Homeಮುಖಪುಟಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರ್‌ಡಿಪಿಆರ್ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದು, ಒಂದು ವರ್ಷದಿಂದ ತಮಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಹಚರರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ (ಆರ್‌ಡಿಪಿಆರ್) ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಸುಮಾರು ಒಂದು ವರ್ಷದಿಂದ ಬಾಕಿ ಇರುವ ಬಿಲ್‌ಗಳನ್ನು ಪಾವತಿಸದೆ “ಕಮಿಷನ್”ಗಾಗಿ ಈಶ್ವರಪ್ಪನವರು ಪೀಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಆರೋಪಗಳನ್ನು ತಳ್ಳಿಹಾಕಿರುವ ಈಶ್ವರಪ್ಪ, ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ತಿಳಿಸಿದ್ದಾರೆ. “ನನಗೆ ಈ ವ್ಯಕ್ತಿ ಪರಿಚಯವಿಲ್ಲ” ಎಂದು ಈಶ್ವರಪ್ಪ ತಿಳಿಸಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

“ಈ ದೂರಿನ ಬಗ್ಗೆ ನನಗೆ ತಿಳಿದ ತಕ್ಷಣ, ನಾನು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ. ಶೀಘ್ರದಲ್ಲೇ ನೋಟಿಸ್ ನೀಡಲಾಗುವುದು” ಎಂದಿದ್ದಾರೆ. ಆದರೆ ಯಾವ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ ಅಥವಾ ಯಾವ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂಬುದನ್ನು ವಿವರಿಸಲಿಲ್ಲ ಎಂದು ವರದಿ ಹೇಳಿದೆ.

ಪಾಟೀಲ್ ಅವರು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಹೌದು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ಗಿರಿರಾಜ್ ಸಿಂಗ್ ಅವರ ಕಚೇರಿ, ದೂರನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗಿದೆ ಎಂದಿದ್ದಾರೆ. ಪಾಟೀಲ್ ಅವರು ಮಾರ್ಚ್‌ನಲ್ಲಿ ದೆಹಲಿಯ ನಿವಾಸದಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿದ್ದರು.

ಬಿಜೆಪಿ ಆಡಳಿತವಿರುವ ಹಿಂಡಲ ಗ್ರಾಮ ಪಂಚಾಯಿತಿಯಲ್ಲಿ ತಾನು ಮತ್ತು ಇತರ ಆರು ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ನಡೆಸಿದ್ದಾಗಿ ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ದೇವಸ್ಥಾನದ ಜಾತ್ರೆ ಇದ್ದು, ಆ ಸಮಯದಲ್ಲಿ ಈಶ್ವರಪ್ಪ ಅವರನ್ನು ಭೇಟಿ ಮಾಡಿ ರಸ್ತೆ ಕಾಮಗಾರಿಗೆ ಅನುದಾನ ನೀಡುವಂತೆ ಕೋರಿದ್ದೆವು. ನಂತರ ಕಾಮಗಾರಿ ಆದೇಶ ನೀಡುವುದಾಗಿ ಹೇಳಿ ಕಾಮಗಾರಿ ಆರಂಭಿಸುವಂತೆ ನನಗೆ ಹಾಗೂ ಇತರೆ ಗುತ್ತಿಗೆದಾರರಿಗೆ ಸಚಿವರು ಸೂಚಿಸಿದ್ದರು” ಪತ್ರದಲ್ಲಿ ಪಾಟೀಲ್ ವಿವರಿಸಿದ್ದಾರೆ.

“ನಾನು ಮತ್ತು ಇತರೆ ಗುತ್ತಿಗೆದಾರರು ಸೇರಿ 108 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬಹುತೇಕ ರಸ್ತೆಗಳ ಕಾಮಗಾರಿಗೆ 4 ಕೋಟಿ ರೂ. ಈ ಹಣವನ್ನು ಬಡ್ಡಿಯ ಮೇಲೆ ಪಡೆಯಲಾಗಿದೆ. ಸಾಲಗಾರರು ಮರುಪಾವತಿಗೆ ಒತ್ತಾಯಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ ಮನೋಳ್ಕರ್ ಮಾತನಾಡಿ, “ಕಾಮಗಾರಿ ತ್ವರಿತವಾಗಿ ನಡೆದಿದ್ದರೂ ಸರಕಾರದಿಂದ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ.

ಗುತ್ತಿಗೆದಾರರು ಬಡ್ಡಿಗೆ ಸಾಲ ಮಾಡಿ ಇದೀಗ ದಿವಾಳಿಯ ಅಂಚಿಗೆ ಬಂದಿದ್ದು, ಗುತ್ತಿಗೆದಾರರಿಗೆ ಹಣ ನೀಡುವುದು ಸರಕಾರದ ಕರ್ತವ್ಯವಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ. 2021ರ ಮೇ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಬಿಲ್‌ಗಳನ್ನು ತೆರವುಗೊಳಿಸುವಂತೆ ಈಶ್ವರಪ್ಪ ಅವರನ್ನು ಹಲವು ಬಾರಿ ಭೇಟಿ ಮಾಡಿ ಒತ್ತಾಯಿಸಲಾಗಿದೆ. ಆದರೆ, ಕಾಲಾಂತರದಲ್ಲಿ 15 ಲಕ್ಷ ರೂಪಾಯಿ ಕಮಿಷನ್ ನೀಡುವಂತೆ ಬೇಡಿಕೆ ಇಡಲಾಗಿದೆ. ಈಶ್ವರಪ್ಪ ಅವರ ಸಂಗಡಿಗರು ಕೂಡ ಒಟ್ಟು ಬಿಲ್ ನ ಶೇ.40ರಷ್ಟು ಮೊತ್ತವನ್ನು ಒಂದೇ ಬಾರಿ ಪಾವತಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

“ನಾನು ಸಚಿವರನ್ನು ಕನಿಷ್ಠ 80 ಬಾರಿ ಭೇಟಿ ಮಾಡಿದ್ದೇನೆ” ಎಂದು ಪಾಟೀಲ್ ತಿಳಿಸಿದ್ದಾರೆ. “ಬಿಲ್ಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಯಾವಾಗಲೂ ಹೇಳುತ್ತಿದ್ದರು, ಆದರೆ ಅವರ ಸಹಚರರು ಹೆಚ್ಚಿನ ಹಣವನ್ನು ಕೇಳುತ್ತಿದ್ದರು” ಎಂದಿದ್ದಾರೆ.

ಪಾಟೀಲ್ ಅವರು ಕರ್ನಾಟಕದ ಪ್ರಭಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ ಸಹಾಯ ಮಾಡುವ ಭರವಸೆ ಪಡೆದಿದ್ದಾರೆ. ಪಾಟೀಲ್ ಈಗ ಪ್ರಧಾನಿ ಕಚೇರಿಯ ಪ್ರತಿಕ್ರಿಯೆಗೆ ಕಾಯುತ್ತಾ ಕುಳಿತ್ತಿದ್ದಾರೆ.

 ಕಾಂಗ್ರೆಸ್ ನಾಯಕರು ತಿರುಗೇಟು

ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಸಂಬಂಧ ಹಲವು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ಭ್ರಷ್ಟಾಚಾರದ ಬಿಸಿ ಈಗ ತಟ್ಟಿದೆ. ಭ್ರಷ್ಟಾಚಾರಕ್ಕೆ ಬಿಜೆಪಿಯವರಿಗೆ ರಾಷ್ಟ್ರೀಯ ಪರವಾನಗಿ ಸಿಕ್ಕಿದೆಯಾ? ಇಡಿ, ಸಿಬಿಐ, ಐಟಿ ಬಿಜೆಪಿ ನಾಯಕರಿಗೆ ಸಂಬಂಧಿಸುವುದಿಲ್ಲ. ಒಬ್ಬ ಶಾಸಕನ ಮಗಳು ಸುಳ್ಳು ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರ ಮಾಡಿಸಿದ್ದಾರೆ. ಪ್ರಮಾಣ ಪತ್ರದ ಮೇಲೆ 80 ಲಕ್ಷ ರೂ. ಸಾಲ ಪಡೆದಿದ್ದಾರೆ. ಇದನ್ನು ಸಾಮಾನ್ಯ ಜನರು ಮಾಡಿದ್ದರೆ ಜೈಲು ಸೇರುತ್ತಿದ್ದರು ಎಂದಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿ, “ಸಚಿವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬೂತ್ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರದ ಭ್ರಷ್ಟಾಚಾರ ನೋಡಿಯೂ ಮೋದಿ ಸುಮ್ಮನಿದ್ದಾರೆ” ಎಂದು ಕುಟುಕಿದ್ದಾರೆ.

ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, “ಈ‌ ಹಿಂದೆ ಈಶ್ವರಪ್ಪನವರೇ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಗುತ್ತಿಗೆದಾರರು ಕೂಡ ಶೇ 40ರ ಕಮಿಷನ್ ಬಗ್ಗೆ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕೇವಲ ಯಡಿಯೂರಪ್ಪ, ಮುಖ್ಯಮಂತ್ರಿ ಬೊಮ್ಮಾಯಿ ಮಾತ್ರವಲ್ಲ, ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ” ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್​ನ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿದ್ದು, “ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಆರೋಪಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ತಕ್ಷಣ ರಾಜೀನಾಮೆ ಕೊಡಬೇಕು. ಆರೋಪ ಮುಕ್ತರಾಗುವ ತನಕ ಸಂಪುಟದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ‌ಅವರು ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಿದ್ದು, “ಹಿಂದುತ್ವದ ಬಗ್ಗೆ ಹಗಲಿರುಳೂ ಪುಂಖಾನುಪುಂಕವಾಗಿ ಮಾತನಾಡಿ ಕೊನೆಯಲ್ಲಿ ಆ ಹಿಂದೂ ಸಂಘಟನೆಯ ಮುಖಂಡರ ಬಳಿಯೇ 40% ಕಮಿಷನ್ ಕೇಳುವ ಈಶ್ವರಪ್ಪ ಹಿಂದೂವಾದಿಯಲ್ಲ, ಆತನೋರ್ವ ಹಿಂದೂ ವ್ಯಾಧಿ” ಎಂದು  ಟೀಕಿಸಿದ್ದಾರೆ.

“ರಾಷ್ಟ್ರಧ್ವಜವನ್ನೇ ಅವಮಾನಿಸಿದ ಈತ ಹಿಂದೂಗಳ ಹಿತ ಕಾಯುತ್ತಾನೆ ಎಂಬುದು ಶತಮಾನದ ಜೋಕುಗಳಲ್ಲಿ ಒಂದು. 40% ಗಿರಾಕಿ ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಲಿ ಮತ್ತು ಆತನ ಮೇಲೆ ಸೂಕ್ತ ತನಿಖೆಯಾಗಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿರಿ: ರಾಜ್ಯ ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್‌ ಸರ್ಕಾರ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...