುವುದರಿಂದ ಅವರೇ ಶಾಸಕರಿಗೆ ಹಣವನ್ನು ಬಿಡುಗಡೆ ಮಾಡಿದ್ದಾರೆ” ಎಂದು ಯಡಿಯೂರಪ್ಪ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

“ಅನುದಾನ ಬಿಡುಗಡೆ ವಿಚಾರದಲ್ಲಿ ಆಕ್ಷೇಪಗಳಿದ್ದರೆ ಅದನ್ನು ಸಿಎಂ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಇದು ಆಡಳಿತಾತ್ಮಕ ವಿಷಯ ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ಸೂಕ್ತ ಅಲ್ಲ. ನಮ್ಮದು ಶಿಸ್ತಿನ ಪಕ್ಷ. ಶಿಸ್ತು ಉಲ್ಲಂಘನೆ ಆಗಬಾರದು. ಸಿಎಂ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ, ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ” ಎಂದು ಬೊಮ್ಮಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....